ಬೆಂಗಳೂರಿನಿಂದ ಕೇರಳಕ್ಕೆ ಹೊರಟಿದ್ದ ಖಾಸಗಿ ಬಸ್ ಹೈಜಾಕ್!
ಬೆಂಗಳೂರು, ಏಪ್ರಿಲ್ 28: ನಗರದ ಕಲಾಸಿಪಾಳ್ಯದಿಂದ ಕೇರಳಕ್ಕೆ ಹೊರಟಿದ್ದ ಖಾಸಗಿ ಬಸ್ವೊಂದನ್ನು ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಹೈಜಾಕ್ ಮಾಡಿದ್ದರು.
ಬೆಂಗಳೂರಿನ ಕಲಾಸಿ ಪಾಳ್ಯ ಬಸ್ ನಿಲ್ದಾಣದಿಂದ ಹೊರಟಿದ್ದ ಲಾಮಾ ಟ್ರಾವಲ್ಸ್ ನ KA 01 AG 636 ನಂಬರ್ನ ಬಸ್ ಅನ್ನು ಏಳು ಜನ ದುಷ್ಕರ್ಮಿಗಳು ಹೈಜಾಕ್ ಮಾಡಲು ಪ್ರಯತ್ನಿಸಿದ್ದು, ಪೊಲೀಸರ ತುರ್ತು ಕಾರ್ಯಾಚರಣೆಯಿಂದಾಗಿ ಅಗಬಹುದಾಗಿದ್ದ ದುರಂತ ತಪ್ಪಿದೆ.
ಪೊಲೀಸರ ಮಾಹಿತಿಯಂತೆ ಹೈಜಾಕ್ ಆಗಿದ್ದ ಬಸ್ ನಲ್ಲಿ ಸುಮಾರು 42 ಮಂದಿ ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿನ ಕಲಾಸಿ ಪಾಳ್ಯದಿಂದ ಕೇರಳಕ್ಕೆ ಹೊರಟಿತ್ತು. ಈ ವೇಳೆ 2 ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಬಸ್ ಅನ್ನು ಹಿಂಬಾಲಿಸಿದ್ದು, ಮೈಸೂರು ಮುಖ್ಯ ರಸ್ತೆಯ ಬಳಿ ಬಸ್ ಅನ್ನು ಅಡ್ಡಗಟ್ಟಿದ್ದಾರೆ.

ಈ ವೇಳೆ ಬಸ್ ನೊಳಗೆ ಬಂದ ದುಷ್ಕರ್ಮಿಗಳು ತಾವು ಪೊಲೀಸರು ಎಂದು ಹೇಳಿ, ಬಸ್ ನ ದಾಖಲಾತಿ ಕೊಡುವಂತೆ ಹೇಳಿದ್ದಾರೆ. ಈ ವೇಳೆ ಸಿಬ್ಬಂದಿ ವಿರುದ್ಧ ವಾಗ್ವಾದ ನಡೆಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಕೂಡಲೇ ಬಸ್ ಚಾಲಕನನ್ನು ಬೈಕ್ ನಲ್ಲಿ ಕೂರಿಸಿಕೊಂಡ ಓರ್ವ ದುಷ್ಕರ್ಮಿ ಅಲ್ಲಿಂದ ತೆರಳುತ್ತಾನೆ. ಮತ್ತೋರ್ವ ಬಸ್ ತಾನೇ ಚಲಾಯಿಸಿಕೊಂಡು ರಾಜ ರಾಜೇಶ್ವರಿ ನಗರದ ಪಟ್ಟಣಗೆರೆ ಬಳಿ ಇರುವ ಗೋಡೌನ್ ಗೆ ಹೋಗುತ್ತಾನೆ. ಒಟ್ಟು 7 ಮಂದಿಯ ತಂಡ ಈ ಕೃತ್ಯವೆಸಗಿದೆ ಎಂದು ಹೇಳಲಾಗಿದೆ.
ಈ ವೇಳೆ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಉದ್ದೇಶಿಸಿ ತಪ್ಪಿಸಿಕೊಂಡು ಹೋಗುವ ಪ್ರಯತ್ನ ಮಾಡಬೇಡಿ, ಹಾಗೇನಾದರೂ ಆದರೆ ನಿಮ್ಮ ಜೀವಕ್ಕೇ ಅಪಾಯ ಎಂದು ಮತ್ತೋರ್ವ ಎಚ್ಚರಿಕೆ ನೀಡಿದ್ದಾನೆ. ದುಷ್ಕರ್ಮಿಗಳಿಂದ ಬಸ್ ಅಪಹರಣವಾಗುತ್ತಲೇ ಪ್ರಯಾಣಿಕರು ಭಯಭೀತಗೊಂಡಿದ್ದು, ಕೆಲ ಕಾಲ ಆತಂಕದಲ್ಲೇ ಸಮಯ ದೂಡಿದ್ದಾರೆ.
ಈ ವೇಳೆ ದುಷ್ಕರ್ಮಿಗಳ ಕಣ್ಣುತಪ್ಪಿಸಿ ಓರ್ವ ಪ್ರಯಾಣಿಕ ಪೊಲೀಸರಿದೆ ವಿಷಯ ಮುಟ್ಟಿಸಿದ್ದು, ವಿಚಾರ ತಿಳಿದ ಕೂಡಲೇ ಸುಮಾರು 30 ಪೊಲೀಸರ ತಂಡ ಸ್ಥಳಕ್ಕಾಗಮಿಸಿ ಬಸ್ ಅನ್ನು ಸುತ್ತುವರೆದಿದೆ. ಪೊಲೀಸರು ಆಗಮಿಸುತ್ತಿದ್ದಂತೆಯೇ ನಾಲ್ಕು ಮಂದಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ತನಿಖೆ ನಡೆಸುತ್ತಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ









Click it and Unblock the Notifications