ಮೈತ್ರಿಯಾ ಗೌಡ- ಕಾರ್ತಿಕ್ ಮದುವೆ ಆಗಿಲ್ಲ: ಕೋರ್ಟ್
ಬೆಂಗಳೂರು, ನ.26: ಮುಂದಿನ ತಿಂಗಳು ಹಸಮಣೆ ಏರಲು ಸಜ್ಜಾಗಿರುವ ಕಾರ್ತಿಕ್ ಗೌಡ ಅವರಿಗೆ ಕೌಟುಂಬಿಕ ಕೋರ್ಟಿನಿಂದ ಸಿಹಿ ಸುದ್ದಿ ಸಿಕ್ಕಿದೆ. ಕಾರ್ತಿಕ್ ಗೌಡ ನನ್ನ ಗಂಡ ಎಂದು ಹೇಳಿ ಮೈತ್ರಿಯಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
'ಕಾರ್ತಿಕ್ ಕಾನೂನುಬದ್ಧವಾಗಿ ನನ್ನ ಪತಿಯಾಗಿದ್ದಾರೆ. ಹಿಂದೂ ಧರ್ಮದ ಪ್ರಕಾರ ನಮ್ಮಿಬ್ಬರ ಮದುವೆಯಾಗಿದೆ. ಅವರು ನನ್ನನ್ನು ಪತ್ನಿ ಎಂದು ಒಪ್ಪಿಕೊಂಡು ಪತ್ನಿಗೆ ಸೇರುವ ಎಲ್ಲಾ ಹಕ್ಕುಗಳನ್ನು ನೀಡತಕ್ಕದ್ದು, ಅಲ್ಲದೆ ಕಾರ್ತಿಕ್ ಅವರು ಬೇರೆ ಯಾವುದೇ ಯುವತಿ ಜೊತೆ ಮದುವೆಯಾಗುವುದು ಕಾನೂನು ಉಲ್ಲಂಘನೆಯಾಗುತ್ತದೆ. ಇಂಥ ಪ್ರಯತ್ನಕ್ಕೆ ತಡೆ ಒಡ್ಡಬೇಕು ಎಂದು ಮೈತ್ರಿಯಾ ಅರ್ಜಿ ಹಾಕಿದ್ದರು.

ಆದರೆ, ಇಬ್ಬರ ನಡುವೆ ಮದುವೆಯಾಗಿದೆ ಎನ್ನುವುದಕ್ಕೆ ಸೂಕ್ತ ದಾಖಲೆಗಳು ಸಿಕ್ಕಿಲ್ಲ. ಫೋಟೋ ಪುರಾವೆಗಳನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಮದುವೆಯನ್ನು ಅನೂರ್ಜಿತಗೊಳಿಸಿದೆ. ಇದಲ್ಲದೆ, ಕಾರ್ತಿಕ್ ಗೌಡ ಅವರು ಬೇರೆ ಮದುವೆಯಾಗಬಾರದು ಮೈತ್ರಿಯಾ ಗೌಡ ಸಲ್ಲಿಸಿದ್ದ ಅರ್ಜಿ ಕೂಡಾ ತಿರಸ್ಕರಲಾಗಿದ್ದು, ಕಾರ್ತಿಕ್ ಅವರು ತಮ್ಮ ಮದುವೆ ಸಿದ್ಧತೆ ಮಾಡಿಕೊಳ್ಳಬಹುದಾಗಿದೆ. [ಕೌಟುಂಬಿಕ ಕೋರ್ಟಿಗೆ ಕಾಲಿಟ್ಟಿದ್ದೇಕೆ?]
ಕೋರ್ಟ್ ಹೇಳಿದ್ದೇನು?: ಅದರೆ, ಕಥೆ ಇಲ್ಲಿಗೆ ಮುಗಿಯುವುದಿಲ್ಲ ನಟಿ ಮೈತ್ರಿಯಾ ಹಾಗೂ ಕಾರ್ತಿಕ್ ಗೌಡ ಅವರ ಪ್ರೇಮ-ವಿವಾಹ ಪ್ರಕರಣ ಮತ್ತೆ ವಿವಿಧ ಕೋರ್ಟ್ ಗಳ ಕಟಕಟೆಯ ಮುಂದೆ ಬರುವ ಸಾಧ್ಯತೆಯಿದೆ.
ಹಿಂದೂ ಸಂಸ್ಕೃತಿ ಪ್ರಕಾರ ಮದುವೆಯಾಗಿಲ್ಲ, ತಾಳಿ ಕಟ್ಟಿರುವ ಹಾಗೂ ಸಪ್ತಪದಿ ತುಳಿದಿರುವ ಚಿತ್ರಗಳನ್ನು ಒದಗಿಸಿಲ್ಲ, ಹಿಂದೂ ವಿವಾಹ ಕಾಯ್ದೆ ಅನ್ವಯ ವಿವಾಹವನ್ನು ಊರ್ಜಿತಗೊಳಿಸಲು ಅಗತ್ಯವಾದ ದಾಖಲೆಗಳನ್ನು ಅರ್ಜಿದಾರರು ಒದಗಿಸಿಲ್ಲ. ವಿವಾಹ ನೋಂದಣಿ ಮಾಡಿಸಿ, ಮದುವೆ ಪ್ರಮಾಣ ಪತ್ರ ಪಡೆದಿಲ್ಲ ಎಂದು ಕೋರ್ಟ್ ಹೇಳಿದೆ. [ಕಾರ್ತಿಕ್ ಗೌಡಗೆ ನಿರೀಕ್ಷಣಾ ಜಾಮೀನು]
ಅದರೆ, ಕೋರ್ಟ್ ಕೆಲ ಸಾಕ್ಷಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಸೂಕ್ತ ದಾಖಲೆಗಳಿಲ್ಲದ ಕಾರಣ ಅರ್ಜಿ ತಿರಸ್ಕರಿಸಲಾಗಿದೆ. ಅರಿಶಿನ ಕೊಂಬು ಕಟ್ಟಿದರೆ ಅದು ಮದುವೆಗೆ ಸಮಾನ ಎಂಬುದು ಹಿಂದೂ ಧಾರ್ಮಿಕ ನಂಬಿಕೆ. ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಮೈತ್ರಿಯಾ ಅವರ ಪರ ವಕೀಲರು ಹೇಳಿದ್ದಾರೆ.
ಕಾರ್ತಿಕ್ ಪರ ವಕೀಲರು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ನಮ್ಮ ಅರ್ಜಿದಾರರ ಮದುವೆಗೆ ಅಡ್ಡಿಪಡಿಸದಂತೆ ಮೈತ್ರಿಯಾ ಅವರ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.ಅದರಂತೆ ಕಾರ್ತಿಕ್ ಪರ ತೀರ್ಪು ಹೊರಬಂದಿದೆ. ಮೈತ್ರಿಯಾ ಅವರ ಅರ್ಜಿಯ ಮೊದಲ ಮನವಿ : ನಾನು ಹಾಗೂ ಕಾರ್ತಿಕ್ ಪತಿ ಪತ್ನಿ ಎಂಬುದು ಅನೂರ್ಜಿತಗೊಂಡಿರುವುದರಿಂದ ಕಾರ್ತಿಕ್ ಹೊಸ ಮದುವೆಗೆ ಅನುಮತಿ ನೀಡಬಾರದು ಎಂಬ ಎರಡನೇ ಮನವಿ ತಾನೇ ತಾನಾಗಿ ಮುರಿದು ಬಿದ್ದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications