ನಕಲಿ ಅಧಿಕಾರಿಗಳ ದಾಳಿ: ಕೆಜಿಗಟ್ಟಲೆ ಚಿನ್ನ ಹೊತ್ತು ಪರಾರಿಯಾಗುವಾಗ ಆದ ಎಡವಟ್ಟೇನು?
ಬೆಂಗಳೂರು, ಜನವರಿ 29: ಬಿಐಎಸ್ ಎಂದು ಹೇಳಿಕೊಂಡ ನಕಲಿ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಕೆಜಿಗಟ್ಟಲೆ ಚಿನ್ನ ಜಪ್ತಿ ಮಾಡಿ ಕೊಂಡೋಯ್ದ ಘಟನೆ ಬೆಂಗಳೂರಿನ ಕೆಆರ್ಪುರಂನಲ್ಲಿ ನಡೆದಿದೆ. ಜನವರಿ 27ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು ಎಂದುಕೊಂಡು ನಕಲಿ ಅಧಿಕಾರಿಗಳ ತಂಡವೊಂದು ಚಿನ್ನದ ಅಂಗಡಿಯೊಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ಕೆ.ಆರ್ಪುರಂನಲ್ಲಿರುವ ಚಿನ್ನದ ಅಂಗಡಿಗಳನ್ನು ಆರೋಪಿಗಳು ಟಾರ್ಗೆಟ್ ಮಾಡಿದ್ದಾರೆ.

ಕೆಆರ್ ಪುರದ ಮಹಾಲಕ್ಷ್ಮೀ ಜ್ಯುವೆಲ್ಲರಿಯನ್ನೇ ಗುರಿಯಾಗಿಸಿಕೊಂಡ ನಾಲ್ಕು ಜನರಿರುವ ಆರೋಪಿಗಳ ತಂಡ ಇನೋವಾ ಕಾರಿನಲ್ಲಿ ಬಂದು ನಾವು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದಾರೆ.
'ನಗರದ ಹಲವು ಜ್ಯುವೆಲರ್ಸ್ ಮೇಲೆ ದಾಳಿ ಆಗಿವೆ. ಅದರಲ್ಲಿ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದ ಅಕ್ರಮ ಚಿನ್ನದ ಪರಿಶೀಲನೆ' ಎಂದು ಹೇಳಿದ ಆರೋಪಿಗಳು, ದಾಳಿ ಹೆಸರಲ್ಲಿ ಸುಮಾರು 40 ನಿಮಿಷಗಳ ಕಾಲ ಅಂಗಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಜ್ಯುವೆಲ್ಲರಿಯಲ್ಲಿದ್ದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು ಹೋಗಲು ಪ್ಲಾನ್ ಮಾಡಿದ್ದಾರೆ.
1 ಕೆಜಿಗೂ ಅಧಿಕ ಚಿನ್ನವನ್ನು ಗಂಟುಕಟ್ಟಿದ ಖದೀಮರ ಗ್ಯಾಂಗ್ ಚಿನ್ನ ತೆಗೆದುಕೊಂಡು ಮುಂದಿನ ವಾರ ತಮಿಳುನಾಡಿನ ಕಚೇರಿಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಚಿನ್ನ ತೆಗೆದುಕೊಂಡು ವಾಪಸ್ ಹೋಗುವ ವೇಳೆ ನಕಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದು, ಜ್ಯುವೆಲ್ಲರಿ ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರೆ.

ಇದನ್ನು ಕಂಡು ಅನುಮಾನಗೊಂಡ ಚಿನ್ನದ ಅಂಗಡಿ ಸಿಬ್ಬಂದಿ ನಕಲಿ ಅಧಿಕಾರಿಗಳ ಕಾರು ಹಿಂಬಾಲಿಸಿದ್ದಾರೆ. ತಾವು ಬಂದ ಕೆಲಸ ಯಶಸ್ವಿಯಾಗಿ ಆಯಿತು ಎಂದು ಖುಷಿಯಲ್ಲಿ ತೆರೆಳುತ್ತಿದ್ದ ಆರೋಪಿಗಳು ಚಿನ್ನದ ಅಂಗಡಿ ಸಿಬ್ಬಂದಿ ಫಾಲೋ ಮಾಡುವುದನ್ನು ನೋಡಿ ಹೌಹಾರಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಮನಬಂದಂತೆ ಕಾರು ಚಲಾಯಿಸಿದ್ದಾರೆ. ಈ ವೇಳೆ ಬೈಕ್ಗಳ ನಡುವೆ ಸರಣಿ ಅಪಘಾತ ಕೂಡ ನಡೆದಿದೆ.
ಇತ್ತ ಚಿನ್ನದ ಅಂಗಡಿ ಸಿಬ್ಬಂದಿ ಕೂಡಲೇ ಪೊಲೀಸರ ಗಮನಕ್ಕೆ ತಂದಿದ್ದು, ನಡೆದ ಘಟನೆಯನ್ನು ವಿವರಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಕೆ ಆರ್ ಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಸಬ್ ಇನ್ಸ್ಪೆಕ್ಟರ್ಗಳು ಟಿಸಿ ಪಾಳ್ಯ ಜಂಕ್ಷನ್ಗೆ ದೌಡಾಯಿಸಿದ್ದು, ಮಾರ್ಗ ಮಧ್ಯೆಯೇ ನಕಲಿ ಅಧಿಕಾರಿಗಳ ತಂಡವನ್ನು ಹಿಡಿದು ಬಂಧಿಸಿದ್ದಾರೆ.
ಸಂಪತ್ ಕುಮಾರ್, ಜೋಶಿ ಥಾಮಸ್, ಅವಿನಾಶ್ ಹಾಗೂ ಸಂದೀಪ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳ ವಿರುದ್ಧ ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಸದ್ಯ ಪೊಲೀಸರು ಆರೋಪಿಗಳ ಬಳಿಯಿದ್ದ ಚಿನ್ನ ಜಪ್ತಿ ಮಾಡಿದ್ದಾರೆ.
-
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್











Click it and Unblock the Notifications