ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ನಡುವೆ ಬ್ಲೇಡ್ ವಾರ್
ಬೆಂಗಳೂರು, ಫೆಬ್ರವರಿ 26: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಬಿಗ್ ಫೈಟ್ ನಡೆದಿದೆ. ವಿಚಾರಣಾಧೀನ ಕೈದಿಯೊಬ್ಬರಿಗೆ ಬ್ಲೇಡ್ ನಿಂದ ಹಲ್ಲೆ ನಡೆಸಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಮರ ಅಲಿಯಾಸ್ ಪೆಪ್ಸಿ ಎಂಬ ವಿಚಾರಣಾಧೀನ ಕೈದಿ ಗಾಯಗೊಂಡಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಸಯ್ಯದ್ ನಯಾಜ್ ಅಜ್ಮತ್,ಉಲ್ಲಾ ಸಯ್ಯದ್ ಸಮೀರ್, ರಿಯಾಜ್ ಇಮ್ರಾನ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪರಪ್ಪನ ಅಗ್ರಹಾರ ಕಾರಾಗೃಹ ಮುಖ್ಯ ಅಧೀಕ್ಷಕ ಶೇಷುಮೂರ್ತಿ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ವಿಚಾರಣಾಧೀನ ಕೊಠಡಿಗೆ ಬಂದ ಅಮರನಾಥ್ ಅಲಿಯಾಸ್ ಅಮರ್ ಎಂಬಾತನ ಜತೆ ಸಯ್ಯದ್ ಮತ್ತು ಸಹಚರರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದಿದ್ದಾರೆ. ಜೈಲಿನಲ್ಲಿ ಸಯ್ಯದ್ ನ ಗುಂಡಾಗಿರಿ ಬಗ್ಗೆ ಅಮರನಾಥ್ ತಿರುಗಿ ಬಿದ್ದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈವೇಳೆ ಸಯ್ಯದ್ ಸಹಚರರು ಏಕಾಏಕಿ ಅಮರನಾಥ್ ಕೆನ್ನೆ ಮೇಲೆ ಹಲ್ಲೆ ನಡೆಸಿದ್ದು, ಬ್ಲೇಡ್ ನಿಂದ ರಕ್ತ ಬರುವ ರೀತಿ ಹಲ್ಲೆ ಮಾಡಿದ್ದಾರೆ. ಕೂಡಲೇ ಜೈಲು ಸಿಬ್ಬಂದಿ ಎಲ್ಲರನ್ನು ವಶಕ್ಕೆ ಪಡೆದು ಅನಾಹುತ ತಪ್ಪಿಸಿದೆ. ಗಾಯಾಳು ಅಮರನಾಥ್ ಗೆ ಜೈಲು ಆಸ್ಪತ್ರೆಯಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

Recommended Video
ಸದಾ ಒಂದಲ್ಲಾ ಒಂದಿಷ್ಟು ಅಕ್ರಮಗಳಿಗೆ ಸುದ್ದಿಯಾಗುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ಗಾಂಜಾ ಹಾಗೂ ಮೊಬೈಲ್ ಗಳು ಸಿಕ್ಕಿದ್ದವು. ಇದಾದ ಬಳಿಕ ಅಲ್ಲಿ ಕೈದಿಗಳ ಬಳಿ ಅಧಿಕಾರಿಗಳ ಲಂಚ ಸ್ವೀಕಾರ, ಕೈದಿಗಳ ವಿಲಾಸಿ ಜೀವನದ ಬಗ್ಗೆ ಖಾಸಗಿ ವಾಹಿನಿ ಸುದ್ದಿ ಬಿತ್ತರಿಸಿತ್ತು. ಇಡೀ ಜೈಲು ಅಕ್ರಮಗಳಿಗೆ ಕಡಿವಾಣ ಹಾಕುವುದಾಗಿ ಖುದ್ದು ಗೃಹ ಸಚಿವರೇ ಹೇಳಿಕೆ ನೀಡಿದ್ದರು. ಆದರೆ, ಜೈಲಿನಲ್ಲಿ ಇದೀಗ ಎರಡು ಬಣಗಳ ನಡುವೆ ಹೊಡೆದಾಟ ನಡೆದಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications