KSRTC:ಮಹಾವೀರ ಜಯಂತಿ, ಗುಡ್ ಫ್ರೈಡೇಯಂದು ಹೆಚ್ಚುವರಿ ಬಸ್
ಬೆಂಗಳೂರು, ಮಾರ್ಚ್ 28: ಬೆಂಗಳೂರು: ಮಹಾವೀರ ಜಯಂತಿ ಹಾಗೂ ಗುಡ್ ಪ್ರೈಡೇ ಹಬ್ಬದ ಅಂಗವಾಗಿ ಕೆಎಸ್ ಆರ್ಟಿಸಿ 800ರಿಂದ 850 ಹೆಚ್ಚುವರಿ ಬಸ್ಗಳನ್ನು ರಾಜ್ಯಾದ್ಯಂತ ಓಡಿಸಲು ತೀರ್ಮಾನಿಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಾರ್ಚ್ 28 ರಿಂದ ಮಾರ್ಚ್ 31ರವರೆಗೆ ಬೆಂಗಳೂರಿನಿಂದ ರಾಜ್ಯದ ಇತರೆಡೆ ಹಾಗೂ ಹೊರರಾಜ್ಯಗಳಿಗೆ ಹೆಚ್ಚುವರಿ ಬಸ್ಗಳು ತೆರಳಲಿದ್ದು, ಏಪ್ರಿಲ್ 1 ರಿಂದ ರಾಜ್ಯದ ನಾನಾ ಭಾಗಗಳಿಂದ ಹಾಗೂ ಹೊರರಾಜ್ಯದ ಪ್ರಮುಖ ನಗರಗಳಿಂದ ಬೆಂಗಳೂರಿಗೆ ವಾಪಸ್ ಸಂಚರಿಸಲಿವೆ.
ವಿಶೇಷ ಬಸ್ಗಳು ಬೆಂಗಳೂರಿನ ಕೆಂಪೇಗೌಡ್ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮತ್ತಿತರ ಪ್ರದೇಶಗಳಿಗೆ ತೆರಳಲಿವೆ.

ಇನ್ನು ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿಗೆ ವಿಶೇಷ ಬಸ್ಗಳು ಹೊರಡಲಿವೆ.
ಇನ್ನು ಪ್ರೀಮಿಯರ್ ವಿಶೇಷ ಬಸ್ಗಳು ಶಾಂತಿನಗರ ಡಿಪೋ ಬಸ್ ನಿಲ್ದಾಣದಿಂದ ಮಧುರೈ, ಕುಂಬಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಹಾಗೂ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ವಿವಿಧೆಡೆ ತೆರಳಲಿವೆ.
ಇದಲ್ಲದೇ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ ನಾಲ್ಕನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ, ಮಲ್ಲೇಶ್ವರ 18ನೇ ಕ್ರಾಸ್, ಬನಶಂಕರಿ, ಜೀವನಬಿಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಸೆಟ್ಲೈಟ್ ಬಸ್ ನಿಲ್ದಾಣದಿಂದ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮತ್ತಿತರ ಸ್ಥಳಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ.
ಏಕಕಾಲಕ್ಕೆ ನಾಲ್ಕು ಟಿಕೆಟ್ ಗಳನ್ನು ಕಾಯ್ದರಿಸಿದಲ್ಲಿ ಶೇ.5ರಷ್ಟು ಹಾಗೂ ಮರು ಪ್ರವಾಸದ ಟಿಕೆಟ್ (ರಿಟರ್ನ್ ಜರ್ನಿ) ಕಾಯ್ದಿರಿಸಿದರೆ ಶೇ.10ರಷ್ಟು ರಿಯಾಯಿತಿಯನ್ನು ಕೆಎಸ್ಆರ್ ಟಿಸಿ ಘೋಷಿಸಿದೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications