ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಜಿರಾಫೆ ಆಗಮನ
ಬೆಂಗಳೂರು, ಏಪ್ರಿಲ್ 04: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹಲವು ವರ್ಷಗಳಿಂದ ನಿರೀಕ್ಷೆಯಲ್ಲಿದ್ದ ವಿಶೇಷ ಅತಿಥಿ ಜಿರಾಫೆ ಆಗಮನವಾಗಿದೆ. ಇದರಿಂದ ಇಡೀ ಉದ್ಯಾನವನಕ್ಕೆ ಮತ್ತಷ್ಟು ಮೆರೆಗು ಬಂದಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಿಂದ ಎರಡೂವರೆ ವರ್ಷ ವಯಸ್ಸಿನ ಹೆಣ್ಣು ಜಿರಾಫೆ ಗೌರಿಯನ್ನು ತರಿಸಿಕೊಂಡಿದೆ.
ಸುಮಾರು 200ಕಿ.ಮೀ ಸಂಚರಿಸಿ ಉದ್ಯಾನಕ್ಕೆ ಬಂದಿದೆ. ಉದ್ಯಾನವನದ ಮುಖ್ಯದ್ವಾರದ ಎಡಭಾಗದಲ್ಲಿ ಸುಮಾರು ಎರಡೂವರೆ ಎಕರೆ ವಿಸ್ತೀರ್ಣದ ಬಯಲು ಆಲಯದಲ್ಲಿ ಜಿರಾಫೆ ಬಿಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗೌರಿಯು 13.5ಅಡಿ ಎತ್ತರವಿದ್ದು, 2015 ರ ಡಿಸೆಂಬರ್ 19ರಂದು ಜನಿಸಿತ್ತು.

ಸುತ್ತಲು ಕಂದಕದ ಜೊತೆಗೆ ಬೇಲಿ ಹಾಕಲಾಗಿದೆ. ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಸುಮಾರು 40 ಅಡಿ ಎತ್ತರದ ಹೊಲ್ಡಿಂಗ್ ರೂಮ್ ಸಹ ನಿರ್ಮಾಣ ಮಾಡಿ ಶುಚಿಗೊಳಿಸಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ನಾಲ್ಕು ಅಧಿಕಾರಿಗಳು ಜಿರಾಫೆಯನ್ನು ತರಲು ಸತತ ಪ್ರಯತ್ನ ನಡೆಸುತ್ತ ಬಂದಿದ್ದರು.
ಮೈಸೂರು, ಆಂಧ್ರಪ್ರದೇಶ ಅಲ್ಲದೇ ವಿದೇಶದಿಂದಲೂ ಜಿರಾಫೆ ತರುವ ಪ್ರಯತ್ನ ನಡೆಸಿ ವಿಫಲವಾಗಿದ್ದರು. ವಿದೇಶದಿಂದ ಜಿರಾಫೆ ತರಲು ವಿಮಾನದ ವೆಚ್ಚವೇ ಸುಮಾರು 1 ಕೋಟಿ ರೂ. ತಗಲುತಿತ್ತು. ಇದರಿಂದ ವಿದೇಶದಿಂದ ತರುವ ಪ್ರಯತ್ನ ವಿಫಲವಾಯಿತು.
ಸದ್ಯ ಮೃಗಾಲಯ ಪ್ರಾಧಿಕಾರಕ್ಕೆ ರವಿ ಸದಸ್ಯ ಕಾರ್ಯದರ್ಶಿಯಾದ ಬಳಿಕ ಜಿರಾಫೆ ತರುವ ಹಾದಿ ಸುಲಭವಾಯಿತು. ಕಳೆದ ಮೂರು ತಿಂಗಳ ಹಿಂದೆಯೇ ಮೈಸೂರು ಮೃಗಾಲಯದಿಂದ ಜಿರಾಫೆ ನೀಡುವ ಹಸಿರು ನಿಶಾನೆ ಸಿಕ್ಕ ಬಳಿಕ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿನ ಇಬ್ಬರ ಸಿಬ್ಬಂದಿಯನ್ನು ಮೈಸೂರು ಮೈಗಾಲಯಕ್ಕೆ ಕಳುಹಿಸಿ ಅವರಿಗೆ ತರಬೇತಿ ನೀಡಿ ಪ್ರಾಣಿ ಜೊತೆ ಬೆರೆಯುವಂತೆ ಮಾಡಲಾಗಿದೆ.
ಬಬ್ಲಿ ಮತ್ತು ಮೇರಿ ಎಂಬ ಎರಡು ಜಿರಾಫೆಗಳನ್ನು ಮೈಸೂರಿನಿಂದ ಬನ್ನೇರುಘಟ್ಟಕ್ಕೆ ನೀಡಲು ಅನುಮತಿ ನೀಡಲಾಗಿದೆ. ಸದ್ಯ ಬಬ್ಬಿ ಜಿರಾಫೆ ತರಿಸಿಕೊಳ್ಳಲಾಗುತ್ತಿದೆ. ನಂತರ ಕೆಲ ದಿನಗಳ ಬಳಿಕ ಮೇರಿಯನ್ನು ತರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಉದ್ಯಾನವನದ ವೈದ್ಯಾಧಿಕಾರಿ ಉಮಾಶಂಕರ್ ಮಾತನಾಡಿ, ನಮ್ಮಲ್ಲಿದ್ದ ಶಂಕರ ಮತ್ತು ಬಸವ ಎಂಬ ಇಬ್ಬರನ್ನು ಮೈಸೂರಿಗೆ ಕಳುಹಿಸಿ ತರಬೇತಿ ಕೊಡಿಸಲಾಗಿದೆ. ಹಾಗೆ ಇಲ್ಲಿಗೆ ಬರುತ್ತಿರುವ ಪ್ರಾಣಿಗಳೊಂದಿಗೆ ಅವರು ಹೊಂದಿಕೊಂಡಿದ್ದಾರೆ. ಇದರಿಂದ ಪ್ರಾಣಿಗೆ ಹೊಸ ಜಾಗವಾದರೂ ಜಿರಾಫೆ ಪಾಲಕರು ಮಾತ್ರ ಹಳಬರಾಗಿರುತ್ತಾರೆ ಎಂದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications