ಮರ ಗಣತಿ ಮಾಡಲು ಕೊನೆಗೂ ಬಿಬಿಎಂಪಿಗೆ ಕಾಲ ಕೂಡಿ ಬಂತು!
ಬೆಂಗಳೂರು, ಮೇ 4: ಮಳೆಗಾಲ ಆರಂಭಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇದೆ ಆದರೆ ನಗರದಲ್ಲಿ ಈಗಾಗಲೇ ಅನೇಕ ಬಾರಿ ವರುಣನ ಆರ್ಭಟ ಕೇಳಿಸಿದೆ.
ಈಗಾಗಲೇ ಸಾಕಷ್ಟು ಮರಗಳು ಧರೆಗುರುಳಿವೆ ಹಾಗಾಗಿ ಆಸ್ತಿಪಾಸ್ತಿಗೆ ಕಂಟಕವಾಗುವುದನ್ನು ತಡೆಯಲು ಬಿಬಿಎಂಪಿ ಮುಂದಾಗಿದೆ. ಚುನಾವಣೆ ಮುಗಿದ ಕೂಡಲೇ ಖಾಸಗಿ ಏಜೆನ್ಸಿ ಮೂಲಕ ಮರಗಳ ಗಣತಿ ನಡೆಸಲು ಯೋಜನೆ ರೂಪಿಸಿದೆ.
ಮರ ಗಣತಿ ಯೋಜನೆ ಹಲವು ವರ್ಷಗಳಿಂದ ಘೋಷಣೆಗಷ್ಟೇ ಸೀಮಿತವಾಗಿತ್ತು. ಅದಕ್ಕೀಗ ಚಾಲನೆ ನೀಡಲು ಅಧಿಕಾರಿಗಳು ಉತ್ಸುಕರಾಗಿದ್ದಾರೆ. ಸಿಬ್ಬಂದಿ ಕೊರತೆಯಿರುವ ಕಾರಣದಿಂದಾಗಿ ಖಾಸಗಿ ಸಂಸ್ಥೆಗೆ ಮರ ಗಣತಿ ಕಾರ್ಯ ವಹಿಸಲು ಬಿಬಿಎಂಪಿ ಅರಣ್ಯ ಘಟಕ ನಿರ್ಧರಿಸಿದೆ. ಈ ಬಗ್ಗೆ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಲಿರುವ ಘಟಕ ಅಲಲ್ಇ ಅನುಮೋದನೆ ನಂತರ ಗುತ್ತಿಗೆ ಮುಂದಿನ ಕ್ರಮ ಕೈಗೊಳ್ಳಲಿದೆ.

1 ಕೋಟಿ ರೂ. ವೆಚ್ಚ: ಬಿಬಿಎಂಪಿ ಬಜೆಟ್ನಲ್ಲಿ 2016-17ನೇ ಸಾಲಿನಲ್ಲಿ ಮರ ಗಣತಿ ಸೇರಿ ಇನ್ನಿತರ ಕಾರ್ಯಗಳಿಗಾಗಿ 4 ಕೋಟಿ ರೂ. ಮೀಸಲಿರಿಸಲಾಗಿತ್ತು. ಆದರೆ, ನಿಗದಿತ ಯೋಜನೆಗಳು ಜಾರಿಯಾಗದ ಕಾರಣ ಹಣ ಖರ್ಚಾಗದೆ ಹಾಗೆಯೇ ಉಳಿಸಿದೆ. ಆ ಹಣದಲ್ಲಿ ಮರಗಣತಿ ಮಾಡಲು ನಿರ್ಧರಿಸಿದೆ.
ಬಿಬಿಎಂಪಿ ಅರಣ್ಯ ಘಟಕದಲ್ಲಿ ಸಮರ್ಪಕ ಸಿಬ್ಬಂದಿಯಿಲ್ಲ. ಸಿಬ್ಬಂದಿ ನೇಮಕಕ್ಕೆ ಹಲವು ಬಾರಿ ಪ್ರಸ್ತಾವನೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಹೀಗಾಘಿಯೇ ಮರಗಣತಿಯಂತಹ ಕಾರ್ಯವೂ ಪೂರ್ಣಗೊಂಡಿಲ್ಲ. ವಾರ್ಡ್ನಲ್ಲಿರುವ ಪ್ರತಿ ರಸ್ತೆಗಳಲ್ಲಿರುವ ಮರಗಳ ಲೆಕ್ಕ ಹಾಕಲಾಗುತ್ತದೆ. ಅಲ್ಲದೆ, ರಸ್ತೆಯ ಎಡ ಮತ್ತು ಬಲ ಬದಿಯಲ್ಲಿ ಯಾವೆಲ್ಲ ಮರಗಳಿವೆ. ಅವುಗಳ ವಯಸ್ಸೆಷ್ಟು, ಅವುಗಳ ಸದೃಢತೆ ಏನು ಎಂಬುದನ್ನು ದಾಖಲಿಸಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications