Get Updates
Get notified of breaking news, exclusive insights, and must-see stories!

ಹೊಸಕೋಟೆಗೆ ನಮ್ಮ ಮೆಟ್ರೋ ರೈಲು ಸಂಪರ್ಕ ಕಲ್ಪಿಸಿ

ಬೆಂಗಳೂರು, ಆಗಸ್ಟ್ 30; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣಕ್ಕೆ ನಮ್ಮ ಮೆಟ್ರೋ ರೈಲು ಸೇವೆವನ್ನು ವಿಸ್ತರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಲಾಗಿದೆ.

ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಈ ಕುರಿತು ಮನವಿ ಸಲ್ಲಿಕೆ ಮಾಡಿದ್ದಾರೆ. ಮೈಸೂರು ರಸ್ತೆ-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿಗೆ ಮುಖ್ಯಮಂತ್ರಿಗಳ ಮೂಲಕ ಎಂಟಿಬಿ ನಾಗರಾಜ್ ಮನವಿ ಸಲ್ಲಿಸಿದರು.

ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿ. ಮೀ. ದೂರದಲ್ಲಿದೆ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್‌ಗೆ ಹೊಸಕೋಟೆ ಪಟ್ಟಣ ತೀರ ಹತ್ತಿರದಲ್ಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Extend Namma Metro Train Service Till Hoskote

ವೈಟ್ ಫೀಲ್ಡ್ ಸುತ್ತ-ಮುತ್ತ ನೂರಾರು ಐಟಿ ಕಂಪನಿಗಳು ಬೀಡು ಬಿಟ್ಟಿವೆ. ವಾಣಿಜ್ಯ ಕಟ್ಟಡಗಳು, ಬೃಹತ್ ಕಟ್ಟಡಗಳು ಇದ್ದು ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿವೆ. ಇದರಿಂದಾಗಿ ಹೊಸಕೋಟೆ ಪಟ್ಟಣದ ಸುತ್ತ- ಮುತ್ತ ತೀವ್ರ ಸಂಚಾರದ ಒತ್ತಡ ನಿರ್ಮಾಣವಾಗಿದೆ ಎಂದು ವಿವರಿಸಲಾಗಿದೆ.

ಹೊಸಕೋಟೆ ಪಟ್ಟಣವು ಮಾಲೂರು ಕೈಗಾರಿಕಾ ಪ್ರದೇಶ, ನಂದಗುಡಿ ಕೈಗಾರಿಕಾ ಪ್ರದೇಶ ಮತ್ತು ಕೋಲಾರ ಕೈಗಾರಿಕಾ ಪ್ರದೇಶಗಳ ಹೆಬ್ಬಾಗಿಲು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬದಲಿ ರಸ್ತೆಯು ಹೊಸಕೋಟೆ ತಾಲ್ಲೂಕಿನ ಮೂಲಕ ಹಾದು ಹೋಗುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

Recommended Video

      ಬಹು ನಿರೀಕ್ಷಿತ ಮೈಸೂರು ರಸ್ತೆ- ಕೆಂಗೇರಿ ಮೆಟ್ರೋ ಮಾರ್ಗ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

      ಹೊಸಕೋಟೆ ಪಟ್ಟಣದಲ್ಲಿನ ಜೀವನ ಮಟ್ಟ ಬೆಂಗಳೂರು ನಗರಕ್ಕಿಂತ ಕಡಿಮೆ ಇರುವುದರಿಂದ ಬೆಂಗಳೂರಿನ ಉದ್ಯೋಗಿಗಳು ಬೆಂಗಳೂರು ಹೊರವಲಯ ಹಾಗೂ ಹೊಸಕೋಟೆ ಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ವಾಸವಾಗಿದ್ದು, ಅವರು ಬೆಂಗಳೂರಿಗೆ ತೆರಳಲು ನಮ್ಮ ಮೆಟ್ರೋ ರೈಲು ಸಂಚಾರ ಕಲ್ಪಿಸಿದರೆ ಸಹಾಯಕವಾಗಲಿದೆ.

      ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾದರೆ ರಸ್ತೆ ಮಾರ್ಗದ ಮೇಲೆ ಇರುವ ಅತೀ ದೊಡ್ಡ ಒತ್ತಡವನ್ನು ತಪ್ಪಿಸಬಹುದು. ಹಾಗಾಗಿ, ಮೆಟ್ರೋ ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಎಂಟಿಬಿ ನಾಗರಾಜ್ ಮನವಿ ಮಾಡಿದ್ದಾರೆ.

      ನಮ್ಮ ಮೆಟ್ರೋ ಯೋಜನೆ ವಿವರಗಳು; ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಯೋಜನೆಯನ್ನು ಒಟ್ಟು 3ಹಂತವಾಗಿ ವಿಭಾಗ ಮಾಡಲಾಗಿದೆ. 2ನೇ ಹಂತದ ಕಾಮಗಾರಿಗಳು ಸದ್ಯ ಪ್ರಗತಿಯಲ್ಲಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಹ ಮೆಟ್ರೋ ಸಂಪರ್ಕ ಕಲ್ಪಿಸಲಾಗುತ್ತದೆ.

      ಮೆಟ್ರೋ 2ನೇ ಹಂತವು 75 ಕಿ. ಮೀ. ಮಾರ್ಗವನ್ನು ಹೊಂದಿದೆ. 61 ನಿಲ್ದಾಣಗಳು ಈ ಹಂತದಲ್ಲಿ ಸೇರಿವೆ. ಈಗಿರುವ ನೇರಳೆ ಮತ್ತು ಹಸಿರು ಮಾರ್ಗವನ್ನು ನಾಲ್ಕು ದಿಕ್ಕುಗಳಲ್ಲಿ 34.6 ಕಿ. ಮೀ. ವಿಸ್ತರಣೆ ಮಾಡಲಾಗುತ್ತಿದ್ದು, ಎರಡು ಹೊಸ ಮಾರ್ಗಗಳು ಸಹ ಇದರಲ್ಲಿ ಸೇರಿವೆ.

      ಎರಡು ಹೊಸ ಮಾರ್ಗವಾದ ಗೊಟ್ಟಿಗೆರೆ-ನಾಗವಾರ 21.25 ಕಿ. ಮೀ. ಮತ್ತು ಆರ್‌. ವಿ. ರಸ್ತೆ-ಬೊಮ್ಮಸಂದ್ರ 19.15 ಕಿ. ಮೀ. ಉದ್ದವನ್ನು ಹೊಂದಿವೆ. 2ನೇ ಹಂತದ ಯೋಜನೆಯ ಒಟ್ಟು ವೆಚ್ಚ 30,695 ಕೋಟಿ ರೂ.ಗಳು.

      ನಮ್ಮ ಮೆಟ್ರೋ 3ನೇ ಹಂತ; ಇನ್ನು ನಮ್ಮ ಮೆಟ್ರೋ 3ನೇ ಹಂತ ಇನ್ನೂ ಡಿಪಿಆರ್ ತಯಾರಿ ಹಂತದಲ್ಲಿದೆ. ಓಆರ್‌ಆರ್ ಪಶ್ಚಿಮ ಮಾರ್ಗ ಕೆಂಪಾಪುರದಿಂದ ಜೆ. ಪಿ. ನಗರ 4ನೇ ಹಂತಕ್ಕೆ 32.16 ಕಿ. ಮೀ. ಮತ್ತು ಮಾಗಡಿ ರಸ್ತೆ ಮಾರ್ಗವು ಹೊಸಹಳ್ಳಿ ಮೆಟ್ರೋ ನಿಲ್ದಾಣದಿಂದ ಕಡಬಗೆರೆ 12.82 ಕಿ. ಮೀ. ಇರಲಿದೆ. ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಇದನ್ನು ನಿರ್ಮಿಸಲು ಯೋಜಿಸಲಾಗಿದ್ದು, ಡಿಪಿಆರ್ ತಯಾರಿ ನಡೆಯುತ್ತಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+