ಕಸ ಬೇರ್ಪಡಿಸದವರಿಗೆ ಭಾರೀ ದಂಡ : ಮೇಯರ್ ಎಚ್ಚರಿಕೆ
ಬೆಂಗಳೂರು, ಡಿ. 4: ನಗರದಲ್ಲಿ ಕಸದ ಸಮಸ್ಯೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಕಸವನ್ನು ಬೇರ್ಪಡಿಸಿ ನೀಡದಿರುವವರು ಹಾಗೂ ರಸ್ತೆಗೆ ಎಸೆಯುವವರಿಗೆ ಭಾರೀ ಪ್ರಮಾಣದ ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ಮೇಯರ್ ಎನ್. ಶಾಂತಕುಮಾರಿ ಸೂಚಿಸಿದ್ದಾರೆ. [ಒನ್ಇಂಡಿಯಾಕ್ಕೆ ಶಾಂತಕುಮಾರಿ ಸಂದರ್ಶನ]
ಕಸವನ್ನು ಮನೆಯವರೇ ಬೇರ್ಪಡಿಸಿದರೆ ಮಾತ್ರ ಸಮಸ್ಯೆ ಪರಿಹಾರವಾಗುತ್ತದೆ. ಆದ್ದರಿಂದ ಹಸಿ ಹಾಗೂ ಒಣ ಕಸವನ್ನು ಬೇರ್ಪಡಿಸುವುದು ಕಡ್ಡಾಯ. ಈ ನಿಯಮ ಪಾಲಿಸದವರಿಗೆ ಭಾರೀ ದಂಡ ವಿಧಿಸಬೇಕು. ಎಲ್ಲ ವಾರ್ಡ್ಗಳ ಸದಸ್ಯರೂ ಇದಕ್ಕೆ ಸಹಕಾರ ನೀಡಬೇಕೆಂದು ಅವರು ತಿಳಿಸಿದರು. [ಬೆಂಗಳೂರು ಕಸಕ್ಕೆ ಮಾಗಡಿ ಗ್ರಾಮಸ್ಥರ ವಿರೋಧ]
ಒಣ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸೋಷಿಯಲ್ ವೆಂಚರ್ಸ್ ಪಾರ್ಟನರ್ಸ್ ಸಂಸ್ಥೆ ನೀಡಿದ ವರದಿ ಪಡೆದ ಶಾಂತಕುಮಾರಿ, ಕಸ ನಿರ್ವಹಣೆ ವಿಷಯದಲ್ಲಿ ಬಿಬಿಎಂಪಿ ಜನರ ನಂಬಿಕೆ ಕಳೆದುಕೊಂಡಿದೆ. ಮಂಡೂರಿನ ಜನರಿಗೆ ಮುಖ್ಯಮಂತ್ರಿಗಳೇ ಬಂದು ಭರವಸೆ ನೀಡಬೇಕಾಯಿತು ಎಂದು ಖೇದ ವ್ಯಕ್ತಪಡಿಸಿದರು. [ಮಾತು ಉಳಿಸಿಕೊಂಡ ಸರ್ಕಾರ]

ಒಣ ತ್ಯಾಜ್ಯದಿಂದ ಆದಾಯ: ಹಣ ಗಳಿಕೆಗೆ ಹತ್ತು ಮಾರ್ಗ ಹುಡುಕುವ ಬೆಂಗಳೂರು ನಿವಾಸಿಗಳಿಗೆ ಕಸದಿಂದಲೂ ಆದಾಯ ಗಳಿಕೆ ಸಾಧ್ಯ ಎಂದು ಸೋಷಿಯಲ್ ವೆಂಚರ್ಸ್ ಸಂಸ್ಥೆ ತಿಳಿಸಿದೆ.
ಈ ಕುರಿತು ಸಂಸ್ಥೆಯು ಮೇಯರ್ ಅವರಿಗೆ ಸಲ್ಲಿಸಿದ ವರದಿಯಲ್ಲಿ ವಿವರವಾಗಿ ತಿಳಿಸಿದೆ. ಒಣ ತ್ಯಾಜ್ಯ ಮರುಬಳಕೆಯಿಂದ ಆದಾಯ ಗಳಿಕೆ ಸಾಧ್ಯ. ಆದರೆ ಇದಕ್ಕೆ ಕಸವನ್ನು ಮೂಲದಲ್ಲಿಯೇ ಬೇರ್ಪಡಿಸುವುದು ಅತ್ಯಂತ ಮುಖ್ಯ. ಭಾರೀ ತ್ಯಾಜ್ಯ ಉತ್ಪಾದಿಸುವ ಸಂಸ್ಥೆಗಳು ತಾವೇ ಕಸ ಸಂಸ್ಕರಣೆ ಘಟಕ ಸ್ಥಾಪಿಸಬೇಕು. ಒಣ ಕಸ ಸಂಗ್ರಹಣೆ, ಸಂಸ್ಕರಣೆ, ರಿ ಸೈಕ್ಲಿಂಗ್ ಪಾರ್ಕ್ ನಿರ್ಮಿಸಬೇಕು ಎಂಬುದು ಸೇರಿದಂತೆ ಹಲವು ಸೂಚನೆಗಳನ್ನು ನೀಡಲಾಗಿದೆ. [ಬಿಬಿಎಂಪಿಯಿಂದ 4 ಕಡೆ ತ್ಯಾಜ್ಯ ವಿಲೇವಾರಿ ಘಟಕ]
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications