ಹೊಸಕೋಟೆಗೆ ನಮ್ಮ ಮೆಟ್ರೋ ರೈಲು ಸಂಪರ್ಕ ಕಲ್ಪಿಸಿ
ಬೆಂಗಳೂರು, ಆಗಸ್ಟ್ 30; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣಕ್ಕೆ ನಮ್ಮ ಮೆಟ್ರೋ ರೈಲು ಸೇವೆವನ್ನು ವಿಸ್ತರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಲಾಗಿದೆ.
ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಈ ಕುರಿತು ಮನವಿ ಸಲ್ಲಿಕೆ ಮಾಡಿದ್ದಾರೆ. ಮೈಸೂರು ರಸ್ತೆ-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿಗೆ ಮುಖ್ಯಮಂತ್ರಿಗಳ ಮೂಲಕ ಎಂಟಿಬಿ ನಾಗರಾಜ್ ಮನವಿ ಸಲ್ಲಿಸಿದರು.
ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿ. ಮೀ. ದೂರದಲ್ಲಿದೆ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್ಗೆ ಹೊಸಕೋಟೆ ಪಟ್ಟಣ ತೀರ ಹತ್ತಿರದಲ್ಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವೈಟ್ ಫೀಲ್ಡ್ ಸುತ್ತ-ಮುತ್ತ ನೂರಾರು ಐಟಿ ಕಂಪನಿಗಳು ಬೀಡು ಬಿಟ್ಟಿವೆ. ವಾಣಿಜ್ಯ ಕಟ್ಟಡಗಳು, ಬೃಹತ್ ಕಟ್ಟಡಗಳು ಇದ್ದು ಲಕ್ಷಾಂತರ ಅಪಾರ್ಟ್ಮೆಂಟ್ಗಳಿವೆ. ಇದರಿಂದಾಗಿ ಹೊಸಕೋಟೆ ಪಟ್ಟಣದ ಸುತ್ತ- ಮುತ್ತ ತೀವ್ರ ಸಂಚಾರದ ಒತ್ತಡ ನಿರ್ಮಾಣವಾಗಿದೆ ಎಂದು ವಿವರಿಸಲಾಗಿದೆ.
ಹೊಸಕೋಟೆ ಪಟ್ಟಣವು ಮಾಲೂರು ಕೈಗಾರಿಕಾ ಪ್ರದೇಶ, ನಂದಗುಡಿ ಕೈಗಾರಿಕಾ ಪ್ರದೇಶ ಮತ್ತು ಕೋಲಾರ ಕೈಗಾರಿಕಾ ಪ್ರದೇಶಗಳ ಹೆಬ್ಬಾಗಿಲು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬದಲಿ ರಸ್ತೆಯು ಹೊಸಕೋಟೆ ತಾಲ್ಲೂಕಿನ ಮೂಲಕ ಹಾದು ಹೋಗುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
Recommended Video
ಹೊಸಕೋಟೆ ಪಟ್ಟಣದಲ್ಲಿನ ಜೀವನ ಮಟ್ಟ ಬೆಂಗಳೂರು ನಗರಕ್ಕಿಂತ ಕಡಿಮೆ ಇರುವುದರಿಂದ ಬೆಂಗಳೂರಿನ ಉದ್ಯೋಗಿಗಳು ಬೆಂಗಳೂರು ಹೊರವಲಯ ಹಾಗೂ ಹೊಸಕೋಟೆ ಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ವಾಸವಾಗಿದ್ದು, ಅವರು ಬೆಂಗಳೂರಿಗೆ ತೆರಳಲು ನಮ್ಮ ಮೆಟ್ರೋ ರೈಲು ಸಂಚಾರ ಕಲ್ಪಿಸಿದರೆ ಸಹಾಯಕವಾಗಲಿದೆ.
ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾದರೆ ರಸ್ತೆ ಮಾರ್ಗದ ಮೇಲೆ ಇರುವ ಅತೀ ದೊಡ್ಡ ಒತ್ತಡವನ್ನು ತಪ್ಪಿಸಬಹುದು. ಹಾಗಾಗಿ, ಮೆಟ್ರೋ ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಎಂಟಿಬಿ ನಾಗರಾಜ್ ಮನವಿ ಮಾಡಿದ್ದಾರೆ.
ನಮ್ಮ ಮೆಟ್ರೋ ಯೋಜನೆ ವಿವರಗಳು; ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಯೋಜನೆಯನ್ನು ಒಟ್ಟು 3ಹಂತವಾಗಿ ವಿಭಾಗ ಮಾಡಲಾಗಿದೆ. 2ನೇ ಹಂತದ ಕಾಮಗಾರಿಗಳು ಸದ್ಯ ಪ್ರಗತಿಯಲ್ಲಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಹ ಮೆಟ್ರೋ ಸಂಪರ್ಕ ಕಲ್ಪಿಸಲಾಗುತ್ತದೆ.
ಮೆಟ್ರೋ 2ನೇ ಹಂತವು 75 ಕಿ. ಮೀ. ಮಾರ್ಗವನ್ನು ಹೊಂದಿದೆ. 61 ನಿಲ್ದಾಣಗಳು ಈ ಹಂತದಲ್ಲಿ ಸೇರಿವೆ. ಈಗಿರುವ ನೇರಳೆ ಮತ್ತು ಹಸಿರು ಮಾರ್ಗವನ್ನು ನಾಲ್ಕು ದಿಕ್ಕುಗಳಲ್ಲಿ 34.6 ಕಿ. ಮೀ. ವಿಸ್ತರಣೆ ಮಾಡಲಾಗುತ್ತಿದ್ದು, ಎರಡು ಹೊಸ ಮಾರ್ಗಗಳು ಸಹ ಇದರಲ್ಲಿ ಸೇರಿವೆ.
ಎರಡು ಹೊಸ ಮಾರ್ಗವಾದ ಗೊಟ್ಟಿಗೆರೆ-ನಾಗವಾರ 21.25 ಕಿ. ಮೀ. ಮತ್ತು ಆರ್. ವಿ. ರಸ್ತೆ-ಬೊಮ್ಮಸಂದ್ರ 19.15 ಕಿ. ಮೀ. ಉದ್ದವನ್ನು ಹೊಂದಿವೆ. 2ನೇ ಹಂತದ ಯೋಜನೆಯ ಒಟ್ಟು ವೆಚ್ಚ 30,695 ಕೋಟಿ ರೂ.ಗಳು.
ನಮ್ಮ ಮೆಟ್ರೋ 3ನೇ ಹಂತ; ಇನ್ನು ನಮ್ಮ ಮೆಟ್ರೋ 3ನೇ ಹಂತ ಇನ್ನೂ ಡಿಪಿಆರ್ ತಯಾರಿ ಹಂತದಲ್ಲಿದೆ. ಓಆರ್ಆರ್ ಪಶ್ಚಿಮ ಮಾರ್ಗ ಕೆಂಪಾಪುರದಿಂದ ಜೆ. ಪಿ. ನಗರ 4ನೇ ಹಂತಕ್ಕೆ 32.16 ಕಿ. ಮೀ. ಮತ್ತು ಮಾಗಡಿ ರಸ್ತೆ ಮಾರ್ಗವು ಹೊಸಹಳ್ಳಿ ಮೆಟ್ರೋ ನಿಲ್ದಾಣದಿಂದ ಕಡಬಗೆರೆ 12.82 ಕಿ. ಮೀ. ಇರಲಿದೆ. ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಇದನ್ನು ನಿರ್ಮಿಸಲು ಯೋಜಿಸಲಾಗಿದ್ದು, ಡಿಪಿಆರ್ ತಯಾರಿ ನಡೆಯುತ್ತಿದೆ.
-
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications