ಕನ್ನಡಕ್ಕಾಗಿ ಮತ್ತೊಂದು ಹೋರಾಟ, ಭಾನುವಾರ ರವೀಂದ್ರ ಕಲಾಕ್ಷೇತ್ರಕ್ಕೆ ಬನ್ನಿ
ಜನರ ಮತ್ತು ವ್ಯವಸ್ಥೆಯ ನಡುವಿನ ದೂರವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುವುದು ಪ್ರಜಾಪ್ರಭುತ್ವದ ಗೆಲುವಿಗೆ ಬೇಕಿರುವ ಅತೀ ಮುಖ್ಯ ಅಂಶ. ಸರ್ಕಾರ ಜಾರಿ ಮಾಡುವ ಹತ್ತಾರು ಯೋಜನೆಗಳು ಸಾಮಾನ್ಯ ಜನರನ್ನು ತಲುಪಿ ಯಶಸ್ವಿಯಾಗಬೇಕೆಂದರೆ ಆ ಯೋಜನೆಗಳ ಎಲ್ಲ ಮಾಹಿತಿ, ಅನುಷ್ಠಾನ ಜನರಿಗೆ ಅರ್ಥವಾಗುವ ನುಡಿಯಲ್ಲಿರಬೇಕು ಅನ್ನುವುದು ಕಾಮನ್ ಸೆನ್ಸ್.
ಭಾರತದ ವ್ಯವಸ್ಥೆಯನ್ನು ಗಮನಿಸಿದಾಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ತನ್ನದೇ ಅಸ್ತಿತ್ವ, ಹೊಣೆಗಾರಿಕೆ ಇದೆಯಾದರೂ, ನಾಗರೀಕ ಸೇವೆಗಳಾದ ಅಂಚೆ, ಬ್ಯಾಂಕು, ವಿಮೆ, ಪಿಂಚಣಿ, ರೈಲು, ವಿಮಾನಸೇವೆ, ತೆರಿಗೆ ಹೀಗೆ ಹತ್ತಾರು ಸೇವೆಗಳನ್ನು ಕಲ್ಪಿಸುವ ಕೇಂದ್ರ ಸರ್ಕಾರ ಜನರ ಜೀವನದ ಮೇಲೆ ಸಹಜವಾಗಿಯೇ ಹೆಚ್ಚಿನ ಪ್ರಭಾವ ಹೊಂದಿದೆ.
ಹೀಗಿರುವಾಗ ಆಯಾ ರಾಜ್ಯದ ಜನರ ಭಾಷೆಯಲ್ಲಿ ತನ್ನೆಲ್ಲ ನಾಗರೀಕ ಸೇವೆಗಳನ್ನು ಕಲ್ಪಿಸಬೇಕಾದದ್ದು ಧರ್ಮವೂ, ನ್ಯಾಯವೂ ಆದ ವಿಷಯವಾಗಿದೆ. ಆದರೆ ಕೇಂದ್ರ ಸರ್ಕಾರ ಹಿಂದಿ ಮತ್ತು ಇಂಗ್ಲಿಷ್ ಎರಡನ್ನೇ ತನ್ನ ಆಡಳಿತದ ಭಾಷೆಯೆಂದು ಘೋಷಿಸಿಕೊಂಡು, ಹಿಂದಿಯ ಹರಡುವಿಕೆಯನ್ನು ತನ್ನೆಲ್ಲ ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಡುವುದಕ್ಕೆ ತೆರಿಗೆದಾರರ ಹಣವನ್ನು ಖರ್ಚು ಮಾಡುತ್ತ ಬಂದಿರುವುದರ ಪರಿಣಾಮವಾಗಿ ಹಿಂದಿಯೇತರ ನುಡಿಯಾಡುವ ರಾಜ್ಯಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆ ಸಂಪೂರ್ಣವಾಗಿ ಕಡೆಗಣಿಸಲ್ಪಡುತ್ತಿದೆ. [ಕನ್ನಡ ಮಾತನಾಡುವವರಿಗೆ ಮಾತ್ರ ಇಲ್ಲಿ ಉದ್ಯೋಗ]

ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಕೇಂದ್ರ ಸರ್ಕಾರಿ ಕಚೇರಿಗಳಲ್ಲೂ ಕನ್ನಡದಲ್ಲಿ ಮಾತನಾಡುವುದು, ಸೇವೆ ಪಡೆಯುವುದು ಒಂದು ಹರಸಾಹಸದ ಕೆಲಸವೇ ಆಗುತ್ತಿದೆ. ಇದು ಸಾಮಾನ್ಯ ಕನ್ನಡಿಗರಿಗೆ ತೀವ್ರ ತೊಂದರೆಯುಂಟು ಮಾಡುತ್ತಿರುವುದಲ್ಲದೇ, ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯುಂಟು ಮಾಡುತ್ತಿದೆ.
ಇದಕ್ಕೆ ಪರಿಹಾರವಾಗಿ ಕೇಂದ್ರ ತನ್ನ ಆಡಳಿತವನ್ನು ಸಂವಿಧಾನದ ಎಂಟನೆಯ ಪರಿಚ್ಛೇದದಲ್ಲಿರುವ ಎಲ್ಲ 22 ಭಾಷೆಗಳಲ್ಲೂ ನಡೆಸುವಂತೆ ತನ್ನ ಅಫಿಶಿಯಲ್ ಲ್ಯಾಂಗ್ವೇಜ್ ಆಕ್ಟಿ(Official Language Act)ಗೆ ತಿದ್ದುಪಡಿ ತರಬೇಕು ಅನ್ನುವ ಕೂಗು ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಬಲಗೊಳ್ಳುತ್ತಿದೆ. [ಇಲ್ಲಿ ಯಾರೂ ಶೇಕ್ ಸ್ಪಿಯರ್ ಆಗಬೇಕಾಗಿಲ್ಲ]
ಕರ್ನಾಟಕದಲ್ಲಿ ಈ ಬಗ್ಗೆ ನಿರಂತರ ಜನಜಾಗೃತಿಯಲ್ಲಿ ತೊಡಗಿರುವ ಬನವಾಸಿ ಬಳಗ ಇದೇ ಸೆಪ್ಟೆಂಬರ್ 13ರ ಭಾನುವಾರ, ಭಾರತದ ಇವತ್ತಿನ ಭಾಷಾ ನೀತಿ ಮತ್ತು ಅದು ಜನಸಾಮಾನ್ಯರಿಗೆ ಉಂಟು ಮಾಡುತ್ತಿರುವ ತೊಂದರೆಗಳ ಬಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಒಂದು ಚಿತ್ರ ಪ್ರದರ್ಶನ ಹಮ್ಮಿಕೊಂಡಿದೆ.
ಬೆಳಿಗ್ಗೆ 10.30ರಿಂದ ಸಂಜೆ 4.30ರವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ನಾಡಿನ ಹಲವು ಕ್ಷೇತ್ರಗಳ ಗಣ್ಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಈ ವಿಚಾರ ಸಂಕಿರಣ ಮಹತ್ವದ್ದಾಗಿದೆ. [ಪ್ರತಿಯೊಂದೂ ಕನ್ನಡದಲ್ಲೇ ಸಿಗಲಿ - ಆನಂದ್ ಜಿ]
-
Prem: ಸರ್ಸೆ ಸೆರಗ ಹಾಡನ್ನ ಎಲ್ರೂ ತಪ್ಪಾಗಿ ಅರ್ಥ ಮಾಡ್ಕೊಂಡಿದ್ದಾರೆ, ನನ್ನ ಉದ್ದೇಶ ಅದಾಗಿರಲಿಲ್ಲ: ಪ್ರೇಮ್ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications