ಸಕಾಲ ಸೇವೆಗಳು ಶೀಘ್ರದಲ್ಲೇ ಆನ್ ಲೈನ್ ನಲ್ಲಿ ಲಭ್ಯ

ಸಕಾಲ ಯೋಜನೆಯನ್ನು ಜನಸ್ನೇಹಿಯಾಗಿಲು ಆನ್ ಲೈನ್ ಮೂಲಕ ನೋಂದಣಿ ಮಾಡುವ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಈ ಕುರಿತು ಸಾರ್ವಜನಿಕ ಆಡಳಿತ ಮತ್ತು ಸುಧಾರಣೆ ಇಲಾಖೆ ಪ್ರಸ್ತಾವನೆ ರಚಿಸಿದ್ದು, ಶೀಘ್ರದಲ್ಲೇ ಈ ವ್ಯವಸ್ಥೆ ಆರಂಭಿಸಲು ಸಿದ್ಧತೆ ನಡೆಸುತ್ತಿದೆ.
ಆನ್ ಲೈನ್ ಮೂಲಕ ಕೆಲವು ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು. ಇಲಾಖೆ ಅರ್ಜಿಯನ್ನು ಸ್ವೀಕರಿಸಿ ನಿಮಗೆ ಬೇಕಾದ ದಾಖಲೆ ಪತ್ರಗಳನ್ನು ಅಂಚೆ ಮೂಲಕ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ. ಇದರಿಂದ ಕಚೇರಿಗಳಿಗೆ ಅಲೆದಾಡುವ ಕಾರ್ಯಕ್ಕೆ ತೆರೆ ಬೀಳಲಿದೆ.
ಕೆಲವು ಇಲಾಖೆಗಳ ನಾಗರೀಕ ಸೇವೆಗಳಿಗೆ ಮಾತ್ರ ಈ ಆನ್ ಲೈನ್ ವ್ಯವಸ್ಥೆ ಅನ್ವಯವಾಗಲಿದೆ. ಪ್ರಮಾಣಪತ್ರಗಳ ನವೀಕರಣ, ಭೂ ದಾಖಲಾತಿ ಮುಂತಾದವುಗಳನ್ನು ಈ ಸೇವೆ ಮೂಲಕ ನೀಡಲು ಆಡಳಿತ ಸುಧಾರಣಾ ಇಲಾಖೆ ಉದ್ದೇಶಿಸಿದೆ.
ಆದರೆ, ಕುಡಿಯುವ ನೀರಿನ ಸಂಪರ್ಕ ಮುಂತಾದ ಸೇವೆಗಳನ್ನು ಪಡೆಯಲು ಬಯಸುವ ಸಾರ್ವಜನಿಕರು ಹತ್ತಿರದ ಕಚೇರಿಗಳಿಗೆ ಭೇಟಿ ನೀಡುವುದು ಅನಿವಾರ್ಯವಾಗಿದೆ. ಆದ್ದರಿಂದ ಕೆಲವು ಸೇವೆಗಳಿಗೆ ಮಾತ್ರ ಆನ್ ಲೈನ್ ವ್ಯವಸ್ಥೆ ಅನ್ವಯಿಸಲಿದೆ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದವರಿಗೆ ದಾಖಲೆಗನ್ನು ಮನೆ ಬಾಗಿಲಿಗೆ ತಲುಪಿಸಲು ಅಂಚೆ ಇಲಾಖೆಯ ಜೊತೆ ಒಪ್ಪಂದ ಮಾಡಿಕೊಳ್ಳಲು ಆಡಳಿತ ಸುಧಾರಣಾ ಇಲಾಖೆ ಚಿಂತನೆ ನಡೆಸಿದೆ. ಆನ್ ಲೈನ್ ನಲ್ಲಿ ಯಾವ ಸೇವೆಗಳನ್ನು ಒದಗಿಸಬಹುದು ಎಂದು ಎಲ್ಲಾ ಇಲಾಖೆಗಳಿಂದ ಮಾಹಿತಿ ನೀಡುವಂತೆ ಸೂಚನೆ ಕಳುಹಿಸಲಾಗಿದೆ.
ಆನ್ ಲೈನ್ ಮೂಲಕ ಸೇವೆ ಒದಗಿಸುವುದರಿಂದ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿದಂತಾಗುತ್ತದೆ. ಜನರು ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿ, ನಂತರ ಮತ್ತೆ ಕಚೇರಿಗೆ ದಾಖಲೆ ತೆಗೆದುಕೊಂಡು ಹೋಗಲು ಆಗಮಿಸುವುದಕ್ಕೆ ತಡೆ ಬೀಳಲಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications