ಮೆಡಿಕಲ್ ಸೀಟು ಭೀತಿ: ವಿದ್ಯಾರ್ಥಿನಿ ಆತ್ಮಹತ್ಯೆ

ಬನಶಂಕರಿ 2ನೇ ಹಂತ, ಕಾವೇರಿನಗರದ ನಿವಾಸಿ ಎನ್.ವಿನುತಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕೋಲಾರ ಮೂಲದ ನಂದಕುಮಾರ್ ಮತ್ತು ಲಕ್ಷ್ಮಿ ದಂಪತಿ ಪುತ್ರಿ ವಿನುತಾ ಕನಕಪುರ ರಸ್ತೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಪಿಯಸಿಯಲ್ಲಿ ವಿಜ್ಞಾನ ವಿಷಯವನ್ನು ಆರಿಸಿಕೊಂಡಿದ್ದಳು. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವಿನುತಾ ಮುಂದೆ ವೈದ್ಯೆಯಾಗಬೇಕೆಂದು ಕಷ್ಟಪಟ್ಟು ಓದಿ ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 518 ಅಂಕ ಪಡೆದಿದ್ದಳು.
ವಿನುತಾಗೆ ಸಿಇಟಿ ಪರೀಕ್ಷೆಯಲ್ಲಿ 6044 ಶ್ರೇಯಾಂಕ ಬಂದಿದ್ದು, ಮೆಡಿಕಲ್ ಸೀಟು ಸಿಗುವುದಿಲ್ಲ ಎಂಬ ಆತಂಕಕ್ಕೆ ಒಳಗಾಗಿದ್ದಳು. ಮೆಡಿಕಲ್ ಕೋರ್ಸ್ ಪ್ರವೇಶಕ್ಕೆ ದಾಖಲೆ ಪರಿಶೀಲನೆಗೆ ಹಿಂದೇಟು ಹಾಕುತ್ತಿದ್ದ ಮಗಳಿಗೆ ಧೈರ್ಯ ಹೇಳಿ ತಂದೆ ಮಂಗಳವಾರ ಮಲ್ಲೇಶ್ವರದಲ್ಲಿರುವ ಸಿಇಟಿ ಕಚೇರಿಗೆ ದ್ವಿಚಕ್ರ ವಾಹನದಲ್ಲಿ ಮಧ್ಯಾಹ್ನ ಕರೆದೊಯ್ದಿದ್ದರು.
ಮಗಳನ್ನು ಕೆಳಗಿಳಿಸಿ ಸ್ಕೂಟರ್ನ್ನು ಪಾರ್ಕ್ ಮಾಡಲು ತಂದೆಯವರು ಹೋಗಿದ್ದಾರೆ. ಪಾರ್ಕ್ ಮಾಡಿ ಸಿಇಟಿ ಕಚೇರಿಯ ಮುಂದುಗಡೆಗೆ ಬಂದಾಗ ಮಗಳು ಇಲ್ಲದಿರುವುದು ತಂದೆಯವರ ಗಮನಕ್ಕೆ ಬಂದಿದೆ. ಗಾಬರಿಗೊಂಡ ತಂದೆ ಮಗಳ ಮೊಬೈಲ್ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ.
ಮಗಳು ಮನೆಗೆ ಹೋಗಿರಬಹುದು ಎಂದು ಭಾವಿಸಿ ನಂದಕುಮಾರ್ ಮನೆಗೆ ಬಂದಿದ್ದಾರೆ. ಮನೆಯಲ್ಲಿ ಮಗಳು ಇಲ್ಲದಿರುವುದನ್ನು ಕಂಡು ಆಕೆಯ ಸ್ನೇಹಿತೆಯರು, ಸಂಬಂಧಿಕರ ಮನೆಗೆ ಫೋನ್ ಮಾಡಿ ವಿಚಾರಿಸಿದ್ದರೂ ವಿನುತ ಬಗ್ಗೆ ಸುಳಿವು ಸಿಗಲಿಲ್ಲ. ಕೊನೆಗೆ ರಾತ್ರಿ 1 ಗಂಟೆಯ ವೇಳೆಗೆ ಮಗಳು ಕಾಣೆಯಾಗಿರುವುದರ ಬಗ್ಗೆ ನಂದಕುಮಾರ್ ದೂರು ನೀಡಿದ್ದರು.
ಮಲ್ಲೇಶ್ವರ ರೈಲ್ವೆ ನಿಲ್ದಾಣದ ಹಳಿ ಮೇಲೆ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ನಂದಕುಮಾರ್ ಅವರನ್ನು ರೈಲ್ವೆ ಹಳಿ ಬಳಿ ಕರೆದೊಯ್ದು ತೋರಿಸಿದಾಗ ಇದು ವಿನುತಾಳ ಶವ ಎಂದು ಖಚಿತಪಡಿಸಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಸಿಟಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications