ಮರ ಗಣತಿ ಮಾಡಲು ಕೊನೆಗೂ ಬಿಬಿಎಂಪಿಗೆ ಕಾಲ ಕೂಡಿ ಬಂತು!
ಬೆಂಗಳೂರು, ಮೇ 4: ಮಳೆಗಾಲ ಆರಂಭಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇದೆ ಆದರೆ ನಗರದಲ್ಲಿ ಈಗಾಗಲೇ ಅನೇಕ ಬಾರಿ ವರುಣನ ಆರ್ಭಟ ಕೇಳಿಸಿದೆ.
ಈಗಾಗಲೇ ಸಾಕಷ್ಟು ಮರಗಳು ಧರೆಗುರುಳಿವೆ ಹಾಗಾಗಿ ಆಸ್ತಿಪಾಸ್ತಿಗೆ ಕಂಟಕವಾಗುವುದನ್ನು ತಡೆಯಲು ಬಿಬಿಎಂಪಿ ಮುಂದಾಗಿದೆ. ಚುನಾವಣೆ ಮುಗಿದ ಕೂಡಲೇ ಖಾಸಗಿ ಏಜೆನ್ಸಿ ಮೂಲಕ ಮರಗಳ ಗಣತಿ ನಡೆಸಲು ಯೋಜನೆ ರೂಪಿಸಿದೆ.
ಮರ ಗಣತಿ ಯೋಜನೆ ಹಲವು ವರ್ಷಗಳಿಂದ ಘೋಷಣೆಗಷ್ಟೇ ಸೀಮಿತವಾಗಿತ್ತು. ಅದಕ್ಕೀಗ ಚಾಲನೆ ನೀಡಲು ಅಧಿಕಾರಿಗಳು ಉತ್ಸುಕರಾಗಿದ್ದಾರೆ. ಸಿಬ್ಬಂದಿ ಕೊರತೆಯಿರುವ ಕಾರಣದಿಂದಾಗಿ ಖಾಸಗಿ ಸಂಸ್ಥೆಗೆ ಮರ ಗಣತಿ ಕಾರ್ಯ ವಹಿಸಲು ಬಿಬಿಎಂಪಿ ಅರಣ್ಯ ಘಟಕ ನಿರ್ಧರಿಸಿದೆ. ಈ ಬಗ್ಗೆ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಲಿರುವ ಘಟಕ ಅಲಲ್ಇ ಅನುಮೋದನೆ ನಂತರ ಗುತ್ತಿಗೆ ಮುಂದಿನ ಕ್ರಮ ಕೈಗೊಳ್ಳಲಿದೆ.

1 ಕೋಟಿ ರೂ. ವೆಚ್ಚ: ಬಿಬಿಎಂಪಿ ಬಜೆಟ್ನಲ್ಲಿ 2016-17ನೇ ಸಾಲಿನಲ್ಲಿ ಮರ ಗಣತಿ ಸೇರಿ ಇನ್ನಿತರ ಕಾರ್ಯಗಳಿಗಾಗಿ 4 ಕೋಟಿ ರೂ. ಮೀಸಲಿರಿಸಲಾಗಿತ್ತು. ಆದರೆ, ನಿಗದಿತ ಯೋಜನೆಗಳು ಜಾರಿಯಾಗದ ಕಾರಣ ಹಣ ಖರ್ಚಾಗದೆ ಹಾಗೆಯೇ ಉಳಿಸಿದೆ. ಆ ಹಣದಲ್ಲಿ ಮರಗಣತಿ ಮಾಡಲು ನಿರ್ಧರಿಸಿದೆ.
ಬಿಬಿಎಂಪಿ ಅರಣ್ಯ ಘಟಕದಲ್ಲಿ ಸಮರ್ಪಕ ಸಿಬ್ಬಂದಿಯಿಲ್ಲ. ಸಿಬ್ಬಂದಿ ನೇಮಕಕ್ಕೆ ಹಲವು ಬಾರಿ ಪ್ರಸ್ತಾವನೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಹೀಗಾಘಿಯೇ ಮರಗಣತಿಯಂತಹ ಕಾರ್ಯವೂ ಪೂರ್ಣಗೊಂಡಿಲ್ಲ. ವಾರ್ಡ್ನಲ್ಲಿರುವ ಪ್ರತಿ ರಸ್ತೆಗಳಲ್ಲಿರುವ ಮರಗಳ ಲೆಕ್ಕ ಹಾಕಲಾಗುತ್ತದೆ. ಅಲ್ಲದೆ, ರಸ್ತೆಯ ಎಡ ಮತ್ತು ಬಲ ಬದಿಯಲ್ಲಿ ಯಾವೆಲ್ಲ ಮರಗಳಿವೆ. ಅವುಗಳ ವಯಸ್ಸೆಷ್ಟು, ಅವುಗಳ ಸದೃಢತೆ ಏನು ಎಂಬುದನ್ನು ದಾಖಲಿಸಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications