Get Updates
Get notified of breaking news, exclusive insights, and must-see stories!

ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಸಂದೇಶ ವೈರಲ್‌- ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

ಬೆಂಗಳೂರು, ಜೂ. 03: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ಸುಳ್ಳು ಸುದ್ದಿಯ ಕುರಿತು ಸಿ ಎನ್‌ ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾಡಿದ್ದಾರೆ ಎನ್ನಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್‌ ವೈರಲ್‌ ಆಗಿತ್ತು.

ಈ ಡಿಸಿಎಂ ಅಶ್ವತ್ಥನಾರಾಯಣ (DCM Ashwathnarayan) ಎಂಬ ಟ್ವೀಟ್ಟರ್‌ ಖಾತೆಯಿಂದ ಮಾಡಲಾಗಿದೆ ಎಂದು ಬಿಂಬಿಸುವ ಸ್ಕ್ರೀನ್‌ಶಾಟ್‌ನಲ್ಲಿ, ಶಿಕ್ಷಣ ತಜ್ಞರು ಹಾಗೂ ಮಕ್ಕಳ ಕಲ್ಯಾಣ ಸಮಿತಿಯೊಂದಿಗೆ ಚರ್ಚೆ ನಡೆಸಿದ ನಂತರ ಸರ್ಕಾರ ಕರ್ನಾಟಕ ರಾಜ್ಯ ಮಂಡಳಿಯ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಜುಲೈ 7 ರಿಂದ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತದೆ, ಆದರೆ ಸಮಯವಕಾಶವನ್ನು 120 ಕ್ಕೆ ಇಳಿಕೆ ಮಾಡಲಾಗುತ್ತದೆ ಎಂದು ಬರೆದಿತ್ತು.

Fake News about 2nd PU Exams starts from July 7 in the name of Ashwath Narayan; DCM reacts

ಆದರೆ ಈ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ನೀಡಿರುವ ಡಿಸಿಎಂ, ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡಿ ಎಂದು ಹೇಳಿದ್ದಾರೆ.

ಈ ನಡುವೆ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ರದ್ದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.

(ಒನ್ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+