ಬೆಂಗಳೂರಲ್ಲಿ ಡೆಂಗ್ಯೂ ಹೆಚ್ಚಳ: ಎನ್ಎಸ್1 VS ಎಲಿಸಾ ಪರೀಕ್ಷೆ
ಬೆಂಗಳೂರು, ಜುಲೈ 30: ಡೆಂಗ್ಯೂ ರೋಗದ ಲಕ್ಷಣಗಳು ಕಂಡುಬಂದರೆ ಮೊದಲು 'ಎಲಿಸಾ'(Enzyme-Linked Immunosorbent Assay) ಪರೀಕ್ಷೆ ಮಾಡಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆದರೆ ಕೆಲವು ವೈದ್ಯರು ಎಲಿಸಾ ಟೆಸ್ಟ್ ನಿಧಾನ ಗತಿಯಲ್ಲಿ ಆಗುತ್ತದೆ, ಜೊತೆಗೆ ಹೆಚ್ಚು ಹಣವನ್ನೂ ಕೂಡ ತೆರಬೇಕಾಗುತ್ತದೆ. ಎನ್ಎಸ್1 ಟೆಸ್ಟ್ನಿಂದ ಸುಲಭವಾಗಿ ಪತ್ತೆಯಾಗಲಿದೆ ಎಂದು ಹೇಳುತ್ತಿದ್ದಾರೆ.
ಆರೋಗ್ಯ ಇಲಾಖೆಯು ಎಲಿಸಾ ಪರೀಕ್ಷೆಯಿಂದ ಮಾತ್ರ ಡೆಂಗ್ಯೂವನ್ನು ಪತ್ತೆ ಹಚ್ಚಬಹುದಾಗಿದೆ. ಆದರೆ ಎಲ್ಲಾ ಆಸ್ಪತ್ರೆಗಳಲ್ಲಿ ಎನ್ಎಸ್1 ಮೂಲಕ ಪತ್ತೆ ಹಚ್ಚುತ್ತಿದ್ದಾರೆ.

ಅದು ಒಳ್ಳೆಯದೇ ಆದರೆ ತತ್ತಕ್ಷಣಕ್ಕೆ ರೋಗ ಪತ್ತೆಯಾಗುವುದಿಲ್ಲ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಎಲಿಸಾ ಟೆಸ್ಟ್ ಗೆ 700-1200 ರೂ ಬೇಕಾಗುತ್ತದೆ ಹೆಚ್ಚುವರಿ ಖರ್ಚು ಎಂದು ವೈದ್ಯರು ಹಾಗೂ ರೋಗಿಗಳು ಇಬ್ಬರೂ ಆಲೋಚಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಎನ್ಎಸ್1 ಪರೀಕ್ಷೆಯನ್ನೇ ಮಾಡುತ್ತಾರೆ.
ನಿತ್ಯ 80ಕ್ಕೂ ಹೆಚ್ಚಿನ ಬ್ಲಡ್ ಸ್ಯಾಂಪಲ್ಗಳನ್ನು ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಸದ್ಯಕ್ಕೆ ಮಣಿಪಾಲ್ ಆಸ್ಪತ್ರೆಯಲ್ಲಿ ಎಲಿಸಾ ಟೆಸ್ಟ್ ನಡೆಸಲಾಗುತ್ತಿದೆ. ರೋಗಿಗಳ ಪರಿಸ್ಥಿತಿಯನ್ನು ಅರಿತುಕೊಂಡು ಟೆಸ್ಟ್ಗಾಗಿ ಆಸ್ಪತ್ರೆಗೆ ಬ್ಲಡ್ ಸ್ಯಾಂಪಲ್ಗಳನ್ನು ಕಳುಹಿಸಿಕೊಡಲಾಗುತ್ತಿದೆ. ಆರೋಗ್ಯಾಧಿಕಾರಗಳ ಮಾಹಿತಿ ಪ್ರಕಾರ ಎಲ್ಲಾ ಆಸ್ಪತ್ರೆಗಳಲ್ಲೂ ಎಲಿಸಾ ಟೆಸ್ಟ್ ಕಡ್ಡಾಯವಾಗಿ ಮಾಡಲೇಬೇಕಾಗಿದೆ.
ನಗರದಲ್ಲಿ ದಿನೇ ದಿನೇ ಹೋದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಕರ್ನಾಟಕದಲ್ಲಿರುವ ಒಟ್ಟಾರೆ ಟೆಂಗ್ಯೂ ಪ್ರಕರಣಗಳ ಅರ್ಧದಷ್ಟು ಭಾಗ ಬೆಂಗಳೂರಲ್ಲೇ ಇರುವುದು ಆತಂಕದ ಸಂಗತಿಯೇ ಆಗಿದೆ. ಕರ್ನಾಟಕದಲ್ಲಿ ಜನವರಿಯಿಂದ ಇಲ್ಲಿಯವರೆಗೆ 6,014 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ, ಅದರಲ್ಲಿ 3,822 ಪ್ರಕರಣಗಳು ಬೆಂಗಳೂರಲ್ಲೇ ಇದೆ ಎನ್ನುವುದು ಪತ್ತೆಯಾಗಿದೆ.
ಕಳೆದ ಹದಿನೈದು ದಿನಗಳಿಂದೀಚೆಗೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇರುವ ಡೆಂಗ್ಯೂ ಪ್ರಕರಣಗಳಿಗಿಂದ ದುಪ್ಪಟ್ಟು ರೋಗಿಗಳು ಹೆಚ್ಚಾಗಿದ್ದಾರೆ.
-
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications