ಜಾಫರ್ ಷರೀಫ್ ಅಪೂರ್ಣಗೊಳಿಸಿದ ಕೊನೆಯ ಕೆಲಸವೇನು?
ಬೆಂಗಳೂರು, ನವೆಂಬರ್ 26: ದೇಶದ ಬ್ರಾಡ್ ಗೇಜ್ ರೈಲ್ವೆ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಮಾಜಿ ಕೇಂದ್ರ ಸಚಿವ ಸಿಕೆ ಜಾಫರ್ ಷರೀಫ್ ಗ್ರಾಮೀಣಾಭಿವೃದ್ಧಿಯಂತಹ ವಿಚಾರಗಳಲ್ಲೂ ತೀವ್ರ ಆಸಕ್ತಿ ಹೊಂದಿದ್ದರು ಎಂಬುದು ಎಲ್ಲರಿಗೆ ಗೊತ್ತಿರುವ ವಿಚಾರ.
ಆದರೆ ಜಾಫರ್ ಷರೀಫ್ ಅವರು ದೇಶದ ಮಹತ್ವದ ಆತ್ಮಕತೆಗಳ ಪೈಕಿ ಒಂದಾದ ' ಇಂಡಿಯಾ ವಿನ್ಸ ಫ್ರೀಡಂ' ಉರ್ದು ಹಾಗೂ ಕನ್ನಡಕ್ಕೆ ತರ್ಜುಮೆ ಮಾಡುವಲ್ಲಿ ನಿರತರಾಗಿದ್ದರು. ಜಾಫರ್ ಷರೀಫ್ ಅಂದುಕೊಂಡಂತೆ ಎಲ್ಲವೂ ಆಗಿದ್ದರೆ ಇದೇ ನವೆಂಬರ್ 28ಕ್ಕೆ ಇದೇ ಅರಮನೆ ಮೈದಾನದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಈ ಕೃತಿಯನ್ನು ಬಿಡುಗಡೆ ಮಾಡಬೇಕಿತ್ತು.
ಕಳೆದ ಹಲವು ತಿಂಗಳುಗಳಿಂದ ಜಾಫರ್ ಷರೀಫ್ ಅವರು ದೇಶದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ 'ಇಂಡಿಯಾ ವಿನ್ಸ್ ಫ್ರೀಡಂ' ಕೃತಿಯನ್ನು ತರ್ಜುಮೆಗೊಳಿಸುವಲ್ಲಿ ನಿರತರಾಗಿದ್ದರು.

ಆ ಕೃತಿಯ ಭಾಷಾಂತರ ಪ್ರಕ್ರಿಯೆ ಪೂರ್ಣಗೊಂಡು ಇದೇ ನವೆಂಬರ್ 28ಕ್ಕೆ ಬಿಡುಗಡೆಗೊಳ್ಳಬೇಕಿತ್ತು, ಭಾರತ ಸ್ವಾತಂತ್ರ್ಯ ಹೋರಾಟದ ಹಲವು ಮಜಲುಗಳು ಹಾಗೂ ದೇಶ ವಿಭಜನೆಯ ಸಂದರ್ಭದಲ್ಲಿ ನಡೆದ ಹಲವಾರು ಸ್ವಾರಸ್ಯಕರ ಹಾಗೂ ಐತಿಹಾಸಿಕ ಘಟನೆಗಳನ್ನು ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ತಮ್ಮ ಆತ್ಮಕತೆಯಲ್ಲಿ ಬರೆದುಕೊಂಡಿದ್ದರು.
ಆ ಕೃತಿಯನ್ನು ಉರ್ದು ಹಾಗೂ ಕನ್ನಡಕ್ಕೆ ತರ್ಜುಮೆ ಮಾಡಲು ತೀವ್ರ ಆಸಕ್ತಿ ಹೊಂದಿದ್ದರು. ಆದರೆ ಅವರ ಅಂತಿಮ ಪ್ರಯತ್ನ ಕೈಗೂಡಲಿಲ್ಲ ಎಂಬುದು ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications