ಬಿ.ಇಡಿ ಕೋರ್ಸ್ ಶುಲ್ಕ ಪಾವತಿ ಅವಧಿ ವಿಸ್ತರಣೆ
ಬಿ.ಇಡಿ ಕೋರ್ಸ್ಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ವೊಂದು ಬಂದಿದೆ. ಕರ್ನಾಟಕ ಸರ್ಕಾರದ ಕೇಂದ್ರೀಕೃತ ದಾಖಲಾತಿ ಘಟಕವು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ವೊಂದನ್ನು ಕೊಟ್ಟಿದೆ. ಬಿ.ಇಡಿ ಕೋರ್ಸ್ಗಳ ಶುಲ್ಕ ಪಾವತಿಯ ಅವಧಿಯನ್ನು ವಿಸ್ತರಿಸಲಾಗಿದೆ. ಎಸ್.ಎಂ ಕೃಷ್ಣ ಅವರ ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಮರಣಾರ್ಥವಾಗಿ ರಾಜ್ಯ ಸರ್ಕಾರವು ಇಂದು (ಡಿಸೆಂಬರ್ 11ಕ್ಕೆ) ಸಾರ್ವತ್ರಿಕ ರಜೆ ಘೋಷಿಸಿತ್ತು. ಹೀಗಾಗಿ, ಇಂದು ಕೊನೆಯಾಗಿದ್ದ ಹಲವು ಪ್ರಮುಖ ವಿಷಯಗಳು ಹಾಗೂ ದಿನಾಂಕಗಳನ್ನು ಬದಲಾಯಿಸಲಾಗಿದೆ.
2024 -25ನೇ ಸಾಲಿನ ಬಿ.ಇಡಿ ಕೋರ್ಸ್ನ ವ್ಯಾಸಾಂಗಕ್ಕಾಗಿ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 1ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಡಿಸೆಂಬರ್ 6ಕ್ಕೆ ಪ್ರಕಟಿಸಲಾಗಿತ್ತು. ಈ ವಿವರವನ್ನು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿತ್ತು. ಇನ್ನು ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆನ್ಲೂನ್ನ ಚಲನ್ ಡೌನ್ಲೋಡ್ ಮಾಡಿಕೊಂಡು ನಿಗದಿತ ದಾಖಲಾತಿ ಶುಲ್ಕವನ್ನು ಎಸ್ಬಿಐ ಬ್ಯಾಂಕಿನಲ್ಲಿ ಪಾವತಿಸಿ ಡಿಸೆಂಬರ್ 11ರ ವರೆಗೆ ವಿಸ್ತರಿಸಲಾಗಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ಈ ಅವಧಿಯನ್ನು ಇದೀಗ ಡಿಸೆಂಬರ್ 12ರ ವರೆಗೆ (ಗುರುವಾರದ) ವರೆಗೆ ವಿಸ್ತರಿಸಿ ಆದೇಶ ಮಾಡಲಾಗಿದೆ.

ಮಂಗಳೂರು ಪರೀಕ್ಷೆ ಮುಂದೂಡಿಕೆ: ಇನ್ನು ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಇನ್ನು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 11ರಂದು ನಿಗದಿ ಮಾಡಲಾಗಿದ್ದ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಮಂಗಳೂರು ವಿಶ್ವ ವಿದ್ಯಾಲಯದ ಎಲ್ಲಾ ಸಾತ್ನಕ (ಯುಜಿ) ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮಂಗಳೂರು ವಿಶ್ವವಿದ್ಯಾಲಯವು ಹೇಳಿದೆ. ಇದೀಗ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷೆ ದಿನಾಂಕಗಳ ಬಗ್ಗೆ ಶೀಘ್ರವೇ ತಿಳಿಸುವುದಾಗಿ ಹೇಳಲಾಗಿದೆ.
ಎಸ್ಎಂ ಕೃಷ್ಣ ಸ್ಮಾರಕ ನಿರ್ಮಾಣ: ಇನ್ನು ಎಸ್.ಎಂ ಕೃಷ್ಣ ಅವರ ಸ್ಮಾರಕ ನಿರ್ಮಾಣದ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ನಾನು 24 ವರ್ಷಗಳಿಂದ ಅವರೊಂದಿಗೆ ಒಡನಾಟವೊಂದಿದ್ದೆ. ಕೃಷ್ಣ ಅವರಿಂದ ಹಲವು ವಿಷಯಗಳನ್ನು ಕಲಿತಿದ್ದೇನೆ. ಯಾರನ್ನೂ ಅವರು ಟೀಕೆ ಮಾಡದೆಯೇ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಇಂದಿಗೂ ಉಳಿದಿದ್ದಾರೆ. ಟೀಕಿಸುವವರು ಅವರನ್ನು ನೋಡಿ ಕಲಿಯುವುದು ಇದೆ. ಅವರು ಅಧಿಕಾರ ಅವಧಿಯಲ್ಲಿ ಜಾರಿ ಮಾಡಿರುವ ಹಲವು ಯೋಜನೆಗಳು ಇಂದಿಗೂ ಸಹ ಅಚ್ಚಳಿಯದೆ ಉಳಿದಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಎಸ್ಎಂ ಕೃಷ್ಣ ಅವರು ಅಸುನೀಗಿದ್ದಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಇನ್ನು ಎಸ್ ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎನ್ನುವ ಮನವಿಯೂ ಕೇಳಿ ಬಂದಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications