ಬೆಳ್ಳಂದೂರು-ಅಗರ ಕೆರೆ ರಕ್ಷಣಗೆ ನಮ್ಮ ಬೆಂಗಳೂರು ಪ್ರತಿಷ್ಠಾನ ಸುಪ್ರಿಂನಲ್ಲಿ ಹೋರಾಟ
ಬೆಂಗಳೂರು, ಜನವರಿ 07: ಸರ್ವೋಚ್ಛ ನ್ಯಾಯಾಲಯದಲ್ಲಿ ಬೆಳ್ಳಂದೂರು-ಅಗರ ಕೆರೆಯ "ಎನ್.ಜಿ.ಟಿ ಬಫರ್ ವಲಯ ತೀರ್ಪಿನ" ಮೇಲೆ ಜನವರಿ 08 ರಂದು ಅಂತಿಮ ವಿಚಾರಣೆ ನಡೆಸಲಿದೆ.
ನಮ್ಮ ಬೆಂಗಳೂರು ಪ್ರತಿಷ್ಠಾನವು ಬೆಳ್ಳಂದೂರು-ಅಗರ ಕೆರೆ ಉಳಿಸುವ ಸಲುವಾಗಿ ಸರ್ಕಾರದ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಿತ್ತು, ಅದರ ಅಂತಿಮ ವಿಚಾರಣೆಯನ್ನು ಸುಪ್ರಿಂಕೋರ್ಟ್ ಜನವರಿ 08 ರಂದು ನಡೆಸಲಿದೆ. ಆ ನಂತರ ತೀರ್ಪಿನ ದಿನಾಂಕ ಪ್ರಕಟಿಸಲಾಗುವುದು.
ಮೇ 4, 2016 ರಂದು ಕೆರೆಗಳಿಗೆ ಅನ್ವಯಿಸುವಂತೆ 75 ಮೀ ಬಫರ್ ವಲಯ, ಪ್ರಾಥಮಿಕ, ದ್ವಿತೀಯ ಮತ್ತು ಬೃಹತ್ ರಾಜಕಲುವೆಗಳಿಗೆ ಕ್ರಮವಾಗಿ 50, 35 ಮತ್ತು 25 ಮೀಟರ್ ಗಳ ಬಫರ್ ವಲಯವನ್ನು ಮೀಸಲಿಡುವಂತೆ ನಿಗದಿಪಡಿಸಿ ಮಾನ್ಯ ಹಸಿರು ಪೀಠ ಆದೇಶ ಹೊರಡಿಸಿತ್ತು. ಸುಸ್ಥಿರ ಅಭಿವೃದ್ಧಿಗೆ ಈ ಬಫರ್ ವಲಯ ಅತ್ಯವಶ್ಯವೆಂದು ಮತ್ತು ಈ ವಲಯದಲ್ಲಿ ಯಾವುದೇ ರೀತಿಯ ನಿರ್ಮಾಣಕ್ಕೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಆದೇಶ ನೀಡಿತ್ತು.

ಆದರೆ, ಮಂತ್ರಿ ಟೆಕ್ ಜೋನ್, ಕೋರ್ ಮೈಂಡ್ ಸಾಫ್ಟ್ ವೇರ್ ಸರ್ವೀಸಸ್ ಮತ್ತು ರಾಜ್ಯ ಸರ್ಕಾರ ತಮ್ಮ ಪಟ್ಟಭದ್ರ ಹಿತಾಸಕ್ತಿಗಳ ರಕ್ಷಣೆಗಾಗಿ ಹಸಿರು ಪೀಠದ ಆದೇಶಕ್ಕೆ ತಡೆಯೊಡ್ಡಲು ಸುಪ್ರೀಂಕೋರ್ಟ್ ಮೊರೆಹೋಗಿದ್ದಾರೆ ಆದರೆ ಅದನ್ನು ನಮ್ಮ ಬೆಂಗಳೂರು ಪ್ರತಿಷ್ಠಾನವು ಪ್ರಶ್ನೆ ಮಾಡಿದೆ.
ರಾಜ್ಯ ಸರ್ಕಾರವು ಪ್ರಕರಣದಲ್ಲಿ ತನ್ನ ಪರ ವಾದ ಮಂಡಿಸಲು ದುಬಾರಿ ವಕೀಲರನ್ನು ನೇಮಿಸಿದೆ. ಇದೇ ಪ್ರಕರಣದಲ್ಲಿ ಇತರ ಬಿಲ್ಡರ್ಗಳು ಸಹ ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣಿಯನ್, ಕಿಶನ್ ದಾವೆ ಸೇರಿ ಇನ್ನೂ ಹಲವು ಮಂದಿ ಭಾರಿ ದುಬಾರಿ ವಕೀಲರನ್ನು ನೇಮಿಸಿದೆ ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನವು ಹೇಳಿದೆ.
ನಮ್ಮ ಬೆಂಗಳೂರು ಪ್ರತಿಷ್ಠಾನವು ತನ್ನ ವೈಯಕ್ತಿಕ ಸಂಪನ್ಮೂಲಗಳನ್ನು ಬಳಸಿ ಅದರಲ್ಲಿಯೇ ವಕೀಲರನ್ನು ನೇಮಿಸಿದ್ದು, ಬೆಳ್ಳಂದೂರು-ಅಗರ ಕೆರೆಯ ಉಳಿವಿಗಾಗಿ ಸಾದ್ಯಂತ ಹೋರಾಡುತ್ತಿದೆ. ಸುಪ್ರಿಂ ತೀರ್ಪಿನ ಮೇಲೆ ಎರಡೂ ಕೆರೆಯ ಭವಿಷ್ಯ ನಿಂತಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ












Click it and Unblock the Notifications