11.30ವರೆಗೆ ಬಸ್ ಓಡಿಸಲು ಜನಾಗ್ರಹ
ವಿಶ್ವದಲ್ಲೇ ಐಟಿ ಸಿಟಿ ಎಂದು ಹೆಸರುವಾಸಿಯಾದ ಬೆಂಗಳೂರಿನಲ್ಲಿ ರಾತ್ರಿ 10 ಗಂಟೆಯ ನಂತರ ಬಿಎಂಟಿಸಿ ಬಸ್ ಸಂಚಾರ ಇಲ್ಲ. ಬೆಂಗಳೂರಿನ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದ್ದರೂ ಬಿಎಂಟಿಸಿ ಮಾತ್ರ ತನಗೆ ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿ ತೆಪ್ಪಗೆ ಕುಳಿತುಕೊಂಡಿದೆ.
ಜುಲೈ 2013ರಲ್ಲಿ ರಾತ್ರಿ 11.30ವರೆಗೆ ರಸ್ತೆಯಲ್ಲಿ ಬಸ್ ಸಂಚಾರವನ್ನು ಆರಂಭಿಸುತ್ತೇವೆ ಎಂದು ಬಿಎಂಟಿಸಿ ಹೇಳಿತ್ತು. ಬಿಎಂಟಿಸಿ ಈ ಸಂಚಾರವನ್ನು ಆರಂಭಿಸಿದ್ದರೂ,ಜನದಟ್ಟನೆ ಇರುವ ಹೆಚ್ಚಿನ ಭಾಗದಲ್ಲಿ ರಾತ್ರಿ 10 ಗಂಟೆಗೆ ಸಂಚಾರವನ್ನು ನಿಲ್ಲಿಸುತ್ತಿದ್ದು,ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳು ದುಬಾರಿ ಬೆಲೆ ತೆತ್ತು ಆಟೋದಲ್ಲಿ ಮನೆಗೆ ಬರಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.

ಈ ಮಧ್ಯೆ ಬೆಂಗಳೂರು ಪೊಲೀಸರು ನೈಟ್ ಲೈಫ್ ಅವಧಿಯನ್ನು ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಿದ್ದಾರೆ.ರಾತ್ರಿಯ ಬಿಎಂಟಿಸಿ ಬಸ್ ಸಂಚಾರದ ಸಮಸ್ಯೆಯನ್ನು ಬಿಎಂಟಿಸಿ ಅಧಿಕಾರಿಗಳಿಗೆ ತಿಳಿಸಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.ಈ ಸಮಸ್ಯೆಗೆ ಪರಿಹಾರವಾಗಿ ಯಾವೆಲ್ಲಾ ರಸ್ತೆಯಲ್ಲಿ ರಾತ್ರಿ ಹೆಚ್ಚಿನ ಜನದಟ್ಟಣೆ ಇದೆಯೋ ಆ ರಸ್ತೆಯಲ್ಲಿ ಮಾತ್ರ ಬಸ್ ಓಡಿಸುತ್ತೇವೆ ಎಂದು ಹೇಳಿದ್ದಾರೆ.[ಬೆಂಗಳೂರು-ಮೈಸೂರು ಹಾದಿಯಲ್ಲಿ 93 ಅತ್ಯಾಧುನಿಕ ಬಸ್]
ರಾತ್ರಿಯ ಬಿಎಂಟಿಸಿ ಬಸ್ ಸಂಚಾರದ ಸಮಸ್ಯೆಯನ್ನು ಎಲ್ಲಾ ಜನರಿಗೆ ತಿಳಿಸಲು ಶಶಾಂಕ್ ಕುಮಾರ್ ಎಂಬವರು ಆನ್ಲೈನ್ನಲ್ಲಿ ಪಿಟಿಷನ್ ಸಲ್ಲಿಸಿದ್ದಾರೆ.ಯಾವೆಲ್ಲಾ ರಸ್ತೆಯಲ್ಲಿ ರಾತ್ರಿ ಬಸ್ ಸಂಚಾರ ಬೇಕು ಎಂಬುದನ್ನು ಜನರು ಇಲ್ಲಿ ನಮೂದಿಸಿ ತಮ್ಮ ಭಾಗದಲ್ಲಿ ಬಸ್ ಓಡುವಂತೆ ಮಾಡಬಹುದು ಎಂದು ವಿನಂತಿಸಿಕೊಂಡಿದ್ದಾರೆ.
ಆನ್ಲೈನಲ್ಲಿ ಪಿಟಿಷನ್ಗೆ ಇಲ್ಲಿ ಸಹಿ ಹಾಕಿ:www.change.org
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications