Fengal Effect In Bengaluru: ಫೆಂಗಲ್ನಿಂದ ಬೆಂಗಳೂರಿನಲ್ಲಿ ಜನ ಕಂಗಾಲು: ವೀಕೆಂಡ್ ಪ್ಲಾನ್ಗೆ ತಣ್ಣೀರು!
weekend in bengaluru: ತಮಿಳುನಾಡಿನ ಕರಾವಳಿ ಪ್ರದೇಶದಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಶನಿವಾರ ತಡರಾತ್ರಿಯಿಂದ ಮಳೆ ಶುರುವಾಗಿದ್ದು, ಮಂಗಳವಾರದ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಿಂದಾಗಿ ಬೆಂಗಳೂರಿನ ಜನ ವಾರಾಂತ್ಯದ ಪ್ಲಾನ್ಗಳು ತಲೆಕೆಳಗಾಗಿವೆ. ಬೆಂಗಳೂರಿನಲ್ಲಿ ವಾರಾಂತ್ಯವೆಂದರೆನೇ ಮೋಜು - ಮಸ್ತಿಗೆ ಫೇಮಸ್ ಆದರೆ, ಈ ಬಾರಿಯ ವಾರಾಂತ್ಯ ವರುಣನ ಆಗಮನದಿಂದ ಮಂಕಾಗಿದೆ.
ಶನಿವಾರ ರಾತ್ರಿಯಿಂದಲೇ ಬೆಂಗಳೂರಿನಲ್ಲಿ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ಬೆಂಗಳೂರಲ್ಲಿ ಮಳೆಯ ಜೊತೆ ಜೊತೆಗೆ ಚಳಿ ವಾತಾವರಣವೂ ಹೆಚ್ಚಾಗಿದೆ. ಹೀಗಾಗಿ, ಬೆಂಗಳೂರಲ್ಲಿ ಚಳಿ - ಮಳೆಯ ಮಿಶ್ರ ವಾತಾವರಣ ಇದೆ. ಜನ ಚಳಿ - ಮಳೆಗೆ ನಡಗುತ್ತಿದ್ದಾರೆ. ಬೆಂಗಳೂರಲ್ಲಿ ಶನಿವಾರ ರಾತ್ರಿಯಿಂದಲೇ ಧಾರಾಕಾರ ಮಳೆ ಮುಂದುವರಿದಿದೆ. ಮಳೆಯಿಂದ ವಾಹನ ಸವಾರರು ಶನಿವಾರ ರಾತ್ರಿ ಪರದಾಡಿದ್ದರು. ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ರಾಜಾಜಿನಗರ ಹಾಗೂ ಶ್ರೀನಗರ ಸೇರಿದಂತೆ ವಿವಿಧಡೆ ಮಳೆಯಾಗಿದೆ.

ಮಂಗಳವಾರದ ವರೆಗೆ ಮಳೆ: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಅಥವಾ ಅದಕ್ಕಿಂತ ಹೆಚ್ಚು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಂಗಳವಾರದ ವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ. ಡಿಸೆಂಬರ್ 3ರ ವರೆಗೆ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಇನ್ನು ಮುಂದಿನ 24 ಗಂಟೆಯ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಹಾಗೂ ಕನಿಷ್ಠ ತಾಪಮಾನವು 24 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮುಂದಿನ 48 ಗಂಟೆಯ ಅವಧಿಯಲ್ಲೂ ಇದೇ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ: ಈಚೆಗೆ ಸುರಿದ ಮಳೆಯಿಂದ ಬೆಂಗಳೂರಿನ ಹಲವು ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಬೆಂಗಳೂರಿನ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗಿ, ಕೆಲವು ಪ್ರದೇಶಗಳು ಕೆರೆಯಂತೆ ಬದಲಾಗಿದ್ದವು. ಅಷ್ಟೇ ಅಲ್ಲ ಬೆಂಗಳೂರಿನ ವಿವಿಧ ಭಾಗದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿಯೇ ನಿರ್ಮಾಣವಾಗಿತ್ತು.
ಅಲ್ಲದೇ ಐಟಿ - ಬಿಟಿ ಕಂಪನಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಮಳೆ ನೀರು ನಿಂತು ಉದ್ಯೋಗಿಗಳು ಪರದಾಡಿದ್ದರು. ಭಾರೀ ಮಳೆಯಿಂದ ನಗರದಲ್ಲಿ ವರ್ಕ್ಫ್ರಮ್ ಹೋಮ್ ಸಹ ನೀಡಲಾಗಿತ್ತು. ಈ ಬಾರಿ ಬೆಂಗಳೂರಿನಲ್ಲಿ ಮಳೆ ಅವಾಂತರವನ್ನು ತಪ್ಪಿಸುವ ನಿಟ್ಟಿನಲ್ಲಿ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ)ಯು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಬೆಂಗಳೂರಿನ ಸಹಾಯವಾಣಿ ಹಾಗೂ ನಿಯಂತ್ರಣ ಕೊಠಡಿಗಳ ಸಿಬ್ಬಂದಿಗೆ ಹಾಗೂ ಅಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ.

ಅಲ್ಲದೇ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ವಾರಾಂತ್ಯದಲ್ಲಿ ಯಾವುದೇ ಅಧಿಕಾರಿಗಳು ತಮ್ಮ ಕೆಲಸದ ಕಾರ್ಯ ವ್ಯಾಪ್ತಿಯಿಂದ ಹೊರಗೆ ಹೋಗಬಾರದು ಎಂದು ಸೂಚನೆ ನೀಡಿದ್ದಾರೆ. ಕಳೆದ ಬಾರಿ ಸುರಿದ ಮಳೆಯಿಂದ ಬೆಂಗಳೂರಿನ ಹೊರ ವಲಯದಲ್ಲಿ ಭಾರೀ ಅನಾಹುತ ಸಂಭವಿಸಿತ್ತು. ಅಲ್ಲದೇ ಬೆಂಗಳೂರಿನಲ್ಲಿ ಆಸ್ತಿಗಳಿಗೆ ಭಾರೀ ಹಾನಿಯುಂಟಾಗಿತ್ತು. ಇದೀಗ ಫೆಂಗಲ್ ಸಂಕಷ್ಟ ತಂದೊಡ್ಡಿದ್ದು, ಮಳೆ ಮುಂದುವರಿಯುತ್ತಿದೆ. ಬೆಂಗಳೂರಲ್ಲಿ ಚಳಿಯ ವಾತಾವರಣವೂ ಹೆಚ್ಚಾಗಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications