Fifa world cup 2022: ಬೆಂಗಳೂರಲ್ಲಿ ಹೋಟೆಲ್ ವ್ಯಾಪಾರ ಅವಧಿ ವಿಸ್ತರಿಸಿದ ಪೊಲೀಸ್ ಇಲಾಖೆ
ಬೆಂಗಳೂರು, ಡಿಸೆಂಬರ್ 13: ಫಿಫಾ ವಿಶ್ವ ಕಪ್ ಫುಟ್ಬಾಲ್ ಸೆಮಿ ಫೈನಲ್ ಪಂದ್ಯಾವಳಿ ಡಿ.14 ಮತ್ತು 15 ರಂದು ನಡೆಯುವ ಪ್ರಯುಕ್ತ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ತಿಂಡಿ ತಿನಿಸು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.
ಫಿಫಾ ವಿಶ್ವ ಕಪ್ ಫುಟ್ಬಾಲ್ ಸೆಮಿ ಫೈನಲ್ ಪಂದ್ಯಾವಳಿಯನ್ನು ಬೆಂಗಳೂರಿನ ಅನೇಕ ಕಡೆಗಳಲ್ಲಿ ಸ್ಕ್ರೀನ್ಗಳಲ್ಲಿ, ಹೋಟೆಲ್ ಸೇರಿದಂತೆ ಹಲವೆಡೆ ಪಂದ್ಯಾವಳಿಯನ್ನು ಕ್ರೀಡಾಭಿಮಾನಿಗಳು ವೀಕ್ಷಿಸುತ್ತಾರೆ. ಅವರಿಗೆ ತಿಂಡಿ ತಿನಿಸುವ ಒದಗಿಸುವ ದೃಷ್ಟಿಯಿಂದ ಹಾಲಿ ತಡರಾತ್ರಿ 1 ಗಂಟೆವರೆಗಿನ ವ್ಯಾಪಾರದ ಅವಧಿಯನ್ನು ಬೆಳಗ್ಗೆ 3.30ರವರೆಗೆ ವಿಸ್ತರಿಸಲಾಗಿದೆ.

ಅಬಕಾರಿ ಕಾಯ್ದೆ ಮತ್ತು ಶಬ್ದ ಮಾಲಿನ್ಯದ ಬಗ್ಗೆ ಇರುವ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತಿಗೆ ಒಳಪಟ್ಟು ಫಿಫಾ ಫುಟ್ಬಾಲ್ ಸೆಮಿ ಫೈನಲ್ ಪಂದ್ಯಾವಳಿ ನಡೆಯುವ ಎರಡು ದಿನದ ಮಟ್ಟಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಆದೇಶವು ಬೆಂಗಳೂರು ನಗರ ವ್ಯಾಪ್ತಿಯ ಸರಹದ್ದಿನಲ್ಲಿ ಬರುವ ಕಂದಾಯ ಜಿಲ್ಲೆಗಳು ಹಾಗೂ ತಾಲೂಕುಗಳನ್ನು ಪರಿಗಣಿಸದೇ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ತಿಂಡಿ ತಿನಿಸು ಒದಗಿಸುವ ಸ್ಥಳಗಳಿಗೆ ಅನ್ವಯಿಸುತ್ತದೆ.
ಆದರೆ ಬೆಂಗಳೂರು ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ಈ ಆದೇಶ ಅನ್ವಯಿಸುದಿಲ್ಲ. ಅಲ್ಲದೇ ನಿಗದಿತ ಸ್ಥಳಗಳಲ್ಲಿ ಬೆಳಗ್ಗೆ 3.30ರ ನಂತರ ಅಂಗಡಿ ಮುಂಗಟ್ಟು ತೆರೆದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇನ್ನೂ ಅಬಕಾರಿ ಇಲಾಖೆಯಿಂದ ಲೈಸನ್ಸ ಪಡೆದ ಮದ್ಯ ಮಾರಾಟ ಮಾಡುವ ಬಾರ್ ಆಂಡ್ ರೆಸ್ಟೋರೆಂಟ್, ಕ್ಲಬ್ಗಳು, ಹೋಟೆಲ್ ವಹೀವಾಟುಗಳಿಗೆ ಅಬಕಾರಿ ನಿಯಮದ ಷರತ್ತುಗಳು ಅನ್ವಯಿಸುತ್ತವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ತಿಂಡಿ ತಿನಿಸು ವ್ಯಾಪಾರದ ಅವಧಿ ವಿಸ್ತರಿಸುವಂತೆ ಬೆಂಗಳೂರು ಭೃಹತ್ ಹೋಟೆಲ್ಗಳ ಸಂಘ ಮನವಿ ಮಾಡಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications