Get Updates
Get notified of breaking news, exclusive insights, and must-see stories!

Karnataka Elections: ಬೆಂಗಳೂರಿನ ಈ ಕ್ಷೇತ್ರದಲ್ಲಿ ರೆಡ್ಡಿ Vs ರೆಡ್ಡಿ, ಬ್ರಾಹ್ಮಣ Vs ಬ್ರಾಹ್ಮಣ

ಬೆಂಗಳೂರು, ಏಪ್ರಿಲ್ 28: ಬೆಂಗಳೂರು ನಗರ ವ್ಯಾಪ್ತಿಯ 28 ಮತ್ತು ಗ್ರಾಮಾಂತರ ವ್ಯಾಪ್ತಿಯ ನಾಲ್ಕು ಕ್ಷೇತ್ರಗಳು ಸೇರಿ ಒಟ್ಟು 32ಸ್ಥಾನಗಳ ಪೈಕಿ ತಲಾ ಒಂದು ಕ್ಷೇತ್ರದಲ್ಲಿ ರೆಡ್ಡಿ ಮತ್ತು ಬ್ರಾಹ್ಮಣ ಸಮುದಾಯದವರು ನೇರವಾಗಿ ತಮ್ಮದೇ ಸಮುದಾಯದವರ ವಿರುದ್ದ ಸ್ಪರ್ಧಿಸುತ್ತಿದ್ದಾರೆ.

ರಾಜಧಾನಿ ವ್ಯಾಪ್ತಿಯ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಜಾತ್ಯಾತೀತ ಜನತಾದಳ, ಸಿ.ವಿ.ರಾಮನ್ ನಗರ, ವಿಜಯನಗರ, ಮಹದೇವಪುರ ಕ್ಷೇತ್ರದಲ್ಲಿ RPI ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದು, ಉಳಿದಂತೆ ಎಲ್ಲಾ ಕಡೆ ತಮ್ಮ ಕ್ಯಾಂಡಿಡೇಟ್ ಅನ್ನು ಕಣಕ್ಕಿಳಿಸಿದೆ.

fierce-contest-between-reddy-and-brahmin-communities-in-bengaluru-urban-district

ಕಳೆದ ಚುನಾವಣೆಯಲ್ಲಿ ಒಟ್ಟು 32 ಕ್ಷೇತ್ರಗಳ ಪೈಕಿ ಬಿಜೆಪಿ ಹದಿನೇಳು, ಕಾಂಗ್ರೆಸ್ ಹನ್ನೆರಡು ಮತ್ತು ಜೆಡಿಎಸ್ 3 ಸ್ಥಾನಗಳಲ್ಲಿ ಗೆಲುವನ್ನು ಕಂಡಿತ್ತು. ಇದುವರೆಗೆ ಬಿಡುಗಡೆಯಾಗಿರುವ ಚುನಾವಣಾಪೂರ್ವ ಸಮೀಕ್ಷೆಗಳ ಪ್ರಕಾರ ಕೆಲವೊಂದು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

ಬೆಂಗಳೂರು ನಗರ ವ್ಯಾಪ್ತಿಯ ಒಂದು ಕ್ಷೇತ್ರದಲ್ಲಿ ಕಣದಲ್ಲಿ ಮೂರು ಪ್ರಮುಖ ಪಕ್ಷಗಳು ಕಣದಲ್ಲಿದ್ದರೂ ಅದರಲ್ಲಿ ನೇರ ಫೈಟ್ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್ಸಿಗೆ ಮತ್ತು ಆ ಇಬ್ಬರೂ ಅಭ್ಯರ್ಥಿಗಳು ಬ್ರಾಹ್ಮಣ ಸಮುದಾಯದವರು. ಇನ್ನೊಂದು ಕ್ಷೇತ್ರದಲ್ಲಿ ಇಬ್ಬರೂ ರೆಡ್ಡಿ ಸಮುದಾಯದದವರು.

fierce-contest-between-reddy-and-brahmin-communities-in-bengaluru-urban-district

ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಬಸವನಗುಡಿ ಕ್ಷೇತ್ರ

ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರವಿ ಸುಬ್ರಮಣ್ಯ, ಕಾಂಗ್ರೆಸ್ಸಿನಿಂದ ಯು.ಬಿ.ವೆಂಕಟೇಶ್, ಜೆಡಿಎಸ್ಸಿನಿಂದ ಅರಮನೆ ಶಂಕರ್, ಆಮ್ ಆದ್ಮಿ ಪಕ್ಷದಿಂದ ಸತ್ಯಲಕ್ಷ್ಮೀ ರಾವ್ ಕಣದಲ್ಲಿದ್ದಾರೆ. ನಗರ ವ್ಯಾಪ್ತಿಯ ತ್ರಿಕೋನ ಸ್ಪರ್ಧೆ ಏರ್ಪಡಬಹುದಾದ ಕ್ಷೇತ್ರಗಳಲ್ಲಿ ಬಸವನಗುಡಿ ಕೂಡಾ ಒಂದು ಎಂದು ವಿಶ್ಲೇಷಿಸಲಾಗುತ್ತಿದೆ.

ಇಲ್ಲಿ ಪ್ರಮುಖ ಅಭ್ಯರ್ಥಿಗಳಾದ ರವಿ ಸುಬ್ರಮಣ್ಯ ಮತ್ತು ಯು.ಬಿ.ವೆಂಕಟೇಶ್ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಇಲ್ಲಿ ಎರಡನೇ ಸ್ಥಾನದಲ್ಲಿತ್ತು ಎನ್ನುವುದು ಗಮನಿಸಬೇಕಾದ ವಿಚಾರ. ಹಾಲೀ ಶಾಸಕರಾಗಿರುವ ರವಿ ಸುಬ್ರಮಣ್ಯ ಸತತವಾಗಿ ಇಲ್ಲಿಂದ (ಮೂರು ಬಾರಿ) ಗೆದ್ದು ಬರುತ್ತಿದ್ದಾರೆ. 2018ರ ಚುನಾವಣೆಯಲ್ಲಿ ರವಿ ಸುಬ್ರಮಣ್ಯ 38,009 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದರು.

ಸುಮಾರು 2.30ಕ್ಷ ಮತದಾರರು ಕ್ಷೇತ್ರದಲ್ಲಿದ್ದಾರೆ. ಬ್ರಾಹ್ಮಣ ಮತ್ತು ಒಕ್ಕಲಿಗ ಸಮುದಾಯದ ಮತಗಳು ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಬ್ರಾಹ್ಮಣರು ಸುಮಾರು 75ಸಾವಿರ, ಒಕ್ಕಲಿಗರು ಸುಮಾರು 65 ಸಾವಿರದಷ್ಟಿದ್ದಾರೆ. ಹಾಗಾಗಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವು ಬ್ರಾಹ್ಮಣ ಸಮುದಾಯದ ಮತ್ತು ಜೆಡಿಎಸ್ ಒಕ್ಕಲಿಗ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.

fierce-contest-between-reddy-and-brahmin-communities-in-bengaluru-urban-district

ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಬಿಟಿಎಂ ಲೇಔಟ್ ಕ್ಷೇತ್ರ

ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ರಾಮಲಿಂಗಾ ರೆಡ್ಡಿ, ಬಿಜೆಪಿಯಿಂದ ಶ್ರೀಧರ ರೆಡ್ಡಿ, ಜೆಡಿಎಸ್ಸಿನಿಂದ ವೆಂಕಟೇಶ್, ಆಮ್ ಆದ್ಮಿ ಪಕ್ಷದಿಂದ ಶ್ರೀನಿವಾಸ ರೆಡ್ಡಿ ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಫೈಟ್ ಇರುವ ಕ್ಷೇತ್ರಗಳಲ್ಲಿ ಇದೂ ಒಂದು.

ಕಳೆದ ಬಾರಿಯ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿಯವರು ಬಿಜೆಪಿಯ ಲಲ್ಲೇಶ್ ರೆಡ್ಡಿ ವಿರುದ್ದ 20,478 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದರು. 2008ರಿಂದಲೂ ರಾಮಲಿಂಗಾ ರೆಡ್ಡಿಯವರು ಇಲ್ಲಿಂದ ಗೆದ್ದು ಬರುತ್ತಿದ್ದಾರೆ. 2008ರಲ್ಲಿ ತುರುಸಿನ ಸ್ಪರ್ಧೆ ಏರ್ಪಟ್ಟು ರಾಮಲಿಂಗಾ ರೆಡ್ಡಿಯವರು ಬಿಜೆಪಿಯ ಪ್ರಸಾದ್ ರೆಡ್ಡಿ ವಿರುದ್ದ ಕೇವಲ 1,856 ಮತಗಳಿಂದ ಗೆಲುವನ್ನು ಸಾಧಿಸಿದ್ದರು.

ಸುಮಾರು 2.65ಲಕ್ಷ ಮತದಾರರು ಇರುವ ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವು ಅವರಿಗೇ ಟಿಕೆಟ್ ನೀಡಿದೆ. ಮೇ ಹತ್ತರಂದು ಚುನಾವಣೆ ನಡೆಯಲಿದ್ದು, ಮೇ ಹದಿಮೂರರಂದು ಫಲಿತಾಂಶ ಹೊರಬೀಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+