ಕೆ.ಆರ್. ಮಾರ್ಕೆಟ್ ನಲ್ಲಿ ಅನಧಿಕೃತ ಮಳಿಗೆ ತೆರವುಗೊಳಿಸಿ ಜಾಗ ಕೊಡಿಸಿ : ಪ್ರತಿಭಟನೆ
ಬೆಂಗಳೂರು, ಡಿಸೆಂಬರ್ 04 : ಕೆ.ಆರ್. ಮಾರುಕಟ್ಟೆಯಲ್ಲಿ ಹೂವಿನ ಅಂಗಡಿಗಳ ಜಾಗದಲ್ಲಿ ಅನಧಿಕೃತ ಮಳಿಗೆ ತೆರೆದಿದ್ದು, ರೈತರಿಗೆ ಹೂ ಮಾರಾಟಕ್ಕೆ ಜಾಗವಿಲ್ಲದಂತಾಗಿದೆ ಎಂದು ಆರೋಪಿಸಿ ರೈತರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಡುರಾತ್ರಿಯಲ್ಲಿ ರೈತರು ಹೂ ತಂದು ಬೆಳಿಗ್ಗೆ 8 ರ ವರೆಗೆ ಮಾರಾಟ ಮಾಡಬೇಕಾಗಿದೆ. ಪೂರ್ವ ದಿಕ್ಕಿನ ಖಾಲಿ ಜಾಗದಲ್ಲಿ ಮಾರಾಟ ಮಾಡುತ್ತಿದ್ದರು, ಆದರೆ ಈಗ ಇದ್ದಕ್ಕಿದ್ದ ಹಾಗೆ ನಾಲ್ಕು ಮಳಿಗೆ ತಲೆ ಎತ್ತಿವೆ.

ಇವರಿಗೆ ಯಾರು ಅಧಿಕಾರ ಕೊಟ್ಟವರು , ಬಿಬಿಎಂಪಿ ಆಯುಕ್ತರು ತೆರವು ಮಾಡಲು ಆದೇಶಿಸಿದರೂ ಮಳಿಗೆ ಕಟ್ಟಲಾಗಿದೆ. ಮಾರುಕಟ್ಟೆಯಲ್ಲಿ ಮಿನಿರೌಡಿಗಳ ತಂಡ ಇದೆ. ವೇಲು ಅಲಿಯಾಸ್ ವೇಡಿ ಅನ್ನುವ ರೌಡಿಯ ತಂಡ ಇಲ್ಲಿ ಸಕ್ರಿಯವಾಗಿದೆ. ಇವರು ಪ್ರತಿ ದಿನ ರೈತರಿಂದ, ವ್ಯಾಪಾರಿಗಳಿಂದ ವಸೂಲಿ ಮಾಡುತ್ತಾರೆ. ಹಾಕರ್ಸ್ ಝೋನ್ ನಲ್ಲಿಯೂ ಹತ್ತು ಇಪ್ಪತ್ತು ಲಕ್ಷಕ್ಕೆ ಮಳಿಗೆ ಮಾರಾಟ ಮಾಡಲಾಗುತ್ತಿದೆಎಂದು ರೈತರು ದೂರಿದರು.
ಅನಧಿಕೃತ ಮಳಿಗೆಯಿಂದ ನೂರಾರು ರೈತರಿಗೆ ಅನ್ಯಾಯ ವಾಗುತ್ತಿದೆ, ಕೂಡಲೇ ಅನಧಿಕೃತ ಅಂಗಡಿ ತೆರವು ಮಾಡುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗವಹಿಸಿದ್ದರು. ಕೆಆರ್.ಮಾರುಕಟ್ಟೆಯಿಂದ ರೈತರು ಬಿಬಿಎಂಪಿವರೆಗೆ ಜಾಥಾ ನಡೆಸಿ ದಬ್ಬಾಳಿಕೆ ನಿಲ್ಲಿಸುವಂತೆ ಆಗ್ರಹಿಸಿದರು.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications