ಪೌರಕಾರ್ಮಿಕರ ಮಕ್ಕಳಿಗೂ ಫಾರಿನ್ ಟೂರು,ಒಳ್ಳೆ ಸ್ಕೂಲು
ಪೌರ ಕಾರ್ಮಿಕರಿಗೆ ಮನೆಕಟ್ಟಿಕೊಳ್ಳಲು 7.5 ಲಕ್ಷ ರೂ. ನೆರವು, ಸಂಬಳದಲ್ಲಿ ಹೆಚ್ಚಳ, ಅವರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಶೇ. 10 ರಷ್ಟು ಮೀಸಲಾತಿ, ವಿದೇಶಿ ಪ್ರವಾಸ, ಊಟದ ವ್ಯವಸ್ಥೆ ಹೀಗೆ ಅವರಿಗೆ ಅನೇಕ ಸವಲತ್ತುಗಳನ್ನು ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಎಚ್. ಆಂಜನೇಯ ತಿಳಿಸಿದರು.
ವಿಕಾಸ ಸೌಧದಲ್ಲಿ ಸಫಾಯಿ ಕರ್ಮಚಾರಿಗಳು ಮತ್ತು ಮ್ಯಾನುಯಲ್ ಸ್ಕ್ಯಾವೆಂಜರ್ಗಳ ಸಬಲೀಕರಣ ಕುರಿತು ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿದರು. ಪೌರಕಾರ್ಮಿಕರು ಮಾಡುವುದು ಶ್ರೇಷ್ಠ ಕಾರ್ಯ ಅವರ ದುಡಿಮೆಯಿಂದಲೇ ಸ್ವಚ್ಛ ಭಾರತ ನಿರ್ಮಾಣವಾಗುತ್ತದೆ ಪೌರಕಾರ್ಮಿಕರು ಮಾಡುವುದು ಶ್ರೇಷ್ಠ ಕಾರ್ಯ ಅವರ ದುಡಿಮೆಯಿಂದಲೇ ಸ್ವಚ್ಛ ಭಾರತ ನಿರ್ಮಾಣವಾಗುತ್ತದೆ ಎಂದರು.[ನಮಗೂ ದೀಪಾವಳಿ ಬೋನಸ್ ಕೊಡಿ ಎಂದ್ರು ಗುತ್ತಿಗೆ ಪೌರ ಕಾರ್ಮಿಕರು]

ಮೈಸೂರಿಗೆ ಸ್ವಚ್ಛ ಭಾರತ್ ಪ್ರಶಸ್ತಿ ಬಂದಿರುವುದು ಈ ಪೌರಕಾರ್ಮಿಕರಿಂದಲೇ, ಪೌರಕಾರ್ಮಿಕರು ಹಿಂದಿನಿಂದಲೂ ತುಳಿತಕ್ಕೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಅವರಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವರ ಸಂಬಳವನ್ನು ಹೆಚ್ಚಿಸಿದ್ದು ಅದನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪೌರ ಕಾರ್ಮಿಕ ಮಂಡಳಿಯನ್ನು ಸ್ಥಾಪಿಸಲಾಗಿದೆ.
ಈ ಬಾರಿ ಪರಿಶಿಷ್ಟ ಜಾತಿ, ಬುಡಕಟ್ಟು ಯೋಜನೆಗೆ ಸರ್ಕಾರ 200 ಕೋಟಿ ಮೀಸಲಿಟ್ಟಿದ್ದು, ಅದನ್ನು ಈ ವರ್ಗದವರ ಕ್ಷೇಮಾಭಿವೃದ್ಧಿಗೆ ಬಳಸಲಾಗುತ್ತಿದೆ. ಜಿಲ್ಲೆಗಳಲ್ಲಿ ಈ ವರ್ಗದವರಿಗೆ ಸ್ಮಶಾನ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ, ವಿದೇಶಿ ಓದಿಗೆ ಸಹಾಯಹಸ್ತ ಲಭಿಸುತ್ತಿವೆ. ಈ ಸರ್ಕಾರ ಬಂದ ನಂತರ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ಅಥವಾ 20 ರೂ. ಹಣ ಸಿಗುತ್ತಿದೆ ಎಂದರು.
ಪೌರಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಅವರನ್ನು ಯಾರೂ ಶೋಷಿಸಬಾರದು. ಗುಂಡಿಗಳ ಸ್ವಚ್ಚ ಕಾರ್ಯಗಳನ್ನು ಆಧುನಿಕ ಉಪಕರಣ ಬಳಸಿ ಮಾಡಬೇಕು. ಅಲ್ಲದೆ ಪೌರಕಾರ್ಮಿಕರ ಚಿಕಿತ್ಸೆಗಾಗಿ ಸಹ ಹಣ ನೀಡಲಾಗುವುದು. ಪೌರಕಾರ್ಮಿಕರ ಮಕ್ಕಳು ಸಹ ಶಿಕ್ಷಿತರಾಗಬೇಕು. ಜಿಲ್ಲಾ ತಾಲ್ಲೂಕು ಮಟ್ಟದಲ್ಲಿ ಪೌರಕಾರ್ಮಿಕರ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications