ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಂಡ ಕಟ್ಟುವ ಭಯಕ್ಕಾದರೂ ಧೂಮಪಾನ ತ್ಯಜಿಸಿ!

|
Google Oneindia Kannada News

ಬೆಂಗಳೂರು, ಮೇ 29: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಪ್ರಸ್ತುತ ಇರುವ ದಂಡದ ಮೊತ್ತವನ್ನು 200 ರೂ. ನಿಂದ 2000 ರೂ. ಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಲಹೆ ಮಾಡಿದೆ ಎಂದು ಬೆಂಗಳೂರು ನಗರ ಜಿಲ್ಲಾ ಕ್ಷಯರೋಗ ಮತ್ತು ತಂಬಾಕು ನಿಯಂತ್ರಣಾಧಿಕಾರಿ ಡಾ.ಜಿ ಎ ಶ್ರೀನಿವಾಸ್ ಅವರು ಹೇಳಿದರು.

ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ನ ಸಹಯೋಗದೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತ ಒಂದು ದಿನದ ಮಾಧ್ಯಮ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಹುಷಾರ್, ಬೇಕಾಬಿಟ್ಟಿ ಧಮ್ ಹೊಡೆದರೆ 2 ಸಾವಿರ ದಂಡ ತೆರಬೇಕಾದೀತುಹುಷಾರ್, ಬೇಕಾಬಿಟ್ಟಿ ಧಮ್ ಹೊಡೆದರೆ 2 ಸಾವಿರ ದಂಡ ತೆರಬೇಕಾದೀತು

ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಕೋಟ್ಪಾ ಎಂದೇ ಕರೆಯಲಾಗುವ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಹಾಗೂ ವಾಣಿಜ್ಯ ಮತ್ತು ವ್ಯಾಪಾರ, ಉತ್ಪಾದನೆ, ಪೂರೈಕೆ ಮತ್ತು ವಿತರಣೆ) ನಿಯಂತ್ರಣಾ ಕಾಯದೆ-2003ಕ್ಕೆ ತಿದ್ದುಪಡಿ ತರಲು ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಕಡಿವಾಣ ಹಾಕಲುಪೂರಕ ವಾತಾವರಣ ಸೃಷ್ಟಿಸುವ ಈ ಪ್ರಸ್ತಾವನೆಯು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಪರಿಶೀಲನಾ ಹಂತದಲ್ಲಿದೆ ಎಂದು ಅವರು ತಿಳಿಸಿದರು.

ಜಾಗೃತಿ ಅಭಿಯಾನ

ಜಾಗೃತಿ ಅಭಿಯಾನ

ವಿಶ್ವ ತಂಬಾಕು ರಹಿತ ದಿನವಾದ ಮೇ 31 ರಂದು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ನಾಲ್ಕೂ ತಾಲ್ಲೂಕು ಆಸ್ಪತ್ರೆಗಳಲ್ಲಿ, ಎಲ್ಲಾ ಎಂಟು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಒಂದು ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಧೂಮಪಾನ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಅಲ್ಲದೆ, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳು ಜಾಥಾ ನಡೆಸಲಿದ್ದಾರೆ. ಅಂತೆಯೇ, ಧೂಮಪಾನ ಮಾಡುವವರನ್ನು ಕಂಡಾಗ ಗುಲಾಬಿ ಹೂವು ನೀಡಿ ಧೂಮಪಾನದಿಂದ ದೂರವಿರಿ ಎಂಬ ಸಂದೇಶ ಸಾರಲು ಯೋಜಿಸಲಾಗಿದೆ ಎಂದು ಡಾ ಶ್ರೀನಿವಾಸ್ ಅವರು ವಿವರಿಸಿದರು.

ಸಿಗರೇಟು ಮತ್ತು ಮತ್ತು ಇತರೆ ತಂಬಾಕು ಪದಾರ್ಥಗಳು ಕೇವಲ ಅವುಗಳನ್ನು ಸೇವಿಸುವ ಜನರ ಮೇಲೆ ಮಾತ್ರವಲ್ಲ ಇತರೆ ಜನಸಾಮಾನ್ಯರ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳನ್ನು ಒಮ್ಮೆ ಅವಲೋಕಿಸಿದರೆ ಲಾಭಕ್ಕಿಂತಲೂ ನಷ್ಟವೇ ಹೆಚ್ಚು ಎಂಬುದು ಸುಸ್ಪಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಆಯುಷ್ಯವನ್ನು ಕಡಿತಗೊಳಿಸುವ ಸಿಗರೇಟು ಮತ್ತು ಇತರೆ ತಂಬಾಕು ಪದಾರ್ಥಗಳ ತಯಾರಿಕಾ ಕಂಪನಿಗಳಿಂದಲೂ ಯಾವುದೇ ಸಾಮುದಾಯಿಕ ಅಭಿವೃದ್ಧಿ ನಿಧಿ ಸ್ವೀಕರಿಸಬಾರದು ಎಂದು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಧೂಮಪಾನ ತ್ಯಜಿಸಲು ನಿಕೋಟೀನ್ ಬದಲಿ ಚಿಕಿತ್ಸೆ ಧೂಮಪಾನ ತ್ಯಜಿಸಲು ನಿಕೋಟೀನ್ ಬದಲಿ ಚಿಕಿತ್ಸೆ

ಪರಿಸರಕ್ಕೂ ಹಾನಿ

ಪರಿಸರಕ್ಕೂ ಹಾನಿ

ಇದೇ ಸಂದರ್ಭದಲ್ಲಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತ ವಿಶೇಷ ಉಪನ್ಯಾನ ನೀಡಿದ ಜಿಲ್ಲಾ ಆರೋಗ್ಯ ಸಲಹೆಗಾರ ಡಾ ಎಲ್ ಎಸ್ ಚಂದ್ರಕಿರಣ್ ಅವರು ಮಾತನಾಡಿ ಭಾರತದಲ್ಲಿ, ಅದರಲ್ಲೂ ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ಮತ್ತು ಪಿರಿಯಾಪಟ್ಟಣ ತಾಲ್ಲೂಕು ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ, ತಂಬಾಕು ಬೆಳೆ ಬೆಳೆಯಲಾಗುತ್ತದೆ. ತಂಬಾಕು ಬೆಳೆಗಳಲ್ಲಿ ಎಪ್ಪತ್ತು ಪ್ರಬೇಧಗಳಿದ್ದು, ಈ ಪೈಕಿ ವರ್ಜಿನಿಯಾ ಟೊಬ್ಯಾಕೋ ಎಂಬ ತಳಿ ಅತ್ಯಂತ ಅಪಾಯಕಾರಿಯಾಗಿದೆ. ಒಂದೆಡೆ ತಂಬಾಕು ಬೆಳೆ ತಾನು ಬೆಳೆದ ಪ್ರದೇಶದ ಫಲವತ್ತತೆಯನ್ನೇ ನಾಶಪಡಿಸಿ ಆ ಪ್ರದೇಶವನ್ನು ಮರಳುಗಾಡನ್ನಾಗಿಸುತ್ತದೆ. ಮತ್ತೊಂದೆಡೆ ಒಂದು ಕೆ ಜಿ ತಂಬಾಕು ಎಲೆ ಸಂಸ್ಕರಿಸಲು ಐದರಿಂದ ಎಂಟು ಕೆ ಜಿ ಉರುವಲು ಸೌದೆ ಬೇಕಾಗುತ್ತದೆ. ಒಟ್ಟಾರೆ ವಾಣಿಜ್ಯ ಬೆಳೆ ಎಂದೇ ಪರಿಗಣಿಸಲ್ಪಡುವ ತಂಬಾಕು ತನ್ನ ಈ ಗುಣ-ಲಕ್ಷಣಗಳಿಂದ ಪರಿಸರದ ಶತ್ರು ಎನಿಸಿದೆ ಎಂದರು.

ಕರ್ನಾಟಕದಲ್ಲೇ ತಂಬಾಕು ಸೇವನೆ ಅತೀ ಹೆಚ್ಚು

ಕರ್ನಾಟಕದಲ್ಲೇ ತಂಬಾಕು ಸೇವನೆ ಅತೀ ಹೆಚ್ಚು

ಭಾರತದಲ್ಲಿ 27.4 ಕೋಟಿ ಜನರು ತಂಬಾಕನ್ನು ವಿವಿಧ ರೂಪದಲ್ಲಿ ಸೇವಿಸುತ್ತಿದ್ದಾರೆ. ತಂಬಾಕು ಸೇವನೆಯಿಂದ ಪ್ರತಿದಿನ 2700 ಮಂದಿ ಸಾವನ್ನಪ್ಪುತ್ತಿದ್ದಾರೆ. ದುರಂತ ಎಂದರೆ ಇಡೀ ರಾಷ್ಟ್ರದಲ್ಲೇ ಅತೀ ಹೆಚ್ಚು ತಂಬಾಕು ಸೇವಿಸುವ ರಾಜ್ಯ ಕರ್ನಾಟಕವಾಗಿದೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷ ಜನರು ತಂಬಾಕಿನಿಂದ ಉಂಟಾಗುವ ವಿವಿಧ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿ ವರ್ಷ 35000 ಮಂದಿ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ.

ಇದಕ್ಕೆ ಕಾರಣ ಒಂದು ತಂಬಾಕು ಎಲೆಯಲ್ಲಿ ನಾಲ್ಕು ಸಾವಿರ ರಾಸಾಯನಿಕಗಳಿರುತ್ತವೆ. ಅದರಲ್ಲಿ ನಾಲ್ಕು ನೂರು ಕಾಸ್ಮೋಜೆನಿಕ್ ರಾಸಾಯಕನಿಕಗಳು ಎಂಬ ಆತಂಕಕಾರಿ ಅಂಕಿ-ಅಂಶಗಳನ್ನು ಡಾ ಚಂದ್ರಕಿರಣ್ ಅವರು ತಮ್ಮ ಉಪನ್ಯಾಸದಲ್ಲಿ ಹೊರಹಾಕಿದರು.

ಧೂಮಪಾನ ತ್ಯಜಿಸಲು ನಿಕೋಟೀನ್ ಬದಲಿ ಚಿಕಿತ್ಸೆ ಧೂಮಪಾನ ತ್ಯಜಿಸಲು ನಿಕೋಟೀನ್ ಬದಲಿ ಚಿಕಿತ್ಸೆ

ಜೀವಿತಾವಧಿಯ ಹನ್ನೊಂದು ನಿಮಿಷ ಕಡಿತಗೊಳಿಸುವ ಒಂದು ಸಿಗರೇಟ್ !

ಜೀವಿತಾವಧಿಯ ಹನ್ನೊಂದು ನಿಮಿಷ ಕಡಿತಗೊಳಿಸುವ ಒಂದು ಸಿಗರೇಟ್ !

ಮಾನವನ ಏಕಾಗ್ರತೆಯನ್ನೂ ಕೊಲ್ಲುವ ತಂಬಾಕು ದಿನಕಳೆದಂತೆ ಮಾನವನನ್ನೇ ಬಲಿತೆಗೆದುಕೊಳ್ಳುತ್ತಿದೆ. ಕೇವಲ ಒಂದು ಸಿಗರೇಟ್ ಸೇವನೆಯಿಂದ ನಾವು ನಮ್ಮ ಜೀವಿತಾವಧಿಯ ಹನ್ನೊಂದು ನಿಮಿಷಗಳನ್ನು ಕಡಿತಗೊಳಿಸಿಕೊಳ್ಳುತ್ತಿದ್ದೇವೆ. ಮಾದಕ ವಸ್ತು ಎನಿಸಿರುವ ಕೊಕೇನ್ ಸೇವನೆ 14 ಸೆಕೆಂಡುಗಳಲ್ಲಿ ಮಾನವನ ಮೆದುಳು ಪ್ರವೇಶಿಸಿದರೆ, ನಿಕೋಟಿನ್ ಅಂಶ ಒಳಗೊಂಡ ಬೀಡಿ ಮತ್ತು ಸಿಗರೇಟ್ ಸೇವಿಸುವ, ಹೊಗೆಸೊಪ್ಪು ಮತ್ತು ನಶ್ಯೆ ಬಳಸುವ ವ್ಯಕ್ತಿಯ ಮೆದುಳನ್ನು ಕೇವಲ ಏಳು ಸೆಕೆಂಡ್‌ಗಳಲ್ಲೇ ಪ್ರವೇಶಿಸುತ್ತದೆ ಎಂಬ ಅಂಶವನ್ನು ಬಹಿರಂಗಪಡಿಸಿದರು.

ವಿಶ್ವ ತಂಬಾಕು ರಹಿತ ದಿನ: ತಂಬಾಕು ನಿಮ್ಮ ಬದುಕು ಕಸಿಯದಿರಲಿ...ವಿಶ್ವ ತಂಬಾಕು ರಹಿತ ದಿನ: ತಂಬಾಕು ನಿಮ್ಮ ಬದುಕು ಕಸಿಯದಿರಲಿ...

ನಿಷ್ಕ್ರಿಯರಿಗೇ ಹೆಚ್ಚು ಅಪಾಯಕಾರಿ ?

ನಿಷ್ಕ್ರಿಯರಿಗೇ ಹೆಚ್ಚು ಅಪಾಯಕಾರಿ ?

ಧೂಮಪಾನ ಮಾಡುವವರು ತಮ್ಮ ಶ್ವಾಸಕೋಶದಲ್ಲಿ ಹೊಗೆಯನ್ನು ಎರಡೂವರೆ ನಿಮಿಷ ಇಟ್ಟುಕೊಂಡರೆ, ಅವರ ಸುತ್ತ-ಮುತ್ತ ಸುಳಿಯುವ ನಿಷ್ಕ್ರಿಯ ಧೂಮಪಾನಿಗಳು (ಪ್ಯಾಸಿವ್ ಸ್ಮೋಕರ್ ಸ್) ಮೂರೂವರೆಯಿಂದ ನಾಲ್ಕು ನಿಮಿಷಗಳ ಕಾಲ ಇಟ್ಟುಕೊಳ್ಳುತ್ತಾರೆ. ತಾವು ಮಾಡದ ತಪ್ಪಿಗೆ ನಿಷ್ಕ್ರಿಯ ಧೂಮಪಾನಿಗಳು ಕ್ಯಾನ್ಸರ್‌ನಂತಹ ಮಾರಣಾಂತಿಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಂಬಾಕಿನ ಮೂಲೋತ್ಪಾಟನೆಯಾಗಬೇಕಿದೆ.
ಅದಕ್ಕಾಗಿ ತಂಬಾಕು ಬೆಳೆಯುವ ಪ್ರದೇಶದಲ್ಲಿ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು ಎಂಬುದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಇದರಿಂದ ರೈತರ ಹಿತದ ಜೊತೆಗೆ ಜನಸಾಮಾನ್ಯರ ಆರೋಗ್ಯ ರಕ್ಷಣೆಯೂ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ ನಿಜಾಮುದ್ದೀನ್ ಮದಿನಿ, ಕುಟುಂಬ ಕಲ್ಯಾಣಾಧಿಕಾರಿ ಡಾ ಮಮತಾ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ ನದೀಮ್ ಅಹಮದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ಶಾಖೆಯ ಉಪ ನಿರ್ದೇಶಕ ಡಿ ಪಿ ಮುರಳೀಧರ್ ಅವರೂ ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು (ಕೃಪೆ: ಕರ್ನಾಟಕ ವಾರ್ತೆ) .

English summary
Fine amount for smoking in public place is increased to Rs.200 to Rs.2000, told Bengaluru city district TB and tobacco controlling officer Dr.G A Srinivas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X