ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಸಂದೇಶ ವೈರಲ್- ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ
ಬೆಂಗಳೂರು, ಜೂ. 03: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಟ್ವೀಟ್ ಮಾಡಿದ್ದಾರೆ ಎನ್ನಲಾದ ಸುಳ್ಳು ಸುದ್ದಿಯ ಕುರಿತು ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾಡಿದ್ದಾರೆ ಎನ್ನಲಾದ ಟ್ವೀಟ್ನ ಸ್ಕ್ರೀನ್ಶಾಟ್ ವೈರಲ್ ಆಗಿತ್ತು.
ಈ ಡಿಸಿಎಂ ಅಶ್ವತ್ಥನಾರಾಯಣ (DCM Ashwathnarayan) ಎಂಬ ಟ್ವೀಟ್ಟರ್ ಖಾತೆಯಿಂದ ಮಾಡಲಾಗಿದೆ ಎಂದು ಬಿಂಬಿಸುವ ಸ್ಕ್ರೀನ್ಶಾಟ್ನಲ್ಲಿ, ಶಿಕ್ಷಣ ತಜ್ಞರು ಹಾಗೂ ಮಕ್ಕಳ ಕಲ್ಯಾಣ ಸಮಿತಿಯೊಂದಿಗೆ ಚರ್ಚೆ ನಡೆಸಿದ ನಂತರ ಸರ್ಕಾರ ಕರ್ನಾಟಕ ರಾಜ್ಯ ಮಂಡಳಿಯ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಜುಲೈ 7 ರಿಂದ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತದೆ, ಆದರೆ ಸಮಯವಕಾಶವನ್ನು 120 ಕ್ಕೆ ಇಳಿಕೆ ಮಾಡಲಾಗುತ್ತದೆ ಎಂದು ಬರೆದಿತ್ತು.

ಆದರೆ ಈ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ನೀಡಿರುವ ಡಿಸಿಎಂ, ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
I have not been part of any meeting or discussion held on conducting examinations in the state. Concerned department will take the best course of the action.
— Dr. Ashwathnarayan C. N. (@drashwathcn) June 3, 2021
Any statements floating around attributed to me is fake and false. Do not forward such fake messages.@CybercrimeCID pic.twitter.com/ZyXPv6pSf3
ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡಿ ಎಂದು ಹೇಳಿದ್ದಾರೆ.
ಈ ನಡುವೆ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ರದ್ದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
(ಒನ್ಇಂಡಿಯಾ ಸುದ್ದಿ)












Click it and Unblock the Notifications