ರಾಜ್ಯಪಾಲರನ್ನಾಗಿ ಮಾಡ್ತೀನಿ ಅಂತ 10 ಕೋಟಿ ವಂಚಿಸಿದ ಯುವರಾಜ !
ಬೆಂಗಳೂರು, ಡಿಸೆಂಬರ್ 17: ಆರ್ಎಸ್ಎಸ್ ನಾಯಕ ಮುಖವಾಡ ಧರಿಸಿ ಹಲವಾರು ಜನರಿಗೆ ಮೋಸ ಮಾಡಿರುವ ಆರೋಪಿ ಯುವರಾಜರನ್ನು ಸಿಸಿಬಿ ಪೊಲೀಸರು ಶಾಂತಿನಗರದಲ್ಲಿರುವ ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದಾರೆ.
ಉದ್ಯಮಿ ಸುಧೀಂದ್ರರೆಡ್ಡಿಗೆ ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ ಒಂದು ಕೋಟಿ ಮೋಸ ಮಾಡಿದ ಬಗ್ಗೆ ನಿನ್ನೆ ಯುವರಾಜನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಮನೆ ಮೇಲೆ ದಾಳಿ ನೆಡಸಿದ್ದರು. ಈ ವೇಳೆ 91 ಕೋಟಿ ಮೌಲ್ಯದ ಚೆಕ್ ಗಳು ಹಾಗೂ ದಾಖಲೆಗಳು ಪತ್ತೆಯಾಗಿದ್ದವು.
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ ಚೆಕ್ ಪಡೆದುಕೊಂಡಿದ್ದ ಸಂಗತಿ ಹೊರ ಬಂದಿದ್ದು, ಯುವರಾಜ ಬಂಧನವಾಗುತ್ತಿದ್ದಂತೆ ಹಲವಾರು ದೂರುಗಳು ಸಿಸಿಬಿ ಕದ ತಟ್ಟಿವೆ. ರಾಜ್ಯಪಾಲರನ್ನಾಗಿ ಮಾಡುವುದಾಗಿ ನಂಬಿಸಿ ವ್ಯಕ್ತಿಯಿಂದ ಹತ್ತು ಕೋಟಿ ವಂಚನೆ ಮಾಡಿರುವ ಸಂಗತಿ ಸಿಸಿಬಿ ಪೊಲೀಸರಿಗೆ ಸಿಕ್ಕಿದೆ. ಅನೇಕರು ಮೋಸ ಹೋಗಿರುವ ಬಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ. ಎಲ್ಲರಿಗೂ ದೂರು ನೀಡಲು ತಿಳಿಸಿದ್ದೇವೆ. ದೂರು ನೀಡಿದ ಬಳಿಕ ತನಿಖೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಒನ್ ಇಂಡಿಯಾ ಕನ್ನಡಗೆ ತಿಳಿಸಿದ್ದಾರೆ.

ಯುವರಾಜನ ಮುಖವಾಡ ಸಿಸಿಬಿ ಕಳಚುತ್ತಿದ್ದಂತೆ ಕೆಲ ರಾಜಕಾರಣಿಗಳು ಕೂಡ ಸಿಸಿಬಿ ಪೊಲೀಸರಿಗೆ ಕರೆ ಮಾಡಿ ನಮಗೂ ಮೋಸ ಮಾಡಿದ್ದಾರೆ ಎಂದು ಅವಲತ್ತುಕೊಂಡಿದ್ದಾರೆ. ಆದರೆ ಕೆಲವರು ಯುವರಾಜ್ ಗೆ ನಗದು ರೂಪದಲ್ಲಿ ಕೊಟ್ಟಿರುವ ಕಾರಣ ದೂರು ನೀಡಲಾಗದೇ ಪರಿತಪಿಸುತ್ತಿದ್ದಾರೆ. ಇನ್ನೂ ಕೆಲವರು ಮೋಸ ಹೋಗಿರುವ ಸಂಗತಿ ಗೊತ್ತಾದರೆ ಮರ್ಯಾದೆ ಹೋಗುತ್ತದೆ ಎಂದು ಕೆಲವು ಅಧಿಕಾರಿಗಳು ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ಯುವರಾಜನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಸಿಸಿಬಿ ವಶಕ್ಕೆ ಪಡೆಯುತ್ತೇವೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲಿದ್ದು, ಮತ್ತಷ್ಟು ಅಕ್ರಮಗಳು ಬೆಳಕಿಗೆ ಬರಲಿವೆ ಎಂದು ಅಪರಾಧ ವಿಭಾಗದ ಡಿಸಿಪಿ ಕೆ.ಪಿ. ರವಿಕುಮಾರ್ ತಿಳಿಸಿದ್ದಾರೆ.
-
ಬಳ್ಳಾರಿ ಪ್ರಕರಣ: ಮಕ್ಕಳ ಬಾಲ್ಯ ಅತ್ಯಂತ ಸೂಕ್ಷ್ಮವಾದದ್ದು ಕೀಟಲೆ, ಏಕಾಂಗಿತನದ ಬಗ್ಗೆ ಇರಲಿ ಎಚ್ಚರ: ವಸುಧೇಂದ್ರ ಬರಹ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications