ನಿಗೂಢವಾಗಿ ಕಾಣೆಯಾದ ಟೆಕ್ಕಿ, ಡ್ರೋಣ್ ಕ್ಯಾಮೆರಾದಿಂದ ಹುಡುಕಾಟ
ಬೆಂಗಳೂರು: ಓಎಲ್ ಎಕ್ಸ್ ನಲ್ಲಿ ಕಾರು ಮಾರಾಟಕ್ಕಿಟ್ಟು ಗ್ರಾಹಕರನ್ನು ಭೇಟಿಯಾಗಲು ಹೋಗಿದ್ದ ಟೆಕ್ಕಿ 23 ದಿನಗಳಿಂದ ನಿಗೂಢವಾಗಿ ಕಣ್ಮರೆಯಾಗಿದ್ದಾರೆ.
ಕಳೆದ ಡಿಸೆಂಬರ್ 18 ರಂದು ಅಜಿತಾಬ್ ಕುಮಾರ್ (30) ಎಂಬ ಟೆಕ್ಕಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಾಣೆಯಾಗಿದ್ದು, 23 ದಿನಗಳು ಕಳೆದರೂ ಟೆಕ್ಕಿಯ ಸುಳಿವು ಸಿಕ್ಕಿಲ್ಲ. ಅಜಿತಾಬ್ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಈ ಪ್ರಕರಣವನ್ನು ಸವಾಲಾಗಿ ತೆಗೆದುಕೊಂಡಿರುವ ಪೊಲೀಸರು ಡ್ರೋಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ನಡೆಸಿದ್ದಾರೆ.

ಅಜಿತಾಬ್ ಮೂಲತಃ ಬಿಹಾರದವರಾಗಿದ್ದು, ಬೆಂಗಳೂರಿನ ಬೆಳ್ಳಂದೂರಿನಲ್ಲಿರುವ ಬ್ರಿಟೀಷ್ ಟೆಲಿಕಾಂ ಕಂಪನಿಯಲ್ಲಿ ಕಳೆದ ಐದು ವರ್ಷಗಳಿಂದ ಕೆಲಸ ಮಾಡಿಕೊಂಡು ವೈಟ್ ಫೀಲ್ಡ್ ನ ಅಪಾರ್ಟ್ ಮೆಂಟ್ವೊಂದರಲ್ಲಿ ಸ್ನೇಹಿತರ ಜೊತೆ ನೆಲೆಸಿದ್ದರು.
ತನ್ನ ಬಳಿಯಿದ್ದ ಸಿಯಾಜ್ ಕಾರನ್ನು ಮಾರಲು ಓಎಲ್ ಎಕ್ಸ್ ನಲ್ಲಿ ಜಾಹೀರಾತು ನೀಡಿದ್ದು, ಅದರಂತೆ ಕಾರನ್ನು ಬೇರೆಯವರಿಗೆ ತೋರಿಸಲೆಂದು ಡಿಸೆಂಬರ್ 18ರಂದು ಮನೆಯಿಂದ ಹೋಗಿದ್ದ ಅಜಿತಾಬ್ ಈವರೆಗೆ ಪತ್ತೆಯಾಗಿಲ್ಲ.
ಅಜಿತಾಬ್ ಕಾರನ್ನು ಕೊಳ್ಳುವವರು ಆತನಿಗೆ ಕರೆ ಮಾಡಿದ್ದರಿಂದ ಅಂದು ತನ್ನ ಕಾರಿನಲ್ಲಿ ಮನೆಯಿಂದ ಹೊರಹೋಗಿದ್ದರು. ಆದ್ರೆ ಅಜಿತಾಬ್ ಮನೆಗೆ ವಾಪಸ್ಸಾಗದ ಕಾರಣ ಎಲ್ಲೆಡೆ ಹುಡುಕಾಟ ನಡೆಸಿದ ಕುಟುಂಬದವರು ಈ ಬಗ್ಗೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಜಿತಾಬ್ ಗಾಗಿ ಕರ್ನಾಟಕ ಸೇರಿದಂತೆ ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದು ಯಾವುದೇ ಪ್ರಯೋಜನವಾಗಿಲ್ಲ.
ಕೊನೆಯ ಬಾರಿ ಅಜಿತಾಬ್ ಮೊಬೈಲ್ ಸಿಗ್ನಲ್ ಆಫ್ ಆದ ಸ್ಥಳವಾದ ವರ್ತೂರು ಸಮೀಪದ ಗುಂಜೂರು ಸಮೀಪ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ. 8 ತಂಡಗಳನ್ನು ರಚಿಸಲಾಲಾಗಿದೆ.
ಒಂದು ತಂಡ ಗುಂಜೂರು ಸುತ್ತಮುತ್ತಲಿನ ಪ್ರದೇಶಗಳು, ವರ್ತೂರು ಕೆರೆ, ಕೈಕೊಂಡ್ರಹಳ್ಳಿ ಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಡ್ರೋಣ್ ಕ್ಯಾಮೆರಾ ಬಳಸಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನು 7 ತಂಡಗಳು ಬೇರೆ ರೀತಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಅಜಿತಾಬ್ ರನ್ನು ಕಾರು ಕೊಳ್ಳುವ ನೆಪದಲ್ಲಿ ಯಾರಾದರು ಕರೆಸಿಕೊಂಡು ಕಿಡ್ನಾಪ್ ಮಾಡಿದ್ದಾರೋ? ಇಲ್ಲವೇ ಬೇರೆ ಯಾವುದೇ ಕಾರಣದಿಂದ ಕಣ್ಮರೆಯಾಗಿದ್ದಾರೋ ಎಂಬ ಅನುಮಾನಗಳು ಕಾಡತೊಡಗಿವೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications