ಕ್ಷಮೆಯಾಚನೆ ಸುದ್ದಿ ಅಲ್ಲಗೆಳೆದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು, ಮೇ 7: ಕೆಲ ಮಾಧ್ಯಮಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ (ಮೇ 5) ಸಂಜೆ 7 ಗಂಟೆಗೆ ಬೆಂಗಳೂರು ದಕ್ಷಿಣ ಕೋವಿಡ್ ವಾರ್ ರೂಂಗೆ ಭೇಟಿ ನೀಡಿ, ಅಲ್ಲಿ ಕೆಲಸ ಮಾಡುತ್ತಿದ್ದ 200 ಜನರ ಕ್ಷಮೆಯಾಚಿಸಿದ್ದಾರೆ ಎಂಬ ಸುದ್ದಿಯನ್ನು ಸಂಸದ ತೇಜಸ್ವಿ ಸೂರ್ಯ ಅವರ ಅಧಿಕೃತ ಕಚೇರಿ ಅಲ್ಲಗೆಳೆದಿದೆ.
Recommended Video
ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಕೋವಿಡ್ ವಾರ್ ರೂಂ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ 16 ಮುಸ್ಲಿಂ ಯುವಕರ ಹೆಸರನ್ನು ಓದಿದ್ದು, ಅವರು ಕೋವಿಡ್ ಬೆಡ್ ಬ್ಲಾಕಿಂಗ್ ಹಗರಣದ ಭಾಗವಾಗಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಕೋವಿಡ್ ವಾರ್ ರೂಂಗೆ ತೆರಳಿ ಕ್ಷಮೆ ಕೋರಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ, ಒಬ್ಬರಿಗೆ ಸುದ್ದಿ ಇಲ್ಲದಿದ್ದಾಗ, ಅವರು ನಕಲಿ ಸುದ್ದಿಗಳನ್ನು ಸೃಷ್ಠಿಸುತ್ತಾರೆ ಎಂದು ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ.
"ಕ್ಷಮಿಸಿ, ಇದು ನನ್ನ ಕಡೆಯಿಂದ ತಪ್ಪಾಗಿದೆ. ನನಗೆ ಒಂದು ಪಟ್ಟಿಯನ್ನು ನೀಡಲಾಯಿತು ಮತ್ತು ನಾನು ಅದನ್ನು ಓದಿದ್ದೇನೆ. ಕೋವಿಡ್ ವಾರ್ ರೂಂ ಮೇಲೆ ಪರಿಣಾಮ ಬೀರಿದೆ ಎಂದು ನನಗೆ ತಿಳಿದಿದೆ" ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.