Get Updates
Get notified of breaking news, exclusive insights, and must-see stories!

ಬಿ.ಇಡಿ ಕೋರ್ಸ್ ಶುಲ್ಕ ಪಾವತಿ ಅವಧಿ ವಿಸ್ತರಣೆ

ಬಿ.ಇಡಿ ಕೋರ್ಸ್‌ಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್‌ವೊಂದು ಬಂದಿದೆ. ಕರ್ನಾಟಕ ಸರ್ಕಾರದ ಕೇಂದ್ರೀಕೃತ ದಾಖಲಾತಿ ಘಟಕವು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್‌ವೊಂದನ್ನು ಕೊಟ್ಟಿದೆ. ಬಿ.ಇಡಿ ಕೋರ್ಸ್‌ಗಳ ಶುಲ್ಕ ಪಾವತಿಯ ಅವಧಿಯನ್ನು ವಿಸ್ತರಿಸಲಾಗಿದೆ. ಎಸ್‌.ಎಂ ಕೃಷ್ಣ ಅವರ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮರಣಾರ್ಥವಾಗಿ ರಾಜ್ಯ ಸರ್ಕಾರವು ಇಂದು (ಡಿಸೆಂಬರ್‌ 11ಕ್ಕೆ) ಸಾರ್ವತ್ರಿಕ ರಜೆ ಘೋಷಿಸಿತ್ತು. ಹೀಗಾಗಿ, ಇಂದು ಕೊನೆಯಾಗಿದ್ದ ಹಲವು ಪ್ರಮುಖ ವಿಷಯಗಳು ಹಾಗೂ ದಿನಾಂಕಗಳನ್ನು ಬದಲಾಯಿಸಲಾಗಿದೆ.

2024 -25ನೇ ಸಾಲಿನ ಬಿ.ಇಡಿ ಕೋರ್ಸ್‌ನ ವ್ಯಾಸಾಂಗಕ್ಕಾಗಿ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 1ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಡಿಸೆಂಬರ್‌ 6ಕ್ಕೆ ಪ್ರಕಟಿಸಲಾಗಿತ್ತು. ಈ ವಿವರವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಇನ್ನು ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆನ್‌ಲೂನ್‌ನ ಚಲನ್‌ ಡೌನ್‌ಲೋಡ್‌ ಮಾಡಿಕೊಂಡು ನಿಗದಿತ ದಾಖಲಾತಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕಿನಲ್ಲಿ ಪಾವತಿಸಿ ಡಿಸೆಂಬರ್‌ 11ರ ವರೆಗೆ ವಿಸ್ತರಿಸಲಾಗಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ಈ ಅವಧಿಯನ್ನು ಇದೀಗ ಡಿಸೆಂಬರ್‌ 12ರ ವರೆಗೆ (ಗುರುವಾರದ) ವರೆಗೆ ವಿಸ್ತರಿಸಿ ಆದೇಶ ಮಾಡಲಾಗಿದೆ.

Extension of B Ed course fee payment period

ಮಂಗಳೂರು ಪರೀಕ್ಷೆ ಮುಂದೂಡಿಕೆ: ಇನ್ನು ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಇನ್ನು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್‌ 11ರಂದು ನಿಗದಿ ಮಾಡಲಾಗಿದ್ದ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಮಂಗಳೂರು ವಿಶ್ವ ವಿದ್ಯಾಲಯದ ಎಲ್ಲಾ ಸಾತ್ನಕ (ಯುಜಿ) ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮಂಗಳೂರು ವಿಶ್ವವಿದ್ಯಾಲಯವು ಹೇಳಿದೆ. ಇದೀಗ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷೆ ದಿನಾಂಕಗಳ ಬಗ್ಗೆ ಶೀಘ್ರವೇ ತಿಳಿಸುವುದಾಗಿ ಹೇಳಲಾಗಿದೆ.

ಎಸ್‌ಎಂ ಕೃಷ್ಣ ಸ್ಮಾರಕ ನಿರ್ಮಾಣ: ಇನ್ನು ಎಸ್‌.ಎಂ ಕೃಷ್ಣ ಅವರ ಸ್ಮಾರಕ ನಿರ್ಮಾಣದ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ನಾನು 24 ವರ್ಷಗಳಿಂದ ಅವರೊಂದಿಗೆ ಒಡನಾಟವೊಂದಿದ್ದೆ. ಕೃಷ್ಣ ಅವರಿಂದ ಹಲವು ವಿಷಯಗಳನ್ನು ಕಲಿತಿದ್ದೇನೆ. ಯಾರನ್ನೂ ಅವರು ಟೀಕೆ ಮಾಡದೆಯೇ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಇಂದಿಗೂ ಉಳಿದಿದ್ದಾರೆ. ಟೀಕಿಸುವವರು ಅವರನ್ನು ನೋಡಿ ಕಲಿಯುವುದು ಇದೆ. ಅವರು ಅಧಿಕಾರ ಅವಧಿಯಲ್ಲಿ ಜಾರಿ ಮಾಡಿರುವ ಹಲವು ಯೋಜನೆಗಳು ಇಂದಿಗೂ ಸಹ ಅಚ್ಚಳಿಯದೆ ಉಳಿದಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎಸ್‌ಎಂ ಕೃಷ್ಣ ಅವರು ಅಸುನೀಗಿದ್ದಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಇನ್ನು ಎಸ್‌ ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎನ್ನುವ ಮನವಿಯೂ ಕೇಳಿ ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+