ಮಹದೇವಪುರ ಠಾಣೆಯಲ್ಲಿ ಪೊಲೀಸರ ಜಟಾಪಟಿ, ಇಬ್ಬರು ಅಮಾನತು
ಬೆಂಗಳೂರು, ನವೆಂಬರ್ 5 : ಎಎಸ್ಐ ಮತ್ತು ಹೆಡ್ ಕಾನ್ಸ್ಟೇಬಲ್ ಹೊಡೆದಾಡಿಕೊಂಡ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ಮಾರತ್ತಹಳ್ಳಿ ಎಸಿಪಿ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.
ಮಹದೇವಪುರ ಠಾಣೆ ಎಎಸ್ಐ ಅಮೃತೇಶ್, ಹೆಡ್ಕಾನ್ಸ್ಟೇಬಲ್ ಜಯಕಿರಣ್ ಮತ್ತು ಸಬ್ ಇನ್ಸ್ಪೆಕ್ಟರ್ ಅಶ್ವಥ್ ನಡುವೆ ಗಲಾಟೆ ನಡೆದಿದೆ. ಏಕಚನದಲ್ಲಿ ಬೈದಾಡಿಕೊಂಡು, ಠಾಣೆಯಲ್ಲಿ ಎಲ್ಲಾ ಸಿಬ್ಬಂದಿಗಳ ಸಮ್ಮುಖದಲ್ಲಿಯೇ ಕೈ ಕೈ ಮೀಲಾಯಿಸಿದ್ದಾರೆ. ನಂತರ ಸ್ಟೇಷನ್ ಡೈರಿಯಲ್ಲಿ ಈ ಬಗ್ಗೆ ಬರೆದು, ಡಿಸಿಪಿಗೆ ಅಶ್ವಥ್ ಮಾಹಿತಿ ನೀಡಿದ್ದಾರೆ.

ಡಿಸಿಪಿ ಅಬ್ದುಲ್ ಅಹಮದ್ ಕರ್ತವ್ಯಲೋಪದ ಹಿನ್ನಲೆಯಲ್ಲಿ ಎಎಸ್ಐ ಅಮೃತೇಶ್, ಹೆಡ್ಕಾನ್ಸ್ಟೇಬಲ್ ಜಯಕಿರಣ್ ಅವರನ್ನು ಅಮಾನತು ಮಾಡಿದ್ದಾರೆ. ಮಾರತ್ತಹಳ್ಳಿ ಎಸಿಪಿ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶ ನೀಡಿದ್ದಾರೆ.
ಜಗಳವಾಡಿದ್ದು ಏಕೆ? : ಶನಿವಾರ ಸಂಜೆ ಇಸ್ಪಿಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. 10 ಜನರನ್ನು ಬಂಧಿಸಿ, 42 ಸಾವಿರ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ಎಲ್ಲಾ ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, 8 ಗಂಟೆ ವೇಳೆಗೆ ಅವರನ್ನು ಬಿಟ್ಟು ಕಳಿಸಲಾಗಿದೆ.
ಪ್ರಕರಣದ ದಾಖಲು ಮಾಡದೇ ಎಲ್ಲರನ್ನು ಬಿಟ್ಟು ಕಳಿಸಿದ ಕಾರಣಕ್ಕೆ ಎಎಸ್ಐ ಅಮೃತೇಶ್, ಹೆಡ್ಕಾನ್ಸ್ಟೇಬಲ್ ಜಯಕಿರಣ್ ಮತ್ತು ಸಬ್ ಇನ್ಸ್ಪೆಕ್ಟರ್ ಅಶ್ವಥ್ ನಡುವೆ ಗಲಾಟೆ ನಡೆದಿದೆ. ಜಯಕಿರಣ್ ನಿನ್ನಂಥ ಎಎಸ್ಐಗಳನ್ನು ನೂರಾರು ಜನರನ್ನು ನೋಡಿದ್ದೇನೆ ಎಂದು ಹೇಳಿದ್ದು, ಇಬ್ಬರ ನಡುವೆ ಠಾಣೆಯಲ್ಲಿಯೇ ಜಟಾಪಟಿ ನಡೆಸಿದೆ.
ಎಸ್ಐ ಅಶ್ವಥ್ ಈ ಘಟನೆಯನ್ನು ಸ್ಟೇಷನ್ ಡೈರಿಯಲ್ಲಿ ಉಲ್ಲೇಖಿಸಿದ್ದು, ಡಿಸಿಪಿಗೆ ಘಟನೆ ಕುರಿತು ಮಾಹಿತಿ ನೀಡಿದ್ದರು. ಡಿಸಿಪಿ ಅಬ್ದುಲ್ ಅಹಮದ್ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಇಬ್ಬರನ್ನು ಅಮಾನತು ಮಾಡಿದ್ದಾರೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು












Click it and Unblock the Notifications