ಕಾರ್ತಿಕ್ ಮದುವೆ ರದ್ದು, ನ.26ಕ್ಕೆ ಕೋರ್ಟಿನಲ್ಲಿ ವಿಚಾರಣೆ
ಬೆಂಗಳೂರು, ನ.12: 'ಹೇಗಾದರೂ ಸರಿ ಕಾರ್ತಿಕ್ ನನ್ನನ್ನು ಪತ್ನಿ ಎಂದು ಒಪ್ಪಿಕೊಂಡರೆ ಸಾಕು, ನನಗೆ ಆಸ್ತಿ ಪಾಸ್ತಿ ಏನೂ ಬೇಡ. ನಾನು ಆತನನ್ನು ತುಂಬಾ ಪ್ರೀತಿಸಿದ್ದೇನೆ ಎಂದು ಕನ್ನಡದ ಎಲ್ಲಾ ಚಾನೆಲ್ ಗಳ ಮುಂದೆ ಕಂಠ ಶೋಷಣೆ ಮಾಡಿಕೊಂಡಿದ್ದ ಮೈತ್ರಿಯಾ ಅವರು ಹೈಕೋರ್ಟ್ ಬಿಟ್ಟು ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದು ಎಲ್ಲರಿಗೂ ತಿಳಿದೇ ಇದೆ. ಈಗ ಕಾರ್ತಿಕ್ ಹೊಸ ಮದುವೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಿತು.
ನಟಿ ಮೈತ್ರಿಯಾ ಹಾಗೂ ಕಾರ್ತಿಕ್ ಗೌಡ ಅವರ ಪ್ರೇಮ-ವಿವಾಹ ಪ್ರಕರಣ ಮತ್ತೊಮ್ಮೆ ಕಾನೂನು ಸಮರ ಮುಂದುವರೆದಿದೆ. ಕಾನೂನು ಸಚಿವ ಡಿ.ವಿ.ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರಿಗೆ ಕೌಟುಂಬಿಕ ನ್ಯಾಯಾಲಯದಿಂದ ನೋಟಿಸ್ ಜಾರಿ ಮಾಡಿತ್ತು. ಅ.21ರೊಳಗೆ ಮೈತ್ರಿಯಾ ಅರ್ಜಿಗೆ ಪ್ರತಿಯಾಗಿ ಮರು ಅರ್ಜಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ಅದರಂತೆ, ಕಾರ್ತಿಕ್ ಪರ ವಕೀಲರು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ, ಕಾರ್ತಿಕ್ ಅವರಿಗೆ ಮದುವೆ ಆಗಲು ಅನುಮತಿ ನೀಡಬೇಕು, ಮೈತ್ರಿಯಾ ಸಲ್ಲಿಸಿರುವ ಅರ್ಜಿ ರದ್ದು ಮಾಡಬೇಕು ಎಂದು ವಾದಿಸಿದ್ದಾರೆ.

ಮೈತ್ರಿಯಾ ಅರ್ಜಿಯಲ್ಲಿ ಏನಿದೆ?: ಮೈತ್ರಿಯಾ ಹೈಕೋರ್ಟ್ ಮೆಟ್ಟಿಲೇರುವ ಬದಲು ಫ್ಯಾಮಿಲಿ ಕೋರ್ಟಿನಲ್ಲಿ ಕಾಣಿಸಿಕೊಂಡಾಗಲೇ ಎಲ್ಲರ ಕುತೂಹಲ ಕೆರಳಿತ್ತು. ಬಹುಶಃ ಕಾರ್ತಿಕ್ ಜೊತೆ ಮದುವೆಯಾಗಿರುವುದಕ್ಕೆ ಬಲವಾಗಿ ಸಾಕ್ಷಿಯನ್ನು ಮೈತ್ರಿಯಾ ಸಂಪಾದಿಸಿರಬಹುದು. ಈಗಾಗಿ ಇಬ್ಬರ ಮದುವೆ ಸಿಂಧುಗೊಳಲಿದೆ ಎಂಬ ಮಾತುಗಳು ಕೋರ್ಟ್ ಆವರಣದಲ್ಲಿ ಕೇಳಿ ಬಂದಿತ್ತು.
ಮೈತ್ರಿಯಾ ಹಾಗೂ ಕಾರ್ತಿಕ್ ನಡುವೆ ಪ್ರೇಮ ಸಂಬಂಧವಿದ್ದ ಕಾಲದಲ್ಲೇ ಮೈತ್ರಿಯಾ ಅವರು ದೈಹಿಕ ಸಂಪರ್ಕಗೊಳಗಾಗಿದ್ದರು ಎಂಬುದಕ್ಕೆ ಪುರಾವೆ ಇದ್ದರೂ ಯಾವಾಗ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.[ದೈಹಿಕ ಸಂಪರ್ಕ ಮಾಡಿದ್ದು ಯಾರು?]
ವಿಚಾರಣೆ ಯಾವಾಗ?: ನನ್ನ ಪತಿ ಕಾರ್ತಿಕ್ ಅವರು ಈಗ ಮತ್ತೊಂದು ಮದುವೆಗೆ ಮುಂದಾಗಿದ್ದಾರೆ. ಡಿಸೆಂಬರ್ ನಲ್ಲಿ ಕೊಡಗಿನ ಯುವತಿ ಜೊತೆ ಮದುವೆಯಾಗುತ್ತಿದ್ದಾರೆ. ದಯವಿಟ್ಟು ಕಾರ್ತಿಕ್ ಮದುವೆಗೆ ಅನುಮತಿ ನೀಡಬಾರದು, ನಮ್ಮ ಮದುವೆ ಸಿಂಧುಗೊಳಿಸಬೇಕು ಎಂದು ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಕೋರ್ಟ್ ಕೈಗೆತ್ತಿಕೊಂಡಿತು.

ಅದರೆ, ಎರಡು ಕಡೆ ವಾದ ಪ್ರತಿವಾದಗಳನ್ನು ಆಲಿಸಿದ ಕೌಟುಂಬಿಕ ಕೋರ್ಟ್ ಮುಂದಿನ ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ. ಹೀಗಾಗಿ ಕಾರ್ತಿಕ್ ಗೌಡ ಅವರ ಮದುವೆಗೆ ಇರುವ ಅಡ್ಡಿ ಆತಂಕಗಳು ಇನ್ನೂ ಮುಂದುವರೆದಿದ್ದು, ನ.26ರ ನಂತರ ಏನಾಗುವುದೋ ಕಾದು ನೋಡಬೇಕಿದೆ. ಕೋರ್ಟ್ ಕಲಾಪ ಇದೇ ರೀತಿ ಮುಂದುವರೆದರೆ ಕಾರ್ತಿಕ್ ಅವರು ಮದುವೆಗೆ ಹೊಸ ಮುಹೂರ್ತ ಇಟ್ಟುಕೊಳ್ಳಬೇಕಾಗುತ್ತದೆ. [ಕೌಟುಂಬಿಕ ಕೋರ್ಟಿಗೆ ಕಾಲಿಟ್ಟಿದ್ದೇಕೆ?]
'ಕಾರ್ತಿಕ್ ಕಾನೂನುಬದ್ಧವಾಗಿ ನನ್ನ ಪತಿಯಾಗಿದ್ದಾರೆ. ಹಿಂದೂ ಧರ್ಮದ ಪ್ರಕಾರ ನಮ್ಮಿಬ್ಬರ ಮದುವೆಯಾಗಿದೆ. ಅವರು ನನ್ನನ್ನು ಪತ್ನಿ ಎಂದು ಒಪ್ಪಿಕೊಂಡು ಪತ್ನಿಗೆ ಸೇರುವ ಎಲ್ಲಾ ಹಕ್ಕುಗಳನ್ನು ನೀಡತಕ್ಕದ್ದು, ಅಲ್ಲದೆ ಕಾರ್ತಿಕ್ ಅವರು ಬೇರೆ ಯಾವುದೇ ಯುವತಿ ಜೊತೆ ಮದುವೆಯಾಗುವುದು ಕಾನೂನು ಉಲ್ಲಂಘನೆಯಾಗುತ್ತದೆ. ಇಂಥ ಪ್ರಯತ್ನಕ್ಕೆ ತಡೆ ಒಡ್ಡಬೇಕು ಎಂದು ಮೈತ್ರಿಯಾ ಅರ್ಜಿ ಹಾಕಿದ್ದಾರೆ' ಎಂದು ಅವರ ಪರ ವಕೀಲೆ ಆಕರ್ಶ್ ಕಾನಡೆ ಹೇಳಿದ್ದಾರೆ.
ಅತ್ಯಾಚಾರ, ವಂಚನೆ ಆರೋಪ ಹೊತ್ತು ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿರುವ ಕಾರ್ತಿಕ್ ಗೌಡ ಅವರಿಗೆ ಸೆಷನ್ಸ್ ನ್ಯಾಯಾಲಯ ಸೆ.8ರಂದು ಸಂಜೆ ನಿರೀಕ್ಷಣಾ ಜಾಮೀನು ಮಂಜೂರಾಗಿರುವುದನ್ನು ಇಲ್ಲಿ ಸ್ಮರಿಸಬಹುದು. [ಕಾರ್ತಿಕ್ ಗೌಡಗೆ ನಿರೀಕ್ಷಣಾ ಜಾಮೀನು]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications