ಬೆಂಗಳೂರು: ಶಾಸಕರನ್ನು ಬಿಡದ ಭೂಗಳ್ಳರು, ಸೈಟ್ನ ನಕಲಿ ಖಾತೆ ಸೃಷ್ಟಿಸಿದ್ದ 8 ಮಂದಿ ವಿರುದ್ಧ ಎಫ್ಐಆರ್
ಬೆಂಗಳೂರು, ಜನವರಿ 20: ರಾಜ್ಯ ರಾಜಧಾನಿ ಮತ್ತು ಮಹಾನಗರವಾದ ಬೆಂಗಳೂರಿನಲ್ಲಿ ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಶ್ರೀಸಾಮಾನ್ಯರ ನಿವೇಶನಗಳ ಖಾತೆ ಬದಲಾವಣೆ ಮಾಡುವುದು ಸಾಮಾನ್ಯವಾಗಿತ್ತು. ಆದರೆ ಇದೀಗ ಶಾಸಕರುಗಳ ನಿವೇಶನಗಳ ದಾಖಲೆಗಳನ್ನು ನಕಲು ಮಾಡಿ ಮೋಸಗೈದ ಘಟನೆ ಬೆಳಕಿಗೆ ಬಂದಿದೆ.
ಸಾಮಾನ್ಯ ಜನರನ್ನು ಕಾಡುವ ಭೂಗಳ್ಳತನದ ಭೂತ ಈಗ ಶಾಸಕರ ಬೆನ್ನಹತ್ತಿದೆ. ರಾಜ್ಯದ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಸೇರಿ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳೆಲ್ಲದರ ನಕಲು ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಂಡು ಶಾಸಕರಿಗೆ ಮೋಸ ಮಾಡಿದ್ದಾರೆ.
ಶಾಸಕಿಗೆ ಹಂಚಿಕೆಯಾದ ಸೈಟ್ ಅನ್ನು ರಾಮಮೂರ್ತಿ ಅಲಿಯಾಸ್ ಮಣಿವನನ್, ಅನುರಾಧಾ, ದೀಪಿಕಾ ಸೇರಿದಂತೆ 10 ಜನ ಡೆವಲಪರ್ಸ್ ಹಾಗೂ ಬಿಲ್ಡರ್ಸ್ ಹಾಗೂ ಇನ್ನಿತರು ಸೇರಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಬ್ಯಾಟರಾಯನಪುರ ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಆರೋಪದ ಮೇರೆಗೆ ಸದ್ಯ 8 ಜನರ ವಿರುದ್ಧ ಸಂಜಯನಗರದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಅಡಿ ಜಾಗ ಬಂಗಾರದ ಬೆಲೆಗೆ ಮಾರಾಟವಾಗುತ್ತದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಭೂಗಳ್ಳರ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದೆ. ಚಿನ್ನದ ಬೆಲೆಯ ಭೂಮಿ, ಜಾಗ, ನಿವೇಶನ ಎಗರಿಸಲು ಭೂಗಳ್ಳರ ದಂಡೆ ಸದಾ ಸಜ್ಜಾಗಿರುತ್ತದೆ. ಇಂತಹ ಪ್ರಸಂಗಗಳಿಗೆ ಸಾಮಾನ್ಯರಂತೆ ಈಗ ಜನಪ್ರತಿನಿಧಿಗಳು ಸಾಕ್ಷಿಯಾಗುತ್ತಿದ್ದಾರೆ.
ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಮಂಜೂರಾಗಿದ್ದ ಬಿಡಿಎ ಜಿ ವರ್ಗದ ನಿವೇಶನ ಸಂಬಂಧಿಸಿದಂತೆ ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾರೆ. ನಕಲಿ ದಾಖಲೆಗಳ ಆಧಾರದ ಮೇಲೆ ಬ್ಯಾಟರಾಯನಪುರ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ನಡೆದಿದೆ.

8 ಕೋಟಿ ಬೆಲೆ ಬಾಳುವ ಸೈಟ್
ನಗರದ ಲೊಟ್ಟೆಗೊಲ್ಲಹಳ್ಳಿ ಅಂದ್ರೆ ಸಂಜಯನಗರದ ಆರ್ ಎಂವಿ 2 ಸ್ಟೇ ಪ್ರದೇಶದಲ್ಲಿ ಶಾಸಕರಿಗೆ 50X80 ವಿಸ್ತೀರ್ಣದ ಬಿಡಿಎ ನಿವೇಶನ ಸಂಖ್ಯೆ 3 ಹಂಚಿಕೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ್ದ ಎಲ್ಲ ದಾಖಲೆಗಳು ಶಾಸಕರ ಬಳಿ ಇದ್ದವು. ಈ ನಿವೇಶನದ ಪ್ರಸಕ್ತದ ಬೆಲೆ ಸುಮಾರು 8 ಕೋಟಿ ಎನ್ನಲಾಗುತ್ತಿದೆ. ತಮ್ಮ ಜಾಗಕ್ಕೆ ಶಾಸಕರು ಬೇಲಿ ಹಾಕಿಸಿದ್ದರು.
ನಕಲಿ ದಾಖಲೆಯ ಮಾಹಿತಿ ಬರುತ್ತಿದ್ದಂತೆ ಶಾಸಕರು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿ ಆಧಾರದಲ್ಲಿ ಪೊಲೀಸರು ಭಾರತೀಯ ದಂಡ ಸಂಹಿತಿ (ಐಪಿಸಿ) 420,465,468,471 ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಿದ್ದಾರೆ.
ಶಾಸಕರ ಜಾಗವನ್ನೇ ಲಪಟಾಯಿಸಲು, ನಕಲಿ ದಾಖಲೆ ಸೃಷ್ಟಿಸಲು ಹೇಗೆ ಸಾಧ್ಯವಾಯಿತು ಎಂಬ ಹಲವು ಅಂಶಗಳನ್ನು ಪತ್ತೆ ಮಾಡುವಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications