ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಸಂದೇಶ ವೈರಲ್- ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ
ಬೆಂಗಳೂರು, ಜೂ. 03: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಟ್ವೀಟ್ ಮಾಡಿದ್ದಾರೆ ಎನ್ನಲಾದ ಸುಳ್ಳು ಸುದ್ದಿಯ ಕುರಿತು ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾಡಿದ್ದಾರೆ ಎನ್ನಲಾದ ಟ್ವೀಟ್ನ ಸ್ಕ್ರೀನ್ಶಾಟ್ ವೈರಲ್ ಆಗಿತ್ತು.
ಲಾಕ್ಡೌನ್ or ಅನ್ಲಾಕ್: ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
ಈ ಡಿಸಿಎಂ ಅಶ್ವತ್ಥನಾರಾಯಣ (DCM Ashwathnarayan) ಎಂಬ ಟ್ವೀಟ್ಟರ್ ಖಾತೆಯಿಂದ ಮಾಡಲಾಗಿದೆ ಎಂದು ಬಿಂಬಿಸುವ ಸ್ಕ್ರೀನ್ಶಾಟ್ನಲ್ಲಿ, ಶಿಕ್ಷಣ ತಜ್ಞರು ಹಾಗೂ ಮಕ್ಕಳ ಕಲ್ಯಾಣ ಸಮಿತಿಯೊಂದಿಗೆ ಚರ್ಚೆ ನಡೆಸಿದ ನಂತರ ಸರ್ಕಾರ ಕರ್ನಾಟಕ ರಾಜ್ಯ ಮಂಡಳಿಯ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಜುಲೈ 7 ರಿಂದ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತದೆ, ಆದರೆ ಸಮಯವಕಾಶವನ್ನು 120 ಕ್ಕೆ ಇಳಿಕೆ ಮಾಡಲಾಗುತ್ತದೆ ಎಂದು ಬರೆದಿತ್ತು.
ಆದರೆ ಈ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ನೀಡಿರುವ ಡಿಸಿಎಂ, ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
I have not been part of any meeting or discussion held on conducting examinations in the state. Concerned department will take the best course of the action.
— Dr. Ashwathnarayan C. N. (@drashwathcn) June 3, 2021
Any statements floating around attributed to me is fake and false. Do not forward such fake messages.@CybercrimeCID pic.twitter.com/ZyXPv6pSf3
ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡಿ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ದು?
ಈ ನಡುವೆ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ರದ್ದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
Recommended Video
(ಒನ್ಇಂಡಿಯಾ ಸುದ್ದಿ)