ನಕಲಿ ನೋಟಿನ ಆಸೆ ತೋರಿಸಿ ವಂಚಿಸುತ್ತಿದ್ದವರ ಬಂಧನ
ಬೆಂಗಳೂರು, ಜೂ. 04 : ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತಂತೆ. ಇನ್ನು ತ್ವರಿತವಾಗಿ ಹಣ ಮಾಡಿಕೊಳ್ಳಬೇಕೆಂಬ ದುರಾಸೆಯಿಂದ ಅಡ್ಡದಾರಿ ಹಿಡಿಯಲೂ ಹೇಸದವರು ಬಾಯಿ ಬಿಡದೆ ಇರುತ್ತಾರೆಯೆ? ಇಂಥ ದುರಾಸೆ ಇರುವವರೆಗೂ ಪಂಗನಾಮ ಹಾಕುವವರೂ ಇದ್ದೇ ಇರುತ್ತಾರೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.
ಹೀಗೆ ನಕಲಿ ನೋಟುಗಳನ್ನು ಮುದ್ರಿಸಿ ಕೊಡುತ್ತೇವೆಂದು ಆಸೆ ತೋರಿಸಿ ಸಾರ್ವಜನಿಕರಿಂದ ಹಣ ಕೀಳುವ ಸಂಚು ಹೂಡಿದ್ದ ಮೂವರು ಖದೀಮರನ್ನು ಕಾಡುಗೋಡಿ ಪೊಲೀಸರು ಬೆಳತೂರು ಬಸ್ ನಿಲ್ದಾಣದ ಬಳಿ ಹಿಡಿಯಲು ಯಶಸ್ವಿಯಾಗಿದ್ದು, ಅವರಿಂದ ನಕಲಿ ನೋಟು ತಯಾರಿಸುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಅವರಿಂದ ವಶಪಡಿಸಿಕೊಂಡ ವಸ್ತುಗಳು ಇಂತಿವೆ : 1) 1,000 ರು. ಮುಖ ಬೆಲೆಯ 4 ನೋಟು, 2) ಎರಡು ಟಿಂಚರ್ ಬಾಟಲಿ, 3) ಒಂದು ನೀರಿನ ಬಾಟಲಿ, 4) ಒಂದು ಬಣ್ಣ ಬೆರೆಸಿರುವ ಬಾಟಲಿ, 5) ಪ್ಲಾಸ್ಟಿಕ್ ಪೇಪರ್ ನಲ್ಲಿ ಗಂಟು ಹಾಕಿರುವ ಬಿಳಿ ಹರಳುಗಳು, 6) ಹರಳು ಮಿಶ್ರಿತ ನೀರಿನ ಬಾಟಲಿ, 7) 1,000 ರು ಅಳತೆಯ ಪೇಪರ್ 12 ಬಂಡಲ್ ಪೇಪರ್.
ಮುಂಗಡ ಹಣ ಕೊಟ್ಟರೆ ಹೊರದೇಶದಿಂದ ರಾಸಾಯನಿಕ ವಸ್ತು ತಂದು ನಿಮಗೆ ನಕಲಿ ನೋಟುಗಳನ್ನು ತಯಾರು ಮಾಡಿಕೊಡುತ್ತೇವೆಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಆಗ್ನೇಯ ವಿಭಾಗದ ಡಿ.ಸಿ.ಪಿ ಡಾ. ರೋಹಿಣಿ ಕಟೋಚ್ ಸೆಫಟ್ ನೇತೃತ್ವದಲ್ಲಿ ದಾಳಿ ನಡೆಸಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮೋಸಗಾರರ ವಿವರ : ರಾಜೇಶ್ ರ್ಬಿ ಲೇ. ಹನಮಂತು (27) ರಾಜೀವಗಾಂಧಿನಗರ, ಕಡಪ ಟೌನ್, ಆಂಧ್ರಪ್ರದೇಶ, ಪ್ರಸಾದ್ ಪೆದ್ದಗುರುವಯ್ಯ (37) ಜೆ.ವಿ.ಕೃಷ್ಣಪುರಂ, ಪ್ರಕಾಶಂ ಜಿಲ್ಲೆ, ಆಂಧ್ರ ಪ್ರದೇಶ, ದಾಮೋದರಂ ಮುನಿರತ್ನಂ (42) ಅರವಚೇನುಪಿಲ್ಲ ಗ್ರಾಮ, ಚಿತ್ತೂರು ಜಿಲ್ಲೆ, ಆಂಧ್ರಪ್ರದೇಶ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications