ವಿಕ್ಟೋರಿಯಾ ಆಸ್ಪತ್ರೆಗೆ ಕೊನೆಗೂ ಭೇಟಿ ನೀಡಿದ ಮೇಯರ್
ಬೆಂಗಳೂರು, ಸೆಪ್ಟೆಂಬರ್ 9: ಶುಕ್ರವಾರ (ಸೆ. 8) ರಾತ್ರಿ ಮಿನರ್ವ ಸರ್ಕಲ್ ನಲ್ಲಿ ನಡೆದಿದ್ದ ದುರಂತದಲ್ಲಿ ಮೃತಪಟ್ಟ ಸಂಬಂಧಿಗಳಿಗೆ ಸಾಂತ್ವನ ಹೇಳಲು ಬಿಬಿಎಂಪಿ ಮೇಯರ್ ಆಗಿರುವ ಪದ್ಮಾವತಿ ಅವರು ಶನಿವಾರ ಸಂಜೆ ವೇಳೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು.
ಭೇಟಿಯ ವೇಳೆ, ಮೃತರ ಸಂಬಂಧಿಗಳನ್ನು ಸಾಂತ್ವನಗೊಳಿಸಿದ ಅವರು, ಪ್ರತಿಯೊಬ್ಬ ಮೃತರ ಕುಟುಂಬಕ್ಕೆ 5 ಲಕ್ಷ ರು. ಪರಿಹಾರ ನೀಡುವುದಾಗಿ ಘೋಷಿಸಿದರಲ್ಲದೆ, ಮೃತರ ಕುಟುಂಬದಿಂದ ತಲಾ ಒಬ್ಬರಿಗೆ ಬಿಬಿಎಂಪಿಯಲ್ಲಿ ಉದ್ಯೋಗ ನೀಡುವ ಭರವಸೆಯನ್ನೂ ನೀಡಿದರು.

ಶುಕ್ರವಾರ (ಸೆ. 8) ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮಿನರ್ವ ಸರ್ಕಲ್ ನ ಬಳಿ ಮರವೊಂದು ಕಾರೊಂದರ ಮೇಲೆ ಉರುಳಿದ ಪರಿಣಾಮ ಕಾರಿನಲ್ಲಿದ್ದ ರಮೇಶ್, ಭಾರತಿ ಹಾಗೂ ಜಗದೀಶ್ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಕಾರಿನಲ್ಲಿದ್ದ ಉಳಿದ ಇಬ್ಬರನ್ನು ಸ್ಥಳೀಯರು ಪಾರು ಮಾಡಿದ್ದರು.
ಶನಿವಾರ ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತರ ಶವಪರೀಕ್ಷೆ ನಡೆಸಲಾಯಿತು. ಆಗ, ಮೃತರ ಸಂಬಂಧಿಗಳು ನಗರದ ಮೇಯರ್ ಆಸ್ಪತ್ರೆಗೆ ಬಂದ ನಂತರವೇ ತಾವು ಶವಗಳನ್ನು ಪಡೆಯುವುದಾಗಿ ಹಠ ಹಿಡಿದರು. ಅಲ್ಲದೆ, ತಮ್ಮ ಕುಟುಂಬದ ಸದಸ್ಯರ ಸಾವಿಗೆ ಬಿಬಿಎಂಪಿಯೇ ನೇರ ಹೊಣೆ ಎಂದು ಆರೋಪಿಸಿದ್ದರು.
ಇದು ಮಧ್ಯಾಹ್ನದ ಹೊತ್ತಿಗೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಯಿತು. ಇದನ್ನು ತಿಳಿದ ಪದ್ಮಾವತಿ ಅವರು ಸಂಜೆ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಧಾವಿಸಿ, ಬಂದು ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿದರು.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications