ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ವಿರುದ್ಧ ಎಫ್ಐಆರ್
ಬೆಂಗಳೂರು, ಮೇ 24 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮಂಜುನಾಥ ರೆಡ್ಡಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನ್ಯಾಯಾಲಯದ ಆದೇಶದಂತೆ ಮೈಕೋ ಲೇಔಟ್ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಬಿಬಿಎಂಪಿ ಚುನಾವಣೆ ವೇಳೆ ಸೀರೆ ಹಂಚಲಾಗುತ್ತಿದೆ ಎಂದು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿತ್ತು. ದೂರಿನ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯ ಎಫ್ಐಆರ್ ದಾಖಲು ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು. [ಮಂಜುನಾಥ ರೆಡ್ಡಿ ವ್ಯಕ್ತಿ ಚಿತ್ರ]

ಪಾಪಣ್ಣ ಎಂಬುವವರು ಮೇಯರ್ ಮಂಜುನಾಥ ರೆಡ್ಡಿ ವಿರುದ್ಧ ಹಲ್ಲೆ ಮತ್ತು ಜಾತಿ ನಿಂದನೆ ಆರೋಪ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಪಾಪಣ್ಣ ಅವರ ಸೀರೆ ಅಂಗಡಿ ಮೇಲೆ ಮಂಜುನಾಥ್ ರೆಡ್ಡಿ ಮತ್ತು ಬೆಂಬಲಿಗರು ದಾಳಿ ನಡೆಸಿದ್ದರು. ಈ ವೇಳೆ ಪಾಪಣ್ಣ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಲಾಗಿದೆ ಎಂಬುದು ಆರೋಪ. [ಟ್ರಾಫಿಕ್ ಮುಕ್ತ ನಗರಕ್ಕೆ ರೆಡ್ಡಿ ಸೂತ್ರ]
'ಮಂಜುನಾಥ ರೆಡ್ಡಿ ಅವರ ವಿರುದ್ಧ ಪೊಲೀಸರಿಗೆ ದೂರು ಕೊಡಲು ಹೋದರೆ ತೆಗೆದುಕೊಂಡಿಲ್ಲ. ಕೊನೆ ಹಂತದ ಹೋರಾಟವಾಗಿ ನ್ಯಾಯಾಲಯಕ್ಕೆ ದೂರು ಕೊಟ್ಟಿದ್ದೇನೆ. ಮಂಜುನಾಥ ರೆಡ್ಡಿ ಅವರ ಬೆಂಬಲಿಗರು ನನಗೆ ಹಲವು ಬಾರಿ ಜೀವ ಬೆದರಿಕೆಯನ್ನು ಹಾಕಿದ್ದಾರೆ' ಎಂದು ಪಾಪಣ್ಣ ಮಾಧ್ಯಮಗಳಿಗೆ ತಿಳಿಸಿದ್ದಾರೆ. [ಬೆಂಗಳೂರಿಗರು ಜಾತ್ಯತೀತರಾಗುವುದು ಇನ್ನೂ ಬಹುದೂರ!]
ಮೈಕೋ ಲೇಔಟ್ ಪೊಲೀಸರು ದೂರು ಸ್ವೀಕರಿಸದ ಕಾರಣ ಎಸಿಎಂಎಂ ನ್ಯಾಯಾಲಯಕ್ಕೆ ಪಾಪಣ್ಣ ದೂರು ಕೊಟ್ಟಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಎಫ್ಐಆರ್ ದಾಖಲು ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿತ್ತು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications