ಇದು ಫೇಸ್ ಬುಕ್ ಅವಾಂತರ, ಏಕಾಂತದ ವಿಡಿಯೋ ಕಳಿಸಿ ಬ್ಲ್ಯಾಕ್ ಮೇಲ್
ಬೆಂಗಳೂರು, ಮೇ 27: ಫೇಸ್ ಬುಕ್ ಎಂಬುದು ಬೇರೆಯದೇ ಜಗತ್ತು ಎಂದು ಸಕಾರಾತ್ಮಕ ಹಾಗೂ ನಕಾರಾತ್ಮಕ ಸಂಗತಿಗಳು ಚಾಲ್ತಿಯಲ್ಲಿವೆ. ಬೆಂಗಳೂರಿನಲ್ಲಿ ನಡೆದ ಈ ಘಟನೆ ಬಗ್ಗೆ ಗಮನಿಸಿದರೆ ಪೋಷಕರು ಮಕ್ಕಳ ಬಗ್ಗೆ ಎಷ್ಟು ಎಚ್ಚರದಿಂದ ಇದ್ದರೂ ಸಾಲದು ಎನಿಸುವುದು ಹೌದು.
ಹದಿಮೂರು ವರ್ಷದ ಬಾಲಕನೊಬ್ಬ ತನಗೆ ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಗೆ ಪೋಷಕರ ಏಕಾಂತದ ವಿಡಿಯೋಗಳನ್ನು ಕಳಿಸಿದ್ದು, ಅದನ್ನು ಮುಂದೆ ಮಾಡಿಕೊಂಡು ಬಾಲಕನ ತಂದೆಗೆ ಅಪರಿಚಿತನೊಬ್ಬ ಒಂದು ಕೋಟಿ ರುಪಾಯಿ ಹಣಕ್ಕಾಗಿ ಒತ್ತಾಯಿಸಿದ್ದಾನೆ. ಮನೆಯ ಕೊಠಡಿಯಲ್ಲಿ ಪತ್ನಿಯೊಂದಿಗೆ ಇದ್ದ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.[ಬಿಜೆಪಿ ವಕ್ತಾರ ರಮೇಶ್ ಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ]

ಇದೀಗ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆರೋಪಿಗಾಗಿ ಶೋಧ ನಡೆಯುತ್ತಿದೆ. ದೂರು ನೀಡಿದ ವ್ಯಕ್ತಿಯ ಮಗ ಈಚೆಗೆ ಫೇಸ್ ಬುಕ್ ನಲ್ಲಿ ಖಾತೆ ತೆರೆದಿದ್ದ. ಆತನನ್ನು ತೇಜಸ್ ಪಟೇಲ್ ಎಂಬಾತ ಸ್ನೇಹಿತನನ್ನಾಗಿ ಮಾಡಿಕೊಂಡಿದ್ದ. ಆ ನಂತರ ಬಾಲಕನ ಸ್ನೇಹ ಸಂಪಾದಿಸಿ, ಅಶ್ಲೀಲ ಚಿತ್ರ ಹಾಗೂ ವಿಡಿಯೋಗಳನ್ನು ಕಳಿಸಿದ್ದಾನೆ.
ಬಾಲಕನಿಗೆ ಅದೇನು ಹೇಳಿ ಪುಸಲಾಯಿಸಿದನೋ ತಂದೆ-ತಾಯಿಯ ಏಕಾಂತದ ವಿಡಿಯೋ ಕಳಿಸು ಎಂದಿದ್ದಾನೆ. ಆತನ ಮಾತಿನಂತೆಯೇ ಬಾಲಕ ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯ ಸೆರೆ ಹಿಡಿದು ಕಳಿಸಿದ್ದಾನೆ. ಅದನ್ನು ಇಟ್ಟುಕೊಂಡು ಒಂದು ಕೋಟಿ ನೀಡುವಂತೆ ಅಪರಿಚಿತ ಬೇಡಿಕೆ ಇಟ್ಟಿದ್ದಾನೆ.[ಫೇಸ್ ಬುಕ್ ನಲ್ಲಿ ಅವಹೇಳನಾಕರಿ ಪೋಸ್ಟ್: ಹಂಪಿ ವಿವಿ ಅಧೀಕ್ಷಕ ಅರೆಸ್ಟ್]
ಬಾಲಕನ ಮೇಲೆ ಅನುಮಾನದಿಂದ ತಂದೆ ವಿಚಾರಿಸಿದಾಗ ವಿಷಯ ಗೊತ್ತಾಗಿದೆ. ಇದೀಗ ಫೇಸ್ ಬುಕ್ ಕಂಪೆನಿಗೆ ಪತ್ರ ಬರೆದಿರುವ ತನಿಖಾಧಿಕಾರಿಗಳು ಆರೋಪಿಯ ಪತ್ತೆಗಾಗಿ ಪ್ರಯತ್ನ ಮುಂದುವರಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ












Click it and Unblock the Notifications