Ramesh Jarakiholi: ಆಕ್ಷೇಪಾರ್ಹ ಹೇಳಿಕೆ- ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು!
ಬೆಂಗಳೂರು ಅಕ್ಟೋಬರ್ 31: ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಿಸಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೆಶ್ ಜಾರಕಿಹೊಳಿ ವಿರುದ್ಧ ನಗರದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸೋಮವಾರ (ಅಕ್ಟೋಬರ್ 30) ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ಅವರಿಗೆ ಏಕವಚನದಲ್ಲಿ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್ ಅಂತೆಲ್ಲಾ ಗಂಭೀರ ಆರೋಪಗಳನ್ನು ಮಾಡಿದ್ದರು. ಮೈತ್ರಿ ಸರ್ಕಾರ ಪತನಕ್ಕೆ ನೀವೇ ಕಾರಣ. ಈಗಲೂ ಈ ಸರ್ಕಾರ ಪತನಕ್ಕೆ ಡಿಕೆ ಶಿವಕುಮಾರ್ ಅವರೇ ಕಾರಣರಾಗುತ್ತಾರೆ ಎಂದಿದ್ದರು. ಮಾತ್ರವಲ್ಲದೆ ಮಹಾರಾಷ್ಟ್ರದ ರೀತಿ ಕರ್ನಾಟಕ ಸರ್ಕಾರ ಕೂಡ ಪತನವಾಗುತ್ತದೆ ಎಂದು ಆರೋಪಿಸಿದ್ದರು. ಹೀಗಾಗಿ ಇದೆಲ್ಲ ಆರೋಪಗಳು ಆಧಾರ ರಹಿತವಾಗಿವೆ ಎಂದು ಎಸ್.ಮನೋಹರ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದರಿಂದ ಕೋಪಗೊಂಡ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಜಾರಕಿಹೊಳಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶಗೊಂಡರು. ಈ ನಡುವೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಬೆಂಗಳೂರಿನ ಮನೆಗೆ ಹತ್ತು ಜನರ ಕಿಡಿಗೇಡಿಗಳ ಗುಂಪೊಂದು ನಿಂದನಾತ್ಮಕ ಪೋಸ್ಟರ್ಗಳನ್ನು ಅಂಟಿಸಿ ಪರಾರಿಯಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಜಾರಕಿಹೊಳಿ ಅವರು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ತಿಂಗಳುಗಳಲ್ಲಿ ಮಾಜಿ ಆಗಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹೊರಬಂದ ಕೆಲವೇ ಗಂಟೆಗಳಲ್ಲಿ ಸುಮಾರು 10 ಜನರ ಗುಂಪು ಸದಾಶಿವನಗರದ ನಿವಾಸದ ಮುಂದೆ ನಿಂದನಾತ್ಮಕ ಪೋಸ್ಟರ್ಗಳನ್ನು ಅಂಟಿಸಿದೆ. ಈ ಬೆಳವಣಿಗೆ ನಂತರ ರಮೇಶ್ ಜಾರಕಿಹೊಳಿ ಮತ್ತೆ ಇಂದು ಸುದ್ದಿಗೋಷ್ಠಿಯನ್ನು ಕರೆದಿದ್ದು, ಏನೆಲ್ಲಾ ಹೇಳಲಿದ್ದಾರೆಂದು ಕಾದು ನೋಡಬೇಕಿದೆ.
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು











Click it and Unblock the Notifications