ಸೋಲಿಗೆ ಹೆದರಿ ಬಿಬಿಎಂಪಿ ಚುನಾವಣೆ ಮುಂದೂಡಿಕೆ: ಎಎಪಿ
ಬೆಂಗಳೂರು, ಸೆ. 24: ಬಿಬಿಎಂಪಿ ವಾರ್ಡ್ ಸಂಖ್ಯೆಗಳನ್ನು 250 ಕ್ಕೆ ಹೆಚ್ಚಳ ಮಾಡಲು ಶಾಸಕ ಎಸ್ ರಘು ನೇತೃತ್ವದ ಜಂಟಿ ಸಲಹಾ ಸಮಿತಿ ಶಿಫಾರಸು ಮಾಡಿದೆ. ಹೊಸ ವಾರ್ಡ್ಗಳ ರಚನೆ ಮತ್ತು ಚುನಾವಣೆಗೆ ಮೀಸಲಾತಿ ಮರು ನಿಗದಿ ಮಾಡಬೇಕಾಗಿರುವುದರಿಂದ ಕೂಡಲೇ ಚುನಾವಣೆ ನಡೆಸಲು ಆಗುವುದಿಲ್ಲ ಎಂಬ ಕುಂಟು ನೆಪ ಮಾಡಿಕೊಂಡಿರುವ ರಾಜ್ಯ ಸರ್ಕಾರ, 'ಕರ್ನಾಟಕ ಪೌರಸಭೆಗಳ ಕಾಯ್ದೆ (ಮೂರನೇ ತಿದ್ದುಪಡಿ) ಮಸೂದೆ'ಯನ್ನು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದಿರುವುದು ಬಿಜೆಪಿಯವರ ಪುಕ್ಕಲುತನವನ್ನು ತೋರಿಸುತ್ತದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಬಿಜೆಪಿಯ ಆಂತರಿಕ ಸಮೀಕ್ಷೆಯ ಪ್ರಕಾರ, ಕೂಡಲೇ ಬಿಬಿಎಂಪಿ ಚುನಾವಣೆ ನಡೆದರೆ ಹೀನಾಯವಾಗಿ ಸೋಲುವುದಾಗಿ ವರದಿ ಬಂದಿದೆ. ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣ ವೈಫಲ್ಯ ಸೇರಿದಂತೆ ಸದನದಲ್ಲಿ ಅನೇಕ ಜನವಿರೋಧಿ ರೈತ ವಿರೋಧಿ ಕಾರ್ಮಿಕ ವಿರೋಧಿ ಮಹಿಳಾ ವಿರೋಧಿ ಮಸೂದೆಗಳನ್ನು ಮಂಡಿಸಿ ಉಳಿಗಮಾನ್ಯ ಪದ್ಧತಿ ಜೀತದಾಳು ಪದ್ಧತಿ ಮತ್ತು ವಸಾಹತುಶಾಹಿ ಪದ್ಧತಿಗಳನ್ನು ಮತ್ತೆ ಪುನರ್ ಪ್ರತಿಷ್ಠಾಪಿಸಿದೆ.
ಈ ಕೆಟ್ಟ ಆಡಳಿತದಿಂದ ಬೇಸತ್ತಿರುವ ಜನ ಬಿಜೆಪಿ ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಗಳಿಂದಾಗಿ ಅಧಿಕಾರವನ್ನು ಹಿಡಿಯುವುದು ಅಸಾಧ್ಯ ಎಂಬುದು ಬಿಜೆಪಿಗರಿಗೆ ಅರಿವಾಗಿದೆ . ಆದ ಕಾರಣ ಅತ್ಯಂತ ವ್ಯವಸ್ಥಿತವಾಗಿ ಚುನಾವಣೆಯನ್ನು ಮುಂದೂಡುತ್ತಿವೆ ಎನ್ನುವುದು ಆಮ್ ಆದ್ಮಿ ಪಕ್ಷದ ಆರೋಪ.

ಹಿಂಬಾಲಕರಿಗೆ ಅಧಿಕಾರ ನೀಡಲು ವಾರ್ಡ್ ಸಂಖ್ಯೆ ಹೆಚ್ಚಳ
ಒಳ ಜಗಳದಲ್ಲೇ ಮುಳುಗಿರುವ ಬಿಜೆಪಿ ನಾಯಕರಿಂದ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಕುರ್ಚಿ ಭದ್ರವಾಗಿಲ್ಲ. ಅಲ್ಲದೇ ಅನೇಕ ವರ್ಷಗಳಿಂದ ಪಕ್ಷದಲ್ಲಿದ್ದು ಅವಕಾಶ ಸಿಗದ ಹಿಂಬಾಲಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದು ಇದಕ್ಕೆ ಹೆದರಿರುವ ಯಡಿಯೂರಪ್ಪ ಅವರು "ನಾನು ತಿಂದಿದ್ದೇವೆ, ಈಗ ನೀವು ತಿನ್ನಿ" ಎನ್ನುವ ಯೋಜನೆಯನ್ನು ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ಮೂಲಕ ತರುತ್ತಿದ್ದಾರೆ.

ಏಕ ಗವಾಕ್ಷಿ (ಸಿಂಗಲ್ ವಿಂಡೊ) ಭ್ರಷ್ಟಾಚಾರಕ್ಕೆ ಅವಕಾಶ
ಅಲ್ಲದೇ ಈಗಿರುವ ವಾರ್ಡ್ಗಳು ವಿಧಾನಸಭಾ ಕ್ಷೇತ್ರಗಳ ನಡುವೆ ಹಂಚಿ ಹೋಗಿದ್ದು ಆಯಾಯ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಒಳಗಡೆ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಅವರು ಹೇಳುವ ಮೂಲಕ ಏಕ ಗವಾಕ್ಷಿ (ಸಿಂಗಲ್ ವಿಂಡೊ) ಭ್ರಷ್ಟಾಚಾರಕ್ಕೆ ಅವಕಾಶ ನೀಡುತ್ತಿದ್ದಾರೆ.

ಕಿಂಚಿತ್ತೂ ವಿರೋಧ ವ್ಯಕ್ತಪಡಿಸದ ಕಾಂಗ್ರೆಸ್ ಹಾಗೂ ಜೆಡಿಎಸ್
ಸರ್ಕಾರದ ಈ ನಿರ್ಧಾರಕ್ಕೆ ಕಿಂಚಿತ್ತೂ ವಿರೋಧ ವ್ಯಕ್ತಪಡಿಸದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸರ್ಕಾರದ ಈ ನಡೆಯನ್ನು ಕಿಂಚಿತ್ತು ವಿರೋಧಿಸದೇ ಸರ್ಕಾರದ ಜತೆ ಕೈಜೋಡಿಸಿರುವುದು ಸ್ಪಷ್ಟವಾಗಿ ಎದ್ದು ಕಾಣುತ್ತಿದೆ .
Recommended Video

ನೀಚ ರಾಜಕೀಯ ಮಾಡುತ್ತಿರುವ 3 ಪಕ್ಷಗಳು
ವಿಧಾನಸಭೆ ಅಧಿವೇಶನವನ್ನು ದುರುಪಯೋಗ ಪಡಿಸಿಕೊಂಡು ಸರಿಯಾದ ಸಮಯಕ್ಕೆ ಚುನಾವಣೆ ನಡೆಸದೆ ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವದ ಬದ್ದತೆಗೆ ದಕ್ಕೆ ತರುತ್ತಿರುವ ಇವರುಗಳ ನಡೆ ದುರದೃಷ್ಟಕರ.
ಜನ ಸಾಮಾನ್ಯ ಕೊರೋನಾ ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗದೆ ಸಾಯುತ್ತಿರುವ ಹೊತ್ತಿನಲ್ಲೂ ನೀಚ ರಾಜಕೀಯ ಮಾಡುತ್ತಿರುವ 3 ಪಕ್ಷಗಳ ನಡೆಯನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ












Click it and Unblock the Notifications