ಅಂಕ ಪಟ್ಟಿ ಅಡವಿಟ್ಟುಕೊಂಡು ಪ್ರಶ್ನೆ ಪತ್ರಿಕೆ ನೀಡಿದ್ದ ಕಿರಾತರು !
ಬೆಂಗಳೂರು, ಜನವರಿ 29: ಎಫ್ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಿಸಿಬಿ ತನಿಖೆಯಲ್ಲಿ ಸ್ಪೋಟಕ ಸಂಗತಿಗಳು ಹೊರ ಬಿದ್ದಿವೆ. ಹಣ ಕೊಡದ ಅಭ್ಯರ್ಥಿಗಳಿಂದ ಖಾಲಿ ಚೆಕ್ ಹಾಗೂ ಎಸ್ ಎಸ್ಎಲ್ ಸಿ ಮತ್ತು ಪಿಯುಸಿ ಅಸಲಿ ಅಂಕಪಟ್ಟಿಗಳ್ನು ತೆಗೆದುಕೊಂಡು ಆರೋಪಿಗಳು ತಮ್ಮ ಬಳಿ ಇಟ್ಟುಕೊಂಡಿದ್ದರು ! ಮಾತ್ರವಲ್ಲ, ಪರೀಕ್ಷೆ ಬರೆದ ಬಳಿಕವೂ ಹಣ ಕೊಡಲು ಅವಕಾಶ ನೀಡಿದ್ದರು!
ಎಫ್ಡಿಎ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ನಡೆಸಿದ ತನಿಖೆ ವೇಳೆ ಆರೋಪಿಗಳಿಂದ ಹೊರ ಬಿದ್ದಿರುವ ಸತ್ಯಗಳಿವು. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅದರ ಲಾಭ ಪಡೆದವರ ಪೈಕಿ ಈವರೆಗೂ 24 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಪ್ರಮುಖ ಆರೋಪಿ ರಾಚಪ್ಪನನ್ನು ಮತ್ತೆ ಪೊಲೀಸ್ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ಸನಾ ಬೇಡಿಯಿಂದ ಪ್ರಶ್ನೆ ಪತ್ರಿಕೆ ಲೀಕ್ ಬಳಿಕ ಅದು ಚಂದ್ರು ಕೈ ಸೇರಿತ್ತು. ರಾಚಪ್ಪ ಮತ್ತು ಇತರರು ಕಮೀಷನ್ ಅಸೆಗಾಗಿ ವಿದ್ಯಾರ್ಥಿಗಳಿಂದ ತಲಾ ಹತ್ತು ಲಕ್ಷ ರೂ. ನಂತೆ ಡೀಲ್ ಕುದುರಿಸಿದ್ದ. ಚಂದ್ರುಗೆ ಐದು ಲಕ್ಷ ರೂಪಾಯಿ ನೀಡಿ ಬಾಕಿ ಐದು ಲಕ್ಷ ರೂ. ತಾನೇ ಜೇಬಿಗೆ ಇಳಿಸಿದ್ದ. ತನ್ನ ಪರಿಚಿತ ಐವರನ್ನು ಕರೆದು ಎಫ್ ಡಿಎ ಪ್ರಶ್ನೆ ಪತ್ರಿಕೆ ಡೀಲ್ ಕುದುರಿಸಿದ್ದ ಎಂಬ ಸಂಗತಿ ಬಯಲಾಗಿದೆ.

ಪ್ರಮುಖ ಆರೋಪಿ ಚಂದ್ರು ಬಳಿ ಪ್ರಶ್ನೆ ಪತ್ರಿಕೆ ನೀಡುವಂತೆ ಕೆಲವು ಅಭ್ಯರ್ಥಿಗಳು ಗೋಗರೆದಿದ್ದರು. ಕಾಲಾವಕಾಶ ಕೇಳಿದ್ದ ಅಭ್ಯರ್ಥಿಗಳಿಂದ ಒಂದೆರಡು ಲಕ್ಷ ಮುಂಗಡ ಪಡೆದು, ಅವರ ಅಸಲಿ ಅಂಕ ಪಟ್ಟಿಗಳನ್ನು ಪಡೆದುಕೊಂಡಿದ್ದ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ನೀಡದೇ ಕಾಲವಕಾಶ ಕೇಳಿದ್ದ ಅಭ್ಯರ್ಥಿಗಳ ಅಂಕ ಪಟ್ಟಿಗಳನ್ನು ಅಡವಿಟ್ಟುಕೊಂಡಿರುವ ಸಂಗತಿ ಬಾಯಿ ಬಿಟ್ಟಿದ್ದಾನೆ. ಚಂದ್ರು ನೀಡಿದ ಮಾಹಿತಿ ಮೇರೆಗೆ ಆತನ ಮನೆಯಲ್ಲಿದ್ದ ಚೆಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಐವರು ಅಭ್ಯರ್ಥಿಗಳಿಗೆ ಸಂಬಂಧಿಸಿದ ಅಂಕ ಪಟ್ಟಿಗಳನ್ನು ಸಹ ಜಪ್ತಿ ಮಾಡಿದ್ದಾರೆ.
ಉಳ್ಳಾಲ ಉಪಕಾರ್ ಬಡಾವಣೆಯಲ್ಲಿ ಪ್ಲಾಟ್ ಖರೀದಿಸಿದ್ದ ಚಂದ್ರು ಬಂದ ಹಣವನ್ನು ಪ್ಲಾಟ್ ಗೂ ವಿನಿಯೋಗಿಸಿದ್ದ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಬಗ್ಗೆ ತನಗೆ ಪರಿಚಿತ ಸನಾ ಬೇಡಿ ಜತೆ ಸೇರಿ ಮೊದಲೇ ಪ್ಲಾನ್ ರೂಪಿಸಿದ್ದರು. ಕೆಪಿಎಸ್ ಸಿ ಯಲ್ಲಿ ಪ್ರಶ್ನೆ ಪತ್ರಿಕೆ ಸಿಗುವುದು ಖಚಿತವಾಗುತ್ತಿದ್ದಂತೆ, ಚಂಧ್ರು ತನ್ನ ಪರಿಚಿತರ ಮೂಲಕ ಸರ್ಕಾರಿ ಹುದ್ದೆ ಆಕಾಂಕ್ಷಿಗಳನ್ನು ಸಂಪರ್ಕಿಸಿದ್ದ. ನಿಮಗೆ ಪ್ರಶ್ನೆ ಪತ್ರಿಕೆ ಎರಡು ದಿನ ಮುನ್ನ ಕೊಡುತ್ತೇವೆ. ಒಂದು ವೇಳೆ ಆಗದಿದ್ದ ಪಕ್ಷದಲ್ಲಿ ನನಗೆ ಉನ್ನತ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಸಂಪರ್ಕವಿದೆ. ಪಕ್ಕಾ ನಿಮ್ಮ ಕೆಲಸ ಮಾಡಿಸುವ ಜವಾಬ್ಧಾರಿ ನನ್ನದು ಎಂದು ಭರವಸೆ ತುಂಬಿದ್ದರು. ಚಂದ್ರು ಸರ್ಕಾರಿ ಹುದ್ದೆಯಲ್ಲಿದ್ದಿದ್ದರಿಂದ ಬಹುತೇಕರು ನಂಬುತ್ತಿದ್ದರು. ಸರ್ಕಾರಿ ಕೆಲಸವಿದ್ದರೂ ಅತಿಯಾಸೆಗೆ ಬಿದ್ದು ಚಂದ್ರು ಜೈಲು ಸೇರಿದ್ದಾನೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications