ಮಗನ ಕಾಯಿಲೆ ಪರಿಹರಿಸುವುದಾಗಿ ನಕಲಿ ಜ್ಯೋತಿಷಿಯಿಂದ ಮಹಿಳೆಯ ಅತ್ಯಾಚಾರ
ಮಗನ ಕಾಯಿಲೆ ಪರಿಹರಿಸುತ್ತೇನೆ ಎಂದು ನಂಬಿಸಿದ ನಕಲಿ ಜ್ಯೋತಿಷಿಯೊಬ್ಬ ಬೆಂಗಳೂರಿನ ಆರ್ ಪಿಎಸ್ ಲೇಔಟ್ ನ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಜತೆಗೆ ಇಪ್ಪತ್ತೊಂದು ಲಕ್ಷ ರುಪಾಯಿ ವಂಚಿಸಿದ್ದಾನೆ
ಬೆಂಗಳೂರು, ಮೇ 22 : ಅಸಹಾಯಕ ತಾಯಿಯೊಬ್ಬಳು ತನ್ನ ಮಗನ ಕಾಯಿಲೆ ವಾಸಿಯಾಗುತ್ತದೆಂದು ವ್ಯಕ್ತಿಯೊಬ್ಬನನ್ನು ನಂಬಿ, ಮೋಸ ಹೋದ ಘಟನೆಯ ವರದಿಯಿದು. ಜ್ಯೋತಿಷಿಯ ಸೋಗಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನದೆಸಿದ ವ್ಯಕ್ತಿ, ಇಪ್ಪತ್ತು ಲಕ್ಷ ರುಪಾಯಿ ನಗದು ಜತೆಗೆ ಮುನ್ನೂರು ಗ್ರಾಮ್ ಚಿನ್ನಾಭರಣವನ್ನು ದೋಚಿದ್ದಾನೆ.
ಆರ್ ಪಿಎಸ್ ಲೇಔಟ್ ನ ಮೂವತ್ತೈದು ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದಲ್ಲಿ ನಕಲಿ ಜ್ಯೋತಿಷಿ ಪ್ರಸನ್ನಕುಮಾರ ಅಲಿಯಾಸ್ ಕಾರ್ತೀಕ್ ಎಂಬಾತನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಆತ ಮೂಲತಃ ಅಗರಬತ್ತಿ ಮಾರುವವನು. ಅದೇ ಕೆಲಸದಲ್ಲಿ ತೊಡಗಿದ್ದಾಗ ಮಹಿಳೆಯ ಪರಿಚಯ ಮಾಡಿಕೊಂಡಿದ್ದಾನೆ.[ರೇಪ್ ಮಾಡಿ, ಬಾಲಕಿಯನ್ನು ಹೂತಿಟ್ಟಿದ್ದ ಅಪ್ಪ, ಅಜ್ಜಿ ಬಂಧನ!]

ತನ್ನನ್ನು ಜ್ಯೋತಿಷಿ ಎಂದು ಹೇಳಿಕೊಂಡು, ಮಹಿಳೆಯ ಮಗನಿಗೆ ಇರುವ ಅನಾರೋಗ್ಯ ಸಮಸ್ಯೆ ನಿವಾರಣೆ ಆಗಬೇಕು ಅಂದರೆ ತನ್ನೊಂದಿಗೆ ಸಂಭೋಗ ನಡೆಸಬೇಕು ಎಂದು ಏಳು ಬಾರಿ ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಪ್ರತಿ ಬಾರಿ ನಾನಾ ನೆಪಗಳನ್ನು ಹೇಳಿ, ಆಕೆಯನ್ನು ಬೆದರಿಸಿದ್ದಾನೆ.
ಕೊನೆಗೆ ಪೂಜೆ ಕೊನೆ ಹಂತ. ಇಪ್ಪತ್ತೊಂದು ಲಕ್ಷ ಹೊಂದಿಸಿದರೆ ನಿಮ್ಮ ಮಗನ ಅನಾರೋಗ್ಯ ಶಾಶ್ವತವಾಗಿ ನಿವಾರಣೆ ಆಗುತ್ತದೆ ಎಂದು ಕಾರ್ತೀಕ್ ಹೇಳಿದ ಮಾತು ನಂಬಿ, ಆಕೆ ಹಣ ಹೊಂದಿಸಿಕೊಟ್ಟಿದ್ದರು. ಆ ನತರ ಆತ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಆ ನಂತರ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.[ಮದುವೆ ನಿರಾಕರಿಸಿದ್ದಕ್ಕೆ ಯುವತಿಯ ಅತ್ಯಾಚಾರ ಬರ್ಬರ ಕೊಲೆ]
ಮೊಬೈಲ್ ಕರೆಗಳ ಆಧಾರ ಹಾಗೂ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಗಳ ಸಹಾಯದಿಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
{promotion-urls}
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications