Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
ಬೆಂಗಳೂರು, ಮಾರ್ಚ್ 29: ಹಣ, ಆಸ್ತಿ ವಿಚಾರ ಬಂದರೆ ಎಂಥವರು ಶತ್ರುಗಳಾಗಿ ಬಿಡುತ್ತಾರೆ ಎಂಬುದಕ್ಕೆ ಬೆಂಗಳೂರಿನ ಟಿ.ದಾಸರಹಳ್ಳಿಯ ಘಟನೆ ಮತ್ತೊಂದು ನಿದರ್ಶನವಾಗಿದೆ. ಇಲ್ಲಿ ತಂದೆಯಾದ ನಿವೃತ್ತ ಪಿಎಸ್ಐ ತನ್ನ ಚಿಕ್ಕಮಗನ ಮೇಲೆ ಆಸಿಡ್ ದಾಳಿ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆಸ್ತಿಯಲ್ಲಿ ಪಾಲು ಕೇಳಿದ ಎಂಬ ಕಾರಣಕ್ಕೆ ತಂದೆ ಮತ್ತು ನಿವೃತ್ತ ಪಿಎಸ್ಐ ಆಗಿರುವ ರಾಮಕೃಷ್ಣಯ್ಯ ಎಂಬುವವರು ತಮ್ಮ ಚಿಕ್ಕಮಗನ ಮೇಲೆ ಆಸಿಡ್ ಎರಚಿದ್ದಾರೆ. ಪರಿಣಾಮ ಸಂತ್ರಸ್ತ ಚಿಕ್ಕಮಗ ಕಿರಣ್ ಅವರ ಎಡಗಣ್ಣು ಸಂಪೂರ್ಣ ಹಾನಿಯಾಗಿದೆ ಎಂದು ವರದಿ ಆಗಿದೆ. ಪ್ರಕರಣ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತಂದೆ, ಸಹೋದರರ ವಿರುದ್ಧ ದೂರು ದಾಖಲು
ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ಅಪ್ಪ-ಮಕ್ಕಳ ಆಸ್ತಿ ಜಗಳ ಮಾರ್ಚ್ 25 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಣ್ಣು ಕಳೆದುಕೊಂಡ ಸಂತ್ರಸ್ತ ಕಿರಣ್ ಅವರಿಗೆ ನಗರದ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ನಿವೃತ್ತ ಪಿಎಸ್ಐ ರಾಮಕೃಷ್ಣಯ್ಯ ಅವರಿಗೆ ಮೂವರು ಮಕ್ಕಳು. ಅದರಲ್ಲಿ ಹಿರಿಯ ಮಗ ಉಪೇಂದ್ರ, ಮಗಳು ಲೀಲಾವತಿ. ಕಿರಣ ಅವರ ಮೂರನೇ ಪುತ್ರ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಂದೆ ಸೇರಿದಂತೆ ಉಪೇಂದ್ರ ಮತ್ತು ಲೀಲಾವತಿ ಆರೋಪಿಯಾಗಿದ್ದಾರೆ.
ಘಟನೆ ಹಿನ್ನೆಲೆ ಏನು?
ಮಾಗಡಿ ಸೇರಿದಂತೆ ಬೆಂಗಳೂರಿನಲ್ಲಿ ಆಸ್ತಿ ಮಾಡಿಕೊಂಡಿರುವ ತಂದೆ ರಾಮಕೃಷ್ಣಯ್ಯರನ್ನು ಚಿಕ್ಕಮಗ ಕಿರಣ್ ಆಸ್ತಿಯಲ್ಲಿ ಪಾಲು ಕೇಳಿದ್ದಾರೆ. ಇದೇ ವಿಚಾರವಾಗಿ ಕುಟುಂಬದಲ್ಲಿ ಜಗಳ ಆಗಿದೆ. ಸಹೋದರ ಮತ್ತು ತಂದೆ ಮಧ್ಯೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಈ ವೇಳೆ ತಂದೆ ರಾಮಕೃಷ್ಣಯ್ಯ ಅವರು ರಸಾಯನಿಕ ಮಿಶ್ರಣದ (ಆಸಿಡ್) ದ್ರಾವಣವನ್ನು ಮಗನ ಮೇಲೆ ಎರಚಿದ್ದಾರೆ. ಇದರಿಂದ ಕಿರಣ್ ಕಣ್ಣಿಗೆ ಹಾನಿಯಾಗಿದೆ. ಮಗ ಕಿರಣ್ ಬೇರೆ ರಾಜ್ಯದ ಯುವತಿಯನ್ನು ವಿವಾಹವಾಗಿದ್ದಕ್ಕೆ ತಂದೆ ಕೋಪಗೊಂಡಿದ್ದರು. ಮಗನ ಮದುವೆ ಅವರಲ್ಲಿ ಅಸಮಾಧಾನ ತಂದಿತ್ತು. ಹೀಗಿದ್ದಾಗ ಆತ ಆಸ್ತಿಯಲ್ಲಿ ಪಾಲು ಕೇಳಿದ್ದು ಅವರಲ್ಲಿ ಆಕ್ರೋಶ ಹೆಚ್ಚಾಗುವಂತೆ ಮಾಡಿತ್ತು.
ಚಿಕ್ಕಮಗನಿಗೆ ಆಸ್ತಿಯಲ್ಲಿ ಪಾಲು ಕೊಡಲು ತಂದೆ ಹಾಗೂ ಇಬ್ಬರು ಹಿರಿಯ ಮಕ್ಕಳಿಗೆ ಇಷ್ಟವಿರಲಿಲ್ಲ ಎಂದು ತಿಳಿದು ಬಂದಿದೆ. ಈ ಕಾರಣದಿಂದಲೇ ಆಸಿಡ್ ದಾಳಿ ನಡೆದಿದೆ ಎನ್ನಲಾಗಿದೆ.
ತಂದೆ ರಾಮಕೃಷ್ಣಯ್ಯ ಅವರು ಮಾಗಡಿ ತಾಲೂಕಿನಲ್ಲಿ ನಾಲ್ಕು ಎಕರೆ ಜಮೀನು ಹೊಂದಿದ್ದಾರೆ. ಅಲ್ಲದೇ ನಗರದಲ್ಲಿ ಸ್ವಂತಹ ಮನೆ ಹಾಗೂ ಸೈಟುಗಳನ್ನು ಹೊಂದಿದ್ದಾರೆ. ಪಿಎಸ್ಐ ಆಗಿದ್ದ ಅವರು ಆರ್ಥಿಕವಾಗಿ ಚೆನ್ನಾಗಿದ್ದರು. ಈ ಆಸ್ತಿಯಲ್ಲಿ ಪಾಲು ಕೇಳಿದ ಚಿಕ್ಕಮಗ ಕಿರಣ್ ತನಗೆ ಇಷ್ಟವಿಲ್ಲದ ಮದುವೆ ಆಗಿದ್ದಾನೆ ಎಂದು ಬೇಸರವಾಗಿದ್ದ ತಂದೆ ಈ ರೀತಿ ಮಗನ ಮೇಲೆ ಮೃಗೀಯ ವರ್ತನೆ ತೋರಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Dawood Ibrahim: "ರಿಯಲ್ ಡಾನ್ ದಾವೂದ್ ಇಬ್ರಾಹಿಂ" ಸ್ಟಿಕ್ಕರ್ ಹಾಕಿಸಿದ್ದ ಬಸ್ ಚಿಕ್ಕಮಗಳೂರಿನಲ್ಲಿ ಪೊಲೀಸ್ ವಶಕ್ಕೆ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications