ಕೊನೆಗೂ ಕಣ್ಣುಬಿಟ್ಟ ಬಿಬಿಎಂಪಿ: ಅನಧಿಕೃತ ಫ್ಲೆಕ್ಸ್ ತೆರವು
ಬೆಂಗಳೂರು, ಜನವರಿ 09: ನಗರದ ಶಾಂತಿನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಹಾಗೂ ಬಿಜೆಪಿ ಮುಖಂಡ ಶ್ರೀಧರ್ ರೆಡ್ಡಿಯವರು ರಸ್ತೆಗೆ ತೊಂದರೆಯಾಗುವಂತೆ ಅಳವಡಿಸಿದ್ದ ಫ್ಲೆಕ್ಸ್ ಗಳನ್ನು ಕೊನೆಗೂ ಬಿಬಿಎಂಪಿ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ.
ಕ್ರಿಸ್ ಮಸ್ ಹಬ್ಬದ ಪೂರ್ವದಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಮದರ್ ತೆರೇಸಾ ರಸ್ತೆ ಟ್ರಾಫಿಕ್ ಸಿಗ್ನಲ್ ಗೆ ಅಡ್ಡಿಯಾಗುವಂತೆ ಸಾರ್ವಜನಿಕರಿಗೆ ಶುಭಾಶಯ ಕೋರುವ ಫ್ಲೆಕ್ಸ್ ನ್ನು ಅಳವಡಿಸಿದ್ದರು. ಈ ಫ್ಲೆಕ್ಸ್ ಅಳವಡಿಸಿದ್ದ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ನಂತರ ಅದೇ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ, ಶ್ರೀಧರ್ ರೆಡ್ಡಿ ಕೂಡ ಹೊಸ ವರ್ಷದ ಶುಭಾಶಯ ಕೋರಿ ಲೈಫ್ ಸ್ಟೈಲ್ ಬಳಿ ಫ್ಲೆಕ್ಸ್ ಒಂದನ್ನು ಸಿಗ್ನಲ್ ಗೆ ಅಡ್ಡಲಾಗಿ ಅಳವಡಿಸಿದ್ದರು. ಇದು ಕೂಡ ಸಾರ್ವಜನಿಕರಿಗೆ ಕಿರಿ ಕಿರಿ ಉಂಟುಮಾಡಿತ್ತು. ಇದೆಲ್ಲಾ ಪ್ರಕರಣಗಳ ಕುರಿತು ಟ್ರಾಫಿಕ್ ಪೊಲೀಸ್ ಹಾಗೂ ಬಿಬಿಎಂಪಿ ಸಿಬ್ಬಂದಿ ಸುಮಾರು ದಿನಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಈ ಬಗ್ಗೆ ಮಾಧ್ಯಮಗಳಲ್ಲಿ ಸತತ ವರದಿ ಪ್ರಕಟಗೊಂಡು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಇದೀಗ ಬಿಬಿಎಂಪಿ ಸಿಬ್ಬಂದಿ ಅಕ್ರಮ ಫ್ಲೆಕ್ಸ್ ನ್ನು ತೆರವುಗೊಳಿಸಿದ್ದಾರೆ. ಇನ್ನು ಮುಂದಾದರೂ ಬಿಬಿಎಂಪಿ ಹಾಗೂ ಜನಪ್ರತಿನಿಧಿಗಳು ಜನರಿಗೆ ತೊಂದರೆಯಾಗದಂತೆ ಫ್ಲೆಕ್ಸ್ ಹಾಗೂ ಬಂಟಿಂಗ್ಸ್ ಗಳನ್ನು ಅಳವಡಿಸುವತ್ತ ಗಮನ ಹರಿಸಬೇಕಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications