ಬೆಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ
ಬೆಂಗಳೂರು, ನವೆಂಬರ್ 12 : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೃತಪಟ್ಟವರನ್ನು ಜನಾರ್ಧನ್ (52), ಸುಷ್ಮಿತ, ಸುದರ್ಶಿನಿ (29), ಸೋನಿಕಾ (6) ಎಂದು ಗುರುತಿಸಲಾಗಿದೆ. ತಂದೆ, ತಾಯಿ, ಮಗಳು, ಮೊಮ್ಮಗಳು ಮೃತಪಟ್ಟಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಹಾಸನ: ಗಂಡನ ಲೈಂಗಿಕ ಹಿಂಸೆಗೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ನವವಧು ಆತ್ಮಹತ್ಯೆ
ಒಂದು ಮಗುವಿನ ಮುಖಕ್ಕೆ ಪ್ಲಾಸ್ಟಿಕ್ ಹಾಕಿ ಉಸಿರುಗಟ್ಟಿಸಲಾಗಿದೆ. ಆದ್ದರಿಂದ, ಮಗುವನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಪ್ರಿಯಕರನಿಗೆ ತನ್ನ ಪ್ರೀತಿಯನ್ನು ಸಾಬೀತು ಪಡಿಸಲು ಯುವತಿ ಮಾಡಿದ್ದೇನು?
ಜನಾರ್ದನ್ ಮನೆ ತೆಗೆದುಕೊಳ್ಳುವ ಸಲುವಾಗಿ ವ್ಯಕ್ತಿಯೊಬ್ಬರಿಗೆ 25 ಲಕ್ಷ ರೂ. ಹಣವನ್ನು ನೀಡಿದ್ದರು. ಆದರೆ, ಹಣ ಪಡೆದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಹಣ ವಾಪಸ್ ಬರುವುದಿಲ್ಲ ಎಂದು ನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಬೆಂಗಳೂರಿನಲ್ಲಿ ರೌಡಿಶೀಟರ್ಗಳ ಮೇಲೆ ಪೊಲೀಸರ ಶೂಟೌಟ್
ಜನಾರ್ದನ್ ಪತ್ನಿ, ಮಕ್ಕಳಿಗೆ ವಿಷ ನೀಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಡೆತ್ನೋಟ್ನಲ್ಲಿ ಮನೆ ಖರೀದಿಗೆ ಹಣ ನೀಡಿದ ಬಗ್ಗೆ ಉಲ್ಲೇಖಿಸಿದ್ದಾರೆ.
ವಿಷಯ ತಿಳಿದ ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತ ದೇಹಗಳನ್ನು ಕಳುಹಿಸಲಾಗಿದೆ.