ಬೆಳಕಿನ ಹಬ್ಬದಿಂದ ಇಬ್ಬರ ಬಾಳಲ್ಲಿ ಕತ್ತಲು
ಬೆಂಗಳೂರು, ನ.4 : ಈ ಬಾರಿಯ ಬೆಳಕಿನ ಹಬ್ಬ ದೀಪಾವಳಿ ಕೆಲವರ ಬಾಳಿನಲ್ಲಿ ಕತ್ತಲು ತಂದಿದೆ. ಪಟಾಕಿ ಹೊಡೆಯುವ ವೇಳೆ ಬೆಂಗಳೂರಿನಲ್ಲಿ 82 ಮಂದಿ ಗಾಯಗೊಂಡಿದ್ದು, ಇವರಲ್ಲಿ ಇಬ್ಬರು ತಮ್ಮ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಚಿಕ್ಕಪುಟ್ಟ ಗಾಯಗಳಾದವರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಗಡಿ ಅಗ್ರಹಾರದ ನಿವಾಸಿ ಸತೀಶ್ (30) ಎಂಬುವರು ಭಾನುವಾರ ಬೆಳಗ್ಗೆ ಉತ್ತರಹಳ್ಳಿ ರಸ್ತೆಯಲ್ಲಿ ಬೈಕ್ನಿಂದ ಇಳಿದು, ಹೆಲ್ಮೆಟ್ ತೆಗೆಯುತ್ತಿದ್ದಂತೆ ರಾಕೆಟ್ ವೊಂದು ಬಂದು ಅವರ ಬಲ ಕಣ್ಣಿಗೆ ತಾಗಿದೆ. ಇದರಿಂದ ಕಣ್ಣಿನ ಗುಡ್ಡೆ ಒಡೆದು ಹೋಗಿದೆ. ತಕ್ಷಣ ಅವರನ್ನು ಮಿಂಟೋ ಕಣ್ಣಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತೀಸ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ದೃಷ್ಟಿ ಬರುವ ಸಾಧ್ಯತೆ ತೀರಾ ಕಡಿಮೆಯೆಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಕುಶಾಲ್ ಕುಮಾರ್ (13) ಎಂಬುವವರ ಎರಡು ಕಣ್ಣಿಗೂ ಹಾನಿ ಉಂಟಾಗಿದ್ದು, ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದ ನಾರಾಯಣ ನೇತ್ರಾಲಯದಲ್ಲಿ (25), ಶೇಖರ್ ಆಸ್ಪತ್ರೆಯಲ್ಲಿ (20), ಮೋದಿ ಆಸ್ಪತ್ರೆಯಲ್ಲಿ (21), ಮಿಂಟೋ ಆಸ್ಪತ್ರೆಯಲ್ಲಿ (16) ಜನರು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟಾಕಿ ಸಿಡಿಸುವಾಗ ಸುರಕ್ಷಿತ ಕ್ರಮಗಳನ್ನು ಅನುಸರಿಸದ ಕಾರಣ ಅನೇಕರು ಗಾಯಗೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿರುವ ಏಳು ವರ್ಷದ ಬಾಲಕ ಶಶಿ ಎಂ. ಶರ್ಮಾ ಎಡಗಣ್ಣಿಗೆ ಪಟಾಕಿ ಸಿಡಿದು ತೀವ್ರ ರಕ್ತಸ್ರಾವವಾಗಿದೆ. ಸೋಮವಾರ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೈ, ಕೈ ಚರ್ಮ ಸುಟ್ಟ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications