ಗರ್ಭಗುಡಿಯ ಮುಂದೆಯೇ ಕಿತ್ತಾಟ: ಏಕಾಂಗಿಯಾದಳು ತಾಯಿ ಬನಶಂಕರಮ್ಮ
ಮುಜರಾಯಿ ವ್ಯಾಪ್ತಿಗೆ ಬರುವ ಬೆಂಗಳೂರಿನ ಶ್ರೀಮಂತ ದೇವಾಲಯಗಳಲ್ಲೊಂದಾದ ಬನಶಂಕರಮ್ಮ ದೇವಾಲಯದಲ್ಲಿ ಆಡಳಿತ ಮಂಡಳಿಯ ಸದಸ್ಯರೊಬ್ಬರ ಕೌಟುಂಬಿಕ ಕಲಹ ಬೀದಿಗೆ ಬಂದು, ಬನಶಂಕರಮ್ಮನ ಗರ್ಭಗುಡಿಯ ಮುಂದೆಯೇ ಹೊಡೆದಾಟ ನಡೆದ ಘಟನೆ ನಡೆದಿದೆ.
ಬೆಂಗಳೂರು, ಅ 6: ಮುಜರಾಯಿ ವ್ಯಾಪ್ತಿಗೆ ಬರುವ ಬೆಂಗಳೂರಿನ ಶ್ರೀಮಂತ ದೇವಾಲಯಗಳಲ್ಲೊಂದಾದ ಕನಕಪುರ ರಸ್ತೆಯಲ್ಲಿರುವ ಬನಶಂಕರಮ್ಮ ದೇವಾಲಯದಲ್ಲಿ ಆಡಳಿತ ಮಂಡಳಿಯ ಸದಸ್ಯರೊಬ್ಬರ ಕೌಟುಂಬಿಕ ಕಲಹ ಬೀದಿಗೆ ಬಂದು, ಬನಶಂಕರಮ್ಮನ ಗರ್ಭಗುಡಿಯ ಮುಂದೆಯೇ ಹೊಡೆದಾಟ ನಡೆದ ಘಟನೆ ಗುರುವಾರ (ಅ 6) ನಡೆದಿದೆ.
ಶಕ್ತಿದೇವತೆ ಬನಶಂಕರಮ್ಮ ದೇವಾಲಯದಲ್ಲಿ ಈ ಹಿಂದೆ ಆರ್ಥಿಕ ಅವ್ಯವಹಾರದ ಘಟನೆಯೂ ವರದಿಯಾಗಿತ್ತು, ಇದಾದ ಮೇಲೆ ಅರ್ಚಕರ ನಡುವಿನ ಮನಸ್ತಾಪವೂ ಬಹಿರಂಗವಾಗಿತ್ತು. ಈಗ ಕೌಟುಂಬಿಕ ಕಲಹದ ರಂಪರಾಮಾಯಣಕ್ಕೆ ಬನಶಂಕರಮ್ಮ ಸಾಕ್ಷಿಯಾಗಿದ್ದಾಳೆ.

ಬನಶಂಕರಿ ದೇವಾಲಯದ ಆಡಳಿತ ಮಂಡಳಿಯ ವಿವಾಹಿತ ಸದಸ್ಯರೊಬ್ಬರು, ಅದೇ ಮಂಡಳಿಯ ಸದಸ್ಯೆಯ ಜೊತೆ ಅತೀ ಸಲುಗೆಯಿಂದ ಇರುವುದನ್ನರಿತ, ಸದಸ್ಯನ ಪತ್ನಿ ಬನಶಂಕರಮ್ಮನಿಗೆ ಪೂಜೆ ನಡೆಯುತ್ತಿದ್ದ ವೇಳೆಯೇ, ಸದಸ್ಯೆಗೆ ಭಕ್ತರ ಮುಂದೆ ರಪಾ.. ರಪಾ.. ಕೆನ್ನೆಗೆ ಬೀಸಿದ್ದಾರೆ.
ನನ್ನ ಗಂಡನ ಜೊತೆ ನೀನು ಅನೈತಿಕ ಸಂಬಂಧ ಹೊಂದಿದ್ದೀಯಾ ಎಂದು ತಾಯಿಗೆ ಪೂಜೆ ನಡೆಯುತ್ತಿದೆ ಎನ್ನುವುದನ್ನೂ ಮರೆತು, ಭಕ್ತರ ಮುಂದೆಯೇ ಆಡಳಿತ ಮಂಡಳಿಯ ಸದಸ್ಯೆಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇವಾಲಯದ ಆವರಣದಲ್ಲೇ ನಡೆದಿದ್ದು ವಿಷಾದನೀಯ.
ತನ್ನ ಪತ್ನಿ ಮತ್ತು ಆಡಳಿತ ಮಂಡಳಿಯ ಸದಸ್ಯೆಯ ಜೊತೆ ಕಿತ್ತಾಟ ನಡೆಯುತ್ತಿರುವುದನ್ನು ಅರಿತ ಆಡಳಿತ ಮಂಡಳಿಯ ಸದಸ್ಯ, ಇಬ್ಬರನ್ನೂ ಬೇರೆ ಬೇರೆ ಕಡೆ ಕಳುಹಿಸಿ, ಉಸ್ಸಪ್ಪಾ... ಎಂದಿದ್ದಾರೆ. ಈ ಎಲ್ಲಾ ಘಟನೆಗಳು ಭಕ್ತರ ಸಮ್ಮುಖದಲ್ಲೇ ನಡೆದು ಇಡೀ ಮುಜರಾಯಿ ಇಲಾಖೆ, ತಲೆತಗ್ಗಿಸುವಂತೆ ಮಾಡಿದೆ.
ಬುಧವಾರ ಬನಶಂಕರಿ ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿಣಿ, ದೇವಾಲಯದ ಆವರಣದಲ್ಲೇ ಟಪ್ಪಾಂಗುಚಿ ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದರು. (ಮಾಹಿತಿ: ಪಬ್ಲಿಕ್ ಟಿವಿ)
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications