ತೀರ್ಥ ಕುಡಿಸಿ ಚಿನ್ನ ದೋಚಿದ ಕಳ್ಳಸ್ವಾಮಿ
ಬೆಂಗಳೂರು, ನವೆಂಬರ್ 06 ; ಪಾರ್ಶ್ವವಾಯು ರೋಗ ಗುಣಪಡಿಸುತ್ತೇನೆಂದು ನಂಬಿಸಿ ಅಮಲು ಪದಾರ್ಥ ಬೆರೆಸಿದ ತೀರ್ಥ ಕುಡಿಸಿ ಕಳ್ಳ ಸ್ವಾಮಿಯೊಬ್ಬ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ನಗರದ ಬಿ.ಟಿ.ಎಂ ಬಡಾವಣೆಯ 1 ನೇ ಹಂತದಲ್ಲಿ ನವೆಂಬರ್ 6 ಸೋಮವಾರ ನಡೆದಿದೆ.
ಬಿ.ಟಿ.ಎಂ ಬಡಾವಣೆಯ ಅಶ್ವಥ್ ರೆಡ್ಡಿ ಎಂಬುವರ ಮನೆಯಲ್ಲಿ ಕಳ್ಳಸ್ವಾಮಿ ತನ್ನ ಕೈಚಳಕ ತೋರಿಸಿದ್ದಾನೆ. ಅಶ್ವಥ್ ರೆಡ್ಡಿ ಅವರ ತಾಯಿ ಪಾರ್ಶ್ವವಾಯು ಸಮಸ್ಯೆಯಿಂದ ಬಲಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳ ಸ್ವಾಮಿ ಪೂಜೆ ಮಾಡಿ ಖಾಯಿಲೆ ವಾಸಿಮಾಡಿಸುವುದಾಗಿ ನಂಬಿಸಿದ್ದಾನೆ.

ಮಗನಿಗೆ ವಿಷಯ ತಿಳಿದರೆ ಬಯ್ಯುತ್ತಾನೆಂದು ಹೆದರಿ ಮಗನಿಲ್ಲದ ಸಮಯದಲ್ಲಿ ಕಳ್ಳಸ್ವಾಮಿಯನ್ನು ಅಶ್ವಥ್ ರೆಡ್ಡಿ ತಾಯಿ ಮನೆಗೆ ಕರೆದು ಪೂಜೆ ಮಾಡುವಂತೆ ಹೇಳಿ ತಾನು ಮತ್ತು ತನ್ನ ಜೊತೆಗೆ ಮಗಳನ್ನೂ ಪೂಜೆಗೆ ಕೂರಿಸಿಕೊಂಡಿದ್ದಾರೆ. ಪೂಜೆ ವೇಳೆಯಲ್ಲಿ ಚಿನ್ನಾಭರಣ ಧರಿಸುವಂತೆ ಹೇಳಿದ ಕಳ್ಳಸ್ವಾಮಿ ಕಪಟ ಪೂಜೆ ಆರಂಭ ಮಾಡಿ ಅಮಲಿನ ಪದಾರ್ಥ ಬೆರೆಸಿದ್ದ ತೀರ್ಥ ಕುಡಿಯಲು ನೀಡಿದ್ದಾನೆ.
ತೀರ್ಥ ಕುಡಿದು ತಾಯಿ ಮಗಳಿಬ್ಬರು ಪ್ರಜ್ಞಾಹೀನರಾಗಿ ಬಿದ್ದ ಕೂಡಲೆ ಅವರ ಮೈಮೇಲಿದ್ದ 160 ಗ್ರಾಂ ಚಿನ್ನ ದೋಚಿ ಕಳ್ಳ ಸ್ವಾಮಿ ಪೇರಿ ಕಿತ್ತಿದ್ದಾನೆ. ಇದೀಗ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳಸ್ವಾಮಿಗಾಗಿ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications