ರಸ್ತೆ ಅಪಘಾತದಿಂದ ಹೆಚ್ಚುತ್ತಿರುವ ಸಾವು: ತಡೆಯೋದು ಹೇಗೆ?
ಬೆಂಗಳೂರು, ಜೂನ್ 22: ಸಾರ್ವಜನಿಕ ಆರೋಗ್ಯ ಇಲಾಖೆಯು 'ಸೇಫರ್ ರೋಡ್ಸ್ ಬೆಂಗಳೂರು ಇನಿಷಿಯೇಟಿವ್ ಕಾರ್ಯಕ್ರಮ' ಜಯನಗರದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಂಡಿದೆ.
ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರನ್ನು ಜಾಗೃತಿ ಮೂಡಿಸುವ ಅಗತ್ಯವಿದೆ. ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷಕ್ಕೂ ಹೆಚ್ಚು ಮಂದಿ ಅಪಘಾತದಿಂದ ಮೃತಪಡುತ್ತಿದ್ದಾರೆ. ಕರ್ನಾಟಕದಲ್ಲಿ 6.1 ಕೋಟಿ ಜನಸಂಖ್ಯೆ ಇದೆ. ಅತಿ ಹೆಚ್ಚು ರಸ್ತೆ ಅಪಘಾತವಾಗುವ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕ ಆರೋಗ್ಯ ಇಲಾಖೆ ಹಾಗೂ ಎಎಕ್ಸ್ಎ ಬ್ಯುಸಿನೆಸ್ ಸರ್ವೀಸಸ್ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.

ಕಾರ್ಯಕ್ರಮಕ್ಕೆ ಸಾರಿಗೆ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಡಾ. ಬಿ. ಬಸವರಾಜು, ಎಡಿಜಿಪಿ ರಾಘವೇಂದ್ರ ಔರಾದ್ಕರ್, ಎಎಕ್ಸ್ಎ ನ ಡೆಪ್ಯುಟಿ ಸಿಇಒ ಸೊಲಮನ್ ದೇವರಾಜ್, ಸಾರ್ವಜನಿಕ ಆರೋಗ್ಯ ಇಲಾಖೆಯ ನಿರ್ದೇಶಕ ಡಾ. ಎನ್. ದೇವರಾಜ್ ಆಗಮಿಸಲಿದ್ದಾರೆ.











Click it and Unblock the Notifications